ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಂಚಕ್ಕೆ ಬೇಡಿಕೆಯಿಟ್ಟ ತಾಂತ್ರಿಕ ಸಹಾಯಕ ವಜಾ

Last Updated 28 ಮಾರ್ಚ್ 2023, 15:55 IST
ಅಕ್ಷರ ಗಾತ್ರ

ಬೀದರ್‌: ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕೈಗೊಂಡ ಕಾಮಗಾರಿ ಬಿಲ್ ಪಾವತಿಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬಸವಕಲ್ಯಾಣ ತಾಲ್ಲೂಕು ಪಂಚಾಯಿತಿ ತಾಂತ್ರಿಕ ಸಹಾಯಕ ಸೂರ್ಯಕಾಂತ ಪಾಟೀಲನನ್ನು ಸೇವೆಯಿಂದ ವಜಾಗೊಳಿಸಲಾಗಿದೆ.

ಮುಡಬಿ ಗ್ರಾಮ ಪಂಚಾಯಿತಿಯ ಬಗದೂರಿ ಗ್ರಾಮದ ರೈತರ ಹೊಲದಲ್ಲಿ ನರೇಗಾದಲ್ಲಿ ಕಾಮಗಾರಿ ಕೈಗೊಂಡು ₹ 62,748 ಕೂಲಿ ಪಾವತಿಸಲಾಗಿದೆ. ಆದರೆ, ಸೂರ್ಯಕಾಂತ ಪಾಟೀಲ ಬಿಲ್‌ ಪಾವತಿಸಿಲ್ಲ. ಸರ್ಕಾರದ ಯೋಜನೆಯನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾದ ಆರೋಪ ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನೀಡಿದ ವರದಿ ಆದರಿಸಿ ಸೂರ್ಯಕಾಂತ ಪಾಟೀಲ ಅವರ ಹೊರಗುತ್ತಿಗೆ ಸೇವೆಯನ್ನು ರದ್ದುಗೊಳಿಸಿ ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT