<p>ಬೀದರ್: ಭಾರತದ ಸಂವಿಧಾನವು ವಿಶ್ವದ ಅನೇಕ ಶ್ರೇಷ್ಠ ಲಿಖಿತ ಹಾಗೂ ಅಲಿಖಿತ ಸಂವಿಧಾನಗಳ ಮೌಲಿಕ ಅಂಶಗಳ ಸಂಗಮವಾಗಿದೆ ಎಂದು ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿ ಡಾ. ಹೇಮಾವತಿ ಪಾಟೀಲ ಅಭಿಪ್ರಾಯಪಟ್ಟರು.</p>.<p>ಬೀದರ್ ತಾಲ್ಲೂಕಿನ ಮನ್ನಳ್ಳಿ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನವು ದೇಶದ ಪಾಲಿಗೆ ಪರಮೋಚ್ಛ ಕಾನೂನು ಆಗಿದೆ. ದೇಶದ ಎಲ್ಲರಿಗೂ ಸಮಾನ ಹಕ್ಕು ಹಾಗೂ ಕರ್ತವ್ಯಗಳನ್ನು ಕೊಟ್ಟಿದೆ ಎಂದು ತಿಳಿಸಿದರು.</p>.<p>ಮತ ಹಕ್ಕು ಸಂವಿಧಾನ ನೀಡಿರುವ ಹಕ್ಕುಗಳಲ್ಲಿ ಒಂದಾಗಿದೆ. ಒಳ್ಳೆಯ ಪ್ರತಿನಿಧಿ ಹಾಗೂ ಉತ್ತಮ ಸರ್ಕಾರದ ಆಯ್ಕೆಗಾಗಿ ಅರ್ಹ ಪ್ರತಿಯೊಬ್ಬರೂ ತಪ್ಪದೇ ಮತಾಧಿಕಾರ ಚಲಾಯಿಸಬೇಕು. ಈ ಮೂಲಕ ಸಂವಿಧಾನದ ಆಶಯ ಈಡೇರಿಕೆಗೆ ಕೈಜೋಡಿಸಬೇಕು ಎಂದು ಹೇಳಿದರು.</p>.<p>ಕಾಲೇಜಿನ ಮತದಾನ ಸಾಕ್ಷರತಾ ಸಮಿತಿಯ ಸಮನ್ವಯಾಧಿಕಾರಿ ಡಾ. ಸಂದೀಪ್ ತಿವಾರಿ ಅವರು ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.</p>.<p>ಡಾ. ಶ್ರೀಕಾಂತ ಮೋಹನರಾವ್, ಪ್ರೊ. ರಾಜಕುಮಾರ ಹೊಸದೊಡ್ಡೆ, ಪ್ರೊ. ಊರ್ವಶಿ ಕೊಡ್ಲಿ, ಡಾ. ಮಹೇಶ್ವರಿ ಹೇಡೆ, ಸತ್ಯಶೀಲಾ, ಅಯೂಬ್ ಅಹಮ್ಮದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ಭಾರತದ ಸಂವಿಧಾನವು ವಿಶ್ವದ ಅನೇಕ ಶ್ರೇಷ್ಠ ಲಿಖಿತ ಹಾಗೂ ಅಲಿಖಿತ ಸಂವಿಧಾನಗಳ ಮೌಲಿಕ ಅಂಶಗಳ ಸಂಗಮವಾಗಿದೆ ಎಂದು ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿ ಡಾ. ಹೇಮಾವತಿ ಪಾಟೀಲ ಅಭಿಪ್ರಾಯಪಟ್ಟರು.</p>.<p>ಬೀದರ್ ತಾಲ್ಲೂಕಿನ ಮನ್ನಳ್ಳಿ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನವು ದೇಶದ ಪಾಲಿಗೆ ಪರಮೋಚ್ಛ ಕಾನೂನು ಆಗಿದೆ. ದೇಶದ ಎಲ್ಲರಿಗೂ ಸಮಾನ ಹಕ್ಕು ಹಾಗೂ ಕರ್ತವ್ಯಗಳನ್ನು ಕೊಟ್ಟಿದೆ ಎಂದು ತಿಳಿಸಿದರು.</p>.<p>ಮತ ಹಕ್ಕು ಸಂವಿಧಾನ ನೀಡಿರುವ ಹಕ್ಕುಗಳಲ್ಲಿ ಒಂದಾಗಿದೆ. ಒಳ್ಳೆಯ ಪ್ರತಿನಿಧಿ ಹಾಗೂ ಉತ್ತಮ ಸರ್ಕಾರದ ಆಯ್ಕೆಗಾಗಿ ಅರ್ಹ ಪ್ರತಿಯೊಬ್ಬರೂ ತಪ್ಪದೇ ಮತಾಧಿಕಾರ ಚಲಾಯಿಸಬೇಕು. ಈ ಮೂಲಕ ಸಂವಿಧಾನದ ಆಶಯ ಈಡೇರಿಕೆಗೆ ಕೈಜೋಡಿಸಬೇಕು ಎಂದು ಹೇಳಿದರು.</p>.<p>ಕಾಲೇಜಿನ ಮತದಾನ ಸಾಕ್ಷರತಾ ಸಮಿತಿಯ ಸಮನ್ವಯಾಧಿಕಾರಿ ಡಾ. ಸಂದೀಪ್ ತಿವಾರಿ ಅವರು ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.</p>.<p>ಡಾ. ಶ್ರೀಕಾಂತ ಮೋಹನರಾವ್, ಪ್ರೊ. ರಾಜಕುಮಾರ ಹೊಸದೊಡ್ಡೆ, ಪ್ರೊ. ಊರ್ವಶಿ ಕೊಡ್ಲಿ, ಡಾ. ಮಹೇಶ್ವರಿ ಹೇಡೆ, ಸತ್ಯಶೀಲಾ, ಅಯೂಬ್ ಅಹಮ್ಮದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>