<p><strong>ಹುಲಸೂರ</strong>: ಸಮಾಜದಲ್ಲಿ ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು. ಇಂಥ ವೃತ್ತಿಯಲ್ಲಿ ಹಲವು ವರ್ಷಗಳ ಕಾಲ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದುತ್ತಿರುವ ಶಿಕ್ಷಕ ಗದಗಯ್ಯ ಮಠಪತಿ ಬದುಕು ಸುಖಮಯವಾಗಿರಲಿ’ ಎಂದು ಸಾಯಗಾಂವನ ಶಿವಾನಂದ ಸ್ವಾಮೀಜಿ ಶುಭ ಹಾರೈಸಿದರು.</p>.<p>ಪಟ್ಟಣದ ಗುರುಬಸವೇಶ್ವರ ಸಂಸ್ಥಾನ ಮಠದಲ್ಲಿ ಶುಕ್ರವಾರ ನಡೆದ ಜೆ.ಬಿ.ಕೆ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಗದಗಯ್ಯ ಮಠಪತಿ ಅವರ ಹುದ್ದೆಯ ನಿವೃತ್ತಿ ಸಮಾರಂಭದಲ್ಲಿ ಮಾತನಾಡಿದರು.</p>.<p>‘ನಿಮ್ಮ ಕೈಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಅಧ್ಯಯನ ಮಾಡಿ ಸಮಾಜದಲ್ಲಿ ಉತ್ತಮ ಸ್ಥಾನಗಳಲ್ಲಿ ಕಾರ್ಯನಿರ್ವಹಿಸುತ್ತಿರುತ್ತಾರೆ. ಅವರು ಎಷ್ಟೇ ಎತ್ತರಕ್ಕೆ ಬೆಳೆದರೂ ಪ್ರಾಥಮಿಕ ಶಾಲೆಯಲ್ಲಿ ನೀವು ಕಲಿಸಿದ ಮೌಲ್ಯ, ಕಲಿಸಿದ ಪಾಠವನ್ನು ಜೀವನ ಪರ್ಯಂತ ಮರೆಯುವುದಿಲ್ಲ’ ಎಂದರು.</p>.<p>ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಮಲ್ಲಪ್ಪಾ ಧಬಾಲೆ, ಜೇಬಿಕೆ ಶಾಲಾ ಸಂಸ್ಥೆಯ ನಿರ್ದೇಶಕ ಬಾಬುರಾವ್ ಗೌಡಗಾವೆ ಮಾತನಾಡಿದರು.</p>.<p>ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಲತಾ ಹಾರಕೂಡೆ, ಸರ್ಕಾರಿ ನ್ಯಾಯವಾದಿ ಬಾಲಾಜಿ ಅದೆಪ್ಪ ಸೇರಿ ಮಕ್ಕಳು ತಮ್ಮ ಅನಿಸಿಕೆ ವ್ಯಕ್ತಪಡಿಸಿದ್ದರು. ಶಾಲಾ ಮಕ್ಕಳು ನೃತ್ಯ ಪ್ರದರ್ಶನ ಮಾಡಿದರು.</p>.<p>ಶಿವಲಿಂಗಯ್ಯ ಸ್ವಾಮಿ ಕನ್ನಡೆ, ವಿಶ್ವನಾಥ್ ಕಾಡಾದಿ, ಬಾಬುರಾವ್ ಮಾಲೋದೆ, ಗೋವಿಂದರಾವ್ ಸೋಮಾಂಶೀ ಸೇರಿ ಹಲವರು ಉಪಸ್ಥಿತರಿದ್ದರು. ರಾಜಕುಮಾರ ನೀಡೋದೆ ಸ್ವಾಗತಿಸಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಲಸೂರ</strong>: ಸಮಾಜದಲ್ಲಿ ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು. ಇಂಥ ವೃತ್ತಿಯಲ್ಲಿ ಹಲವು ವರ್ಷಗಳ ಕಾಲ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದುತ್ತಿರುವ ಶಿಕ್ಷಕ ಗದಗಯ್ಯ ಮಠಪತಿ ಬದುಕು ಸುಖಮಯವಾಗಿರಲಿ’ ಎಂದು ಸಾಯಗಾಂವನ ಶಿವಾನಂದ ಸ್ವಾಮೀಜಿ ಶುಭ ಹಾರೈಸಿದರು.</p>.<p>ಪಟ್ಟಣದ ಗುರುಬಸವೇಶ್ವರ ಸಂಸ್ಥಾನ ಮಠದಲ್ಲಿ ಶುಕ್ರವಾರ ನಡೆದ ಜೆ.ಬಿ.ಕೆ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಗದಗಯ್ಯ ಮಠಪತಿ ಅವರ ಹುದ್ದೆಯ ನಿವೃತ್ತಿ ಸಮಾರಂಭದಲ್ಲಿ ಮಾತನಾಡಿದರು.</p>.<p>‘ನಿಮ್ಮ ಕೈಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಅಧ್ಯಯನ ಮಾಡಿ ಸಮಾಜದಲ್ಲಿ ಉತ್ತಮ ಸ್ಥಾನಗಳಲ್ಲಿ ಕಾರ್ಯನಿರ್ವಹಿಸುತ್ತಿರುತ್ತಾರೆ. ಅವರು ಎಷ್ಟೇ ಎತ್ತರಕ್ಕೆ ಬೆಳೆದರೂ ಪ್ರಾಥಮಿಕ ಶಾಲೆಯಲ್ಲಿ ನೀವು ಕಲಿಸಿದ ಮೌಲ್ಯ, ಕಲಿಸಿದ ಪಾಠವನ್ನು ಜೀವನ ಪರ್ಯಂತ ಮರೆಯುವುದಿಲ್ಲ’ ಎಂದರು.</p>.<p>ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಮಲ್ಲಪ್ಪಾ ಧಬಾಲೆ, ಜೇಬಿಕೆ ಶಾಲಾ ಸಂಸ್ಥೆಯ ನಿರ್ದೇಶಕ ಬಾಬುರಾವ್ ಗೌಡಗಾವೆ ಮಾತನಾಡಿದರು.</p>.<p>ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಲತಾ ಹಾರಕೂಡೆ, ಸರ್ಕಾರಿ ನ್ಯಾಯವಾದಿ ಬಾಲಾಜಿ ಅದೆಪ್ಪ ಸೇರಿ ಮಕ್ಕಳು ತಮ್ಮ ಅನಿಸಿಕೆ ವ್ಯಕ್ತಪಡಿಸಿದ್ದರು. ಶಾಲಾ ಮಕ್ಕಳು ನೃತ್ಯ ಪ್ರದರ್ಶನ ಮಾಡಿದರು.</p>.<p>ಶಿವಲಿಂಗಯ್ಯ ಸ್ವಾಮಿ ಕನ್ನಡೆ, ವಿಶ್ವನಾಥ್ ಕಾಡಾದಿ, ಬಾಬುರಾವ್ ಮಾಲೋದೆ, ಗೋವಿಂದರಾವ್ ಸೋಮಾಂಶೀ ಸೇರಿ ಹಲವರು ಉಪಸ್ಥಿತರಿದ್ದರು. ರಾಜಕುಮಾರ ನೀಡೋದೆ ಸ್ವಾಗತಿಸಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>