<p><strong>ಬೀದರ್</strong>: ‘ಮಾನಸಿಕ ದೌರ್ಬಲ್ಯ ಹಾಗೂ ಒತ್ತಡದ ಜೀವನ ಹಲವು ರೋಗಗಳಿಗೆ ಕಾರಣವಾಗುತ್ತಿದೆ’ ಎಂದು ಬ್ರಿಮ್ಸ್ ಆಸ್ಪತ್ರೆಯ ಮಾನಸಿಕ ವಿಭಾಗದ ಮುಖ್ಯಸ್ಥೆ ಶ್ವೇತಾ ಬಿರಾದಾರ ಹೇಳಿದರು.</p>.<p>ಇಲ್ಲಿಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿಯಲ್ಲಿ ಸೋಮವಾರ ಆಯೋಜಿಸಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಶೇ 80 ರಷ್ಟು ಜನರಿಗೆ ಆಲೋಚನೆಗಳಿಂದಲೇ ರೋಗ ಬರುತ್ತದೆ. ಜ್ಞಾನಕ್ಕೆ ಸಂಬಂಧಿಸಿದ ಎಲ್ಲವೂ ಮನಸ್ಸಿಗೆ ಸಂಬಂಧಿಸಿರುತ್ತದೆ. ಮನಸ್ಸು ಕಲುಷಿತಗೊಂಡರೆ ದೇಹದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ ಎಂದು ತಿಳಿಸಿದರು.</p>.<p>‘ಉತ್ತಮ ವಾತಾವರಣದಿಂದ ಮಾನಸಿಕ ಆರೋಗ್ಯ ವೃದ್ಧಿಸಲು ಸಾಧ್ಯವಿದೆ’ ಎಂದು ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿದ್ರಾಮ ಟಿ.ಪಿ. ಅಭಿಪ್ರಾಯಪಟ್ಟರು.</p>.<p>‘ಇಂದು ಹಲವು ಕಾರಣಗಳಿಂದಾಗಿ ಯುವ ಜನಾಂಗ ಮಾನಸಿಕ ಖಿನ್ನತೆಗೆ ಒಳಗಾಗುತ್ತಿದೆ. ಆತ್ಮಹತ್ಯೆಯಂತಹ ಕೃತ್ಯಗಳಿಗೂ ಇಳಿಯುತ್ತಿದೆ. ಮಾನಸಿಕ ಸ್ವಾಸ್ಥ್ಯ ಹಾಗೂ ಆತ್ಮಹತ್ಯೆ ತಡೆಗೆ ಜಾಗೃತಿ ಮೂಡಿಸುವಂತೆ ಸುಪ್ರೀಂ ಕೋರ್ಟ್ ಕಾನೂನು ಸೇವಾ ಪ್ರಾಧಿಕಾರಿಗಳಿಗೆ ನಿರ್ದೇಶನ ನೀಡಿದೆ’ ಎಂದು ತಿಳಿಸಿದರು.</p>.<p>‘ಮಾನಸಿಕ ರೋಗಿಗಳನ್ನು ನೋಡಿ ಗೇಲಿ ಮಾಡುವುದು ಸರಿಯಲ್ಲ. ಅವರನ್ನು ಗುರುತಿಸಿ ಸೂಕ್ತ ಚಿಕಿತ್ಸೆ ಕೊಡಿಸಲು ಮುಂದಾಗಬೇಕು. ಸಮಾಜದ ಮುಖ್ಯವಾಹಿನಿಗೆ ತರಲು ಪ್ರಯತ್ನಿಸಬೇಕು. ಕಾನೂನು ಅನ್ವಯ ಅವರಿಗೆ ರಕ್ಷಣೆ ಒದಗಿಸಲು ಮುಂದಾಗಬೇಕು’ ಎಂದು ಹೇಳಿದರು.</p>.<p>ಮನೋರೋಗ ತಜ್ಞ ಡಾ.ಅಭಿಜೀತ ಪಾಟೀಲ ಮಾತನಾಡಿ, ‘ಭಾರತ, ವಿಶ್ವದಲ್ಲೇ ಅತಿ ಹೆಚ್ಚು ಯುವ ಜನತೆ ಇರುವ ದೇಶವಾಗಿದೆ. ಈ ದೇಶದ ಭವಿಷ್ಯ ಯುವಕರ ಕೈಯಲ್ಲಿದೆ. ಆದರೆ, ಯುವಜನಾಂಗ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ಕಳವಳಕಾರಿ ವಿಷಯವಾಗಿದೆ’ ಎಂದರು.</p>.<p>‘ಚಿತ್ತ ಚಂಚಲತೆ, ಚಿತ್ತ ವಿಕಲತೆ, ಮದ್ಯ, ಮಾದಕ ವಸ್ತುಗಳ ಸೇವನೆ, ಮನೋದೈಹಿಕ ಬೇನೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದ್ದು, ಭಯ ಹುಟ್ಟಿಸುತ್ತಿವೆ’ ಎಂದು ತಿಳಿಸಿದರು.</p>.<p>‘ಕೆಲ ಪಾಲಕರು ಅಧಿಕ ಅಂಕ ಗಳಿಕೆಗೆ ಒತ್ತಡ ಹೇರುತ್ತಿರುವ ಕಾರಣ ಮಕ್ಕಳು ಮಾನಸಿಕ ಕಾಯಿಲೆಗಳಿಗೆ ಒಳಗಾಗುತ್ತಿದ್ದಾರೆ’ ಎಂದು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ.ರಾಜಶೇಖರ ಪಾಟೀಲ ತಿಳಿಸಿದರು.</p>.<p>ಶಂಕರೆಪ್ಪ ಜಕಟ್ಟಿ, ಸಂಜು ಮಲಗಿಕರ್, ಪರಶುರಾಮ, ರಮೇಶ, ಇಮ್ಯಾನುವೆಲ್, ಗೋರಕನಾಥ, ಜ್ಯೋತಿ, ರೇಣುಕಾ, ಭ್ರಮರಾಂಬ ದೇವಿ, ಶ್ಯಾಮರಾವ್, ಅಬ್ದುಲ್ ಹೈ, ಅಫಜಲೊದ್ದಿನ್, ವಿದ್ಯಾಸಾಗರ, ಪ್ರಮೋದ್ ರಾಠೋಡ್, ಸಂಗಮೇಶ, ಅಂಬಾದಾಸ ಇದ್ದರು.</p>.<p>ಜಿಲ್ಲಾ ಕುಷ್ಠರೋಗ ನಿರ್ಮೂಲನೆ ಕಾರ್ಯಕ್ರಮದ ಮೇಲ್ವಿಚಾರಕ ವೀರಶೆಟ್ಟಿ ಚನಶೆಟ್ಟಿ ನಿರೂಪಿಸಿದರು. ಸೀಮಪ್ಪ ಸರಕುರೆ ಸ್ವಾಗತಿಸಿದರು. ರಾಜೇಶ ವಂದಿಸಿದರು.</p>.<p>ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ‘ಮಾನಸಿಕ ದೌರ್ಬಲ್ಯ ಹಾಗೂ ಒತ್ತಡದ ಜೀವನ ಹಲವು ರೋಗಗಳಿಗೆ ಕಾರಣವಾಗುತ್ತಿದೆ’ ಎಂದು ಬ್ರಿಮ್ಸ್ ಆಸ್ಪತ್ರೆಯ ಮಾನಸಿಕ ವಿಭಾಗದ ಮುಖ್ಯಸ್ಥೆ ಶ್ವೇತಾ ಬಿರಾದಾರ ಹೇಳಿದರು.</p>.<p>ಇಲ್ಲಿಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿಯಲ್ಲಿ ಸೋಮವಾರ ಆಯೋಜಿಸಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಶೇ 80 ರಷ್ಟು ಜನರಿಗೆ ಆಲೋಚನೆಗಳಿಂದಲೇ ರೋಗ ಬರುತ್ತದೆ. ಜ್ಞಾನಕ್ಕೆ ಸಂಬಂಧಿಸಿದ ಎಲ್ಲವೂ ಮನಸ್ಸಿಗೆ ಸಂಬಂಧಿಸಿರುತ್ತದೆ. ಮನಸ್ಸು ಕಲುಷಿತಗೊಂಡರೆ ದೇಹದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ ಎಂದು ತಿಳಿಸಿದರು.</p>.<p>‘ಉತ್ತಮ ವಾತಾವರಣದಿಂದ ಮಾನಸಿಕ ಆರೋಗ್ಯ ವೃದ್ಧಿಸಲು ಸಾಧ್ಯವಿದೆ’ ಎಂದು ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿದ್ರಾಮ ಟಿ.ಪಿ. ಅಭಿಪ್ರಾಯಪಟ್ಟರು.</p>.<p>‘ಇಂದು ಹಲವು ಕಾರಣಗಳಿಂದಾಗಿ ಯುವ ಜನಾಂಗ ಮಾನಸಿಕ ಖಿನ್ನತೆಗೆ ಒಳಗಾಗುತ್ತಿದೆ. ಆತ್ಮಹತ್ಯೆಯಂತಹ ಕೃತ್ಯಗಳಿಗೂ ಇಳಿಯುತ್ತಿದೆ. ಮಾನಸಿಕ ಸ್ವಾಸ್ಥ್ಯ ಹಾಗೂ ಆತ್ಮಹತ್ಯೆ ತಡೆಗೆ ಜಾಗೃತಿ ಮೂಡಿಸುವಂತೆ ಸುಪ್ರೀಂ ಕೋರ್ಟ್ ಕಾನೂನು ಸೇವಾ ಪ್ರಾಧಿಕಾರಿಗಳಿಗೆ ನಿರ್ದೇಶನ ನೀಡಿದೆ’ ಎಂದು ತಿಳಿಸಿದರು.</p>.<p>‘ಮಾನಸಿಕ ರೋಗಿಗಳನ್ನು ನೋಡಿ ಗೇಲಿ ಮಾಡುವುದು ಸರಿಯಲ್ಲ. ಅವರನ್ನು ಗುರುತಿಸಿ ಸೂಕ್ತ ಚಿಕಿತ್ಸೆ ಕೊಡಿಸಲು ಮುಂದಾಗಬೇಕು. ಸಮಾಜದ ಮುಖ್ಯವಾಹಿನಿಗೆ ತರಲು ಪ್ರಯತ್ನಿಸಬೇಕು. ಕಾನೂನು ಅನ್ವಯ ಅವರಿಗೆ ರಕ್ಷಣೆ ಒದಗಿಸಲು ಮುಂದಾಗಬೇಕು’ ಎಂದು ಹೇಳಿದರು.</p>.<p>ಮನೋರೋಗ ತಜ್ಞ ಡಾ.ಅಭಿಜೀತ ಪಾಟೀಲ ಮಾತನಾಡಿ, ‘ಭಾರತ, ವಿಶ್ವದಲ್ಲೇ ಅತಿ ಹೆಚ್ಚು ಯುವ ಜನತೆ ಇರುವ ದೇಶವಾಗಿದೆ. ಈ ದೇಶದ ಭವಿಷ್ಯ ಯುವಕರ ಕೈಯಲ್ಲಿದೆ. ಆದರೆ, ಯುವಜನಾಂಗ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ಕಳವಳಕಾರಿ ವಿಷಯವಾಗಿದೆ’ ಎಂದರು.</p>.<p>‘ಚಿತ್ತ ಚಂಚಲತೆ, ಚಿತ್ತ ವಿಕಲತೆ, ಮದ್ಯ, ಮಾದಕ ವಸ್ತುಗಳ ಸೇವನೆ, ಮನೋದೈಹಿಕ ಬೇನೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದ್ದು, ಭಯ ಹುಟ್ಟಿಸುತ್ತಿವೆ’ ಎಂದು ತಿಳಿಸಿದರು.</p>.<p>‘ಕೆಲ ಪಾಲಕರು ಅಧಿಕ ಅಂಕ ಗಳಿಕೆಗೆ ಒತ್ತಡ ಹೇರುತ್ತಿರುವ ಕಾರಣ ಮಕ್ಕಳು ಮಾನಸಿಕ ಕಾಯಿಲೆಗಳಿಗೆ ಒಳಗಾಗುತ್ತಿದ್ದಾರೆ’ ಎಂದು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ.ರಾಜಶೇಖರ ಪಾಟೀಲ ತಿಳಿಸಿದರು.</p>.<p>ಶಂಕರೆಪ್ಪ ಜಕಟ್ಟಿ, ಸಂಜು ಮಲಗಿಕರ್, ಪರಶುರಾಮ, ರಮೇಶ, ಇಮ್ಯಾನುವೆಲ್, ಗೋರಕನಾಥ, ಜ್ಯೋತಿ, ರೇಣುಕಾ, ಭ್ರಮರಾಂಬ ದೇವಿ, ಶ್ಯಾಮರಾವ್, ಅಬ್ದುಲ್ ಹೈ, ಅಫಜಲೊದ್ದಿನ್, ವಿದ್ಯಾಸಾಗರ, ಪ್ರಮೋದ್ ರಾಠೋಡ್, ಸಂಗಮೇಶ, ಅಂಬಾದಾಸ ಇದ್ದರು.</p>.<p>ಜಿಲ್ಲಾ ಕುಷ್ಠರೋಗ ನಿರ್ಮೂಲನೆ ಕಾರ್ಯಕ್ರಮದ ಮೇಲ್ವಿಚಾರಕ ವೀರಶೆಟ್ಟಿ ಚನಶೆಟ್ಟಿ ನಿರೂಪಿಸಿದರು. ಸೀಮಪ್ಪ ಸರಕುರೆ ಸ್ವಾಗತಿಸಿದರು. ರಾಜೇಶ ವಂದಿಸಿದರು.</p>.<p>ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>