<p><strong>ಕಮಲನಗರ:</strong> ‘ಜಿಲ್ಲಾಧಿಕಾರಿ ನಡೆ, ಹಳ್ಳಿ ಕಡೆ’ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿ ರಾಮಚಂದ್ರನ್ ಅವರು ಸಂಗಮ ಗ್ರಾಮದ ನಯಾಆಬಾದಿಗೆ ತೆರಳಿ ಜನರ ಅಹವಾಲು ಸ್ವೀಕರಿಸಿದರು.</p>.<p>ಗ್ರಾಮದ ಓಣಿಗಳಲ್ಲಿ ಸುತ್ತಾಡಿ ರಸ್ತೆ, ಗಟಾರು ಹಾಗೂ ಕುಡಿಯುವ ನೀರಿನ ಪೂರೈಕೆ ವ್ಯವಸ್ಥೆಯ ಮಾಹಿತಿ ಪಡೆದರು.</p>.<p>‘ಜಿಲ್ಲಾಡಳಿತವೇ ಗ್ರಾಮಕ್ಕೆ ಬಂದಿರುವ ಕಾರಣ ಗ್ರಾಮ ಇನ್ನಷ್ಟು ಅಭಿವೃದ್ಧಿ ಕಾಣುವ ವಿಶ್ವಾಸ ಮೂಡಿದೆ. ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಸಮಸ್ಯೆಗಳು ಇತ್ಯರ್ಥವಾಗಲಿವೆ’ ಎಂದು ಗ್ರಾಮಸ್ಥ ರಾದ ಪರಮೇಶ್ವರ ಹೊಳಸಂಬ್ರೆ, ಮಲ್ಲಿಕಾರ್ಜುನ ದುಬಲಗುಂಡೆ, ಸಂಗಮೇಶ್ವರ ಸರಬಾರೆ, ಸಂತೋಷ ಬಿರಾದಾರ ಹೇಳಿದರು.</p>.<p>ರಾಮಚಂದ್ರನ್ ಮಾತನಾಡಿ, ‘ನಮ್ಮನ್ನು ಆತ್ಮೀಯವಾಗಿ ಬರಮಾಡಿಕೊಂಡಿವುದು ಖುಷಿ ಉಂಟು ಮಾಡಿದೆ. ಈ ಮೂಲಕ ನಮ್ಮ ಜವಾಬ್ದಾರಿಯೂ ಹೆಚ್ಚಿದೆ. ಎಲ್ಲ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗುವುದು’ ಎಂದು ತಿಳಿಸಿದರು.</p>.<p>ತಾಲ್ಲೂಕಿನ ಸಂಗಮ ಗ್ರಾಮಕ್ಕೆ ಬಂದ ಜಿಲ್ಲಾಧಿಕಾರಿ ರಾಮಚಂದ್ರನ್ ಹಾಗೂ ಅಧಿಕಾರಿಗಳನ್ನು ಚನ್ನಬಸವ ಪಟ್ಟದ್ದೇವರು ಪ್ರೌಢ ಶಾಲೆ ವಿದ್ಯಾರ್ಥಿಗಳು ಡಂಬಲ್ಸ್ ಹಾಗೂ ಲೇಜಿಂ ಆಡುವ ಮೂಲಕ ಬರ ಮಾಡಿಕೊಂಡರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ವಿ.ಜಿ.ರೆಡ್ಡಿ, ಸಮಾಜ ಕಲ್ಯಾಣಾಧಿಕಾರಿ ಸಂಗೀತಾ ಬಿರಾದಾರ, ಹಿರಿಯ ನಾಗರಿಕರ ಮತ್ತು ವಿಕಲಚೇತನರ ಕಲ್ಯಾಣಾಧಿಕಾರಿ, ಟಿಎಚ್ಒ ಡಾ.ಶರಣಯ್ಯ ಮಠಪತಿ, ಎಇಇ ಸೈಯದ್ ಫಸಲ್, ರವಿಕುಮಾರ ಕಾರಭರಿ, ಉಪ ತಹಶೀಲ್ದಾರ್ ಗೋಪಾಲಕೃಷ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಮಲನಗರ:</strong> ‘ಜಿಲ್ಲಾಧಿಕಾರಿ ನಡೆ, ಹಳ್ಳಿ ಕಡೆ’ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿ ರಾಮಚಂದ್ರನ್ ಅವರು ಸಂಗಮ ಗ್ರಾಮದ ನಯಾಆಬಾದಿಗೆ ತೆರಳಿ ಜನರ ಅಹವಾಲು ಸ್ವೀಕರಿಸಿದರು.</p>.<p>ಗ್ರಾಮದ ಓಣಿಗಳಲ್ಲಿ ಸುತ್ತಾಡಿ ರಸ್ತೆ, ಗಟಾರು ಹಾಗೂ ಕುಡಿಯುವ ನೀರಿನ ಪೂರೈಕೆ ವ್ಯವಸ್ಥೆಯ ಮಾಹಿತಿ ಪಡೆದರು.</p>.<p>‘ಜಿಲ್ಲಾಡಳಿತವೇ ಗ್ರಾಮಕ್ಕೆ ಬಂದಿರುವ ಕಾರಣ ಗ್ರಾಮ ಇನ್ನಷ್ಟು ಅಭಿವೃದ್ಧಿ ಕಾಣುವ ವಿಶ್ವಾಸ ಮೂಡಿದೆ. ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಸಮಸ್ಯೆಗಳು ಇತ್ಯರ್ಥವಾಗಲಿವೆ’ ಎಂದು ಗ್ರಾಮಸ್ಥ ರಾದ ಪರಮೇಶ್ವರ ಹೊಳಸಂಬ್ರೆ, ಮಲ್ಲಿಕಾರ್ಜುನ ದುಬಲಗುಂಡೆ, ಸಂಗಮೇಶ್ವರ ಸರಬಾರೆ, ಸಂತೋಷ ಬಿರಾದಾರ ಹೇಳಿದರು.</p>.<p>ರಾಮಚಂದ್ರನ್ ಮಾತನಾಡಿ, ‘ನಮ್ಮನ್ನು ಆತ್ಮೀಯವಾಗಿ ಬರಮಾಡಿಕೊಂಡಿವುದು ಖುಷಿ ಉಂಟು ಮಾಡಿದೆ. ಈ ಮೂಲಕ ನಮ್ಮ ಜವಾಬ್ದಾರಿಯೂ ಹೆಚ್ಚಿದೆ. ಎಲ್ಲ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗುವುದು’ ಎಂದು ತಿಳಿಸಿದರು.</p>.<p>ತಾಲ್ಲೂಕಿನ ಸಂಗಮ ಗ್ರಾಮಕ್ಕೆ ಬಂದ ಜಿಲ್ಲಾಧಿಕಾರಿ ರಾಮಚಂದ್ರನ್ ಹಾಗೂ ಅಧಿಕಾರಿಗಳನ್ನು ಚನ್ನಬಸವ ಪಟ್ಟದ್ದೇವರು ಪ್ರೌಢ ಶಾಲೆ ವಿದ್ಯಾರ್ಥಿಗಳು ಡಂಬಲ್ಸ್ ಹಾಗೂ ಲೇಜಿಂ ಆಡುವ ಮೂಲಕ ಬರ ಮಾಡಿಕೊಂಡರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ವಿ.ಜಿ.ರೆಡ್ಡಿ, ಸಮಾಜ ಕಲ್ಯಾಣಾಧಿಕಾರಿ ಸಂಗೀತಾ ಬಿರಾದಾರ, ಹಿರಿಯ ನಾಗರಿಕರ ಮತ್ತು ವಿಕಲಚೇತನರ ಕಲ್ಯಾಣಾಧಿಕಾರಿ, ಟಿಎಚ್ಒ ಡಾ.ಶರಣಯ್ಯ ಮಠಪತಿ, ಎಇಇ ಸೈಯದ್ ಫಸಲ್, ರವಿಕುಮಾರ ಕಾರಭರಿ, ಉಪ ತಹಶೀಲ್ದಾರ್ ಗೋಪಾಲಕೃಷ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>