<p><strong>ಜನವಾಡ:</strong> ನಿಖರ ತಂತ್ರಜ್ಞಾನ ಬಳಕೆಯಿಂದ ಕೃಷಿ ಲಾಭದಾಯಕ ಆಗಿಸಿಕೊಳ್ಳಬಹುದು ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಸುನೀಲಕುಮಾರ ಎನ್.ಎಂ. ಹೇಳಿದರು.</p>.<p>ಬೀದರ್ ತಾಲ್ಲೂಕಿನ ಜನವಾಡ ಸಮೀಪದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸೋಮವಾರ ಆಯೋಜಿಸಿದ್ದ ಮುಂಗಾರು ಹಂಗಾಮು ಪೂರ್ವ ಸಿದ್ಧತೆ ಹಾಗೂ ಶುಂಠಿ ಬೆಳೆ ಬೇಸಾಯ ಕುರಿತ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ನಿಖರ ತಂತ್ರಜ್ಞಾನವು ಬೆಳೆ ಉತ್ಪಾದನೆ ಖರ್ಚು ತಗ್ಗಿಸುತ್ತದೆ. ಇಳುವರಿಯನ್ನೂ ಹೆಚ್ಚಿಸುತ್ತದೆ. ರೈತರು ಬೆಳೆವಾರು ಮೊದಲೇ ಯೋಜನೆ ರೂಪಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.</p>.<p>ಕೃಷಿ ಸಂಶೋಧನಾ ಕೇಂದ್ರದ ಹವಾಮಾನ ತಜ್ಞ ಡಾ. ಬಸವರಾಜ ಅವರು ಮುಂಗಾರು ಹಂಗಾಮಿನ ಮಳೆ ಹಾಗೂ ಹವಾಮಾನ ಮಾಹಿತಿ ನೀಡಿದರು.</p>.<p>ರೈತರಿಗೆ ಮಣ್ಣು ಮಾದರಿ ಪರೀಕ್ಷೆ ಹಾಗೂ ಫಲಿತಾಂಶ ಆಧಾರದಲ್ಲಿ ಬೆಳೆಗಳಿಗೆ ನೀಡುವ ಪೋಷಕಾಂಶಗಳು, ಸಸ್ಯ ಸಂರಕ್ಷಣೆ, ತಳಿಗಳ ಆಯ್ಕೆ, ಬೀಜೋಪಚಾರ, ತೋಟಗಾರಿಕೆ ಹಾಗೂ ವಾಣಿಜ್ಯ ಬೆಳೆಗಳಲ್ಲಿ ಜೈವಿಕ ಶಿಲಿಂದ್ರ ನಾಶಕಗಳಾದ ಟ್ರೈಕೋಡರ್ಮಾ, ಸುಡೊಮೋನಾಸ್ ಬಳಕೆ,<br> ಶುಂಠಿ ಬೇಸಾಯ ಕ್ರಮಗಳ ಕುರಿತು ಮಾಹಿತಿ ನೀಡಲಾಯಿತು.</p>.<p>ಕೃಷಿ ವಿಜ್ಞಾನ ಕೇಂದ್ರದ ಮಣ್ಣು ವಿಜ್ಞಾನ ತಾಂತ್ರಿಕ ಅಧಿಕಾರಿ ಧನರಾಜ ವಿ.ಎಸ್, ಡಾ. ಜ್ಞಾನದೇವ ಬುಳ್ಳಾ, ಮಲ್ಲಿಕಾರ್ಜುನ ನಿಂಗದಳ್ಳಿ, ತೋಟಗಾರಿಕೆ ಇಲಾಖೆಯ ಜೈವಿಕ ಕೇಂದ್ರದ ಸಹಾಯಕ ತೋಟಗಾರಿಕೆ ನಿರ್ದೇಶಕ ನೀಲಾಂಜನ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜನವಾಡ:</strong> ನಿಖರ ತಂತ್ರಜ್ಞಾನ ಬಳಕೆಯಿಂದ ಕೃಷಿ ಲಾಭದಾಯಕ ಆಗಿಸಿಕೊಳ್ಳಬಹುದು ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಸುನೀಲಕುಮಾರ ಎನ್.ಎಂ. ಹೇಳಿದರು.</p>.<p>ಬೀದರ್ ತಾಲ್ಲೂಕಿನ ಜನವಾಡ ಸಮೀಪದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸೋಮವಾರ ಆಯೋಜಿಸಿದ್ದ ಮುಂಗಾರು ಹಂಗಾಮು ಪೂರ್ವ ಸಿದ್ಧತೆ ಹಾಗೂ ಶುಂಠಿ ಬೆಳೆ ಬೇಸಾಯ ಕುರಿತ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ನಿಖರ ತಂತ್ರಜ್ಞಾನವು ಬೆಳೆ ಉತ್ಪಾದನೆ ಖರ್ಚು ತಗ್ಗಿಸುತ್ತದೆ. ಇಳುವರಿಯನ್ನೂ ಹೆಚ್ಚಿಸುತ್ತದೆ. ರೈತರು ಬೆಳೆವಾರು ಮೊದಲೇ ಯೋಜನೆ ರೂಪಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.</p>.<p>ಕೃಷಿ ಸಂಶೋಧನಾ ಕೇಂದ್ರದ ಹವಾಮಾನ ತಜ್ಞ ಡಾ. ಬಸವರಾಜ ಅವರು ಮುಂಗಾರು ಹಂಗಾಮಿನ ಮಳೆ ಹಾಗೂ ಹವಾಮಾನ ಮಾಹಿತಿ ನೀಡಿದರು.</p>.<p>ರೈತರಿಗೆ ಮಣ್ಣು ಮಾದರಿ ಪರೀಕ್ಷೆ ಹಾಗೂ ಫಲಿತಾಂಶ ಆಧಾರದಲ್ಲಿ ಬೆಳೆಗಳಿಗೆ ನೀಡುವ ಪೋಷಕಾಂಶಗಳು, ಸಸ್ಯ ಸಂರಕ್ಷಣೆ, ತಳಿಗಳ ಆಯ್ಕೆ, ಬೀಜೋಪಚಾರ, ತೋಟಗಾರಿಕೆ ಹಾಗೂ ವಾಣಿಜ್ಯ ಬೆಳೆಗಳಲ್ಲಿ ಜೈವಿಕ ಶಿಲಿಂದ್ರ ನಾಶಕಗಳಾದ ಟ್ರೈಕೋಡರ್ಮಾ, ಸುಡೊಮೋನಾಸ್ ಬಳಕೆ,<br> ಶುಂಠಿ ಬೇಸಾಯ ಕ್ರಮಗಳ ಕುರಿತು ಮಾಹಿತಿ ನೀಡಲಾಯಿತು.</p>.<p>ಕೃಷಿ ವಿಜ್ಞಾನ ಕೇಂದ್ರದ ಮಣ್ಣು ವಿಜ್ಞಾನ ತಾಂತ್ರಿಕ ಅಧಿಕಾರಿ ಧನರಾಜ ವಿ.ಎಸ್, ಡಾ. ಜ್ಞಾನದೇವ ಬುಳ್ಳಾ, ಮಲ್ಲಿಕಾರ್ಜುನ ನಿಂಗದಳ್ಳಿ, ತೋಟಗಾರಿಕೆ ಇಲಾಖೆಯ ಜೈವಿಕ ಕೇಂದ್ರದ ಸಹಾಯಕ ತೋಟಗಾರಿಕೆ ನಿರ್ದೇಶಕ ನೀಲಾಂಜನ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>