ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್: ಜಿಲ್ಲೆಯ 195 ಮಂದಿ ಶೀಘ್ರ ತಾಯ್ನಾಡಿಗೆ

ವಿದೇಶಾಂಗ ಸಚಿವರ ಜತೆ ಸಂಸದರ ಮಾತುಕತೆ: ಭರವಸೆ
Last Updated 6 ಆಗಸ್ಟ್ 2020, 15:12 IST
ಅಕ್ಷರ ಗಾತ್ರ

ಬೀದರ್: ‘ವಿದೇಶಾಂಗ ಸಚಿವ ಸುಬ್ರಹ್ಮಣ್ಯಂ ಜೈಶಂಕರ ಅವರು ಕುವೈತ್‍ನಲ್ಲಿ ಸಿಲುಕಿರುವ ಜಿಲ್ಲೆಯ 195 ಯುವಕರನ್ನು ಶೀಘ್ರ ತಾಯ್ನಾಡಿಗೆ ಕರೆ ತರುವ ಭರವಸೆ ನೀಡಿದ್ದಾರೆ’ ಎಂದು ಸಂಸದ ಭಗವಂತ ಖೂಬಾ ತಿಳಿಸಿದ್ದಾರೆ.

‘ಉದ್ಯೋಗ ಅರಸಿ ಕುವೈತ್‍ಗೆ ಹೋಗಿ ಕೋವಿಡ್ 19 ಕಾರಣ ಅಲ್ಲಿಯೇ ಸಿಲುಕಿಕೊಂಡವರನ್ನು ಮರಳಿ ದೇಶಕ್ಕೆ ಕರೆ ತರಲು ಎಲ್ಲ ಪ್ರಯತ್ನ ನಡೆಸಲಾಗುತ್ತಿದೆ’ ಎಂದು ಹೇಳಿದ್ದಾರೆ.

ನಾಲ್ಕು–ಐದು ದಿನಗಳ ಹಿಂದೆ ವಿದೇಶಾಂಗ ಸಚಿವರನ್ನು ಸಂಪರ್ಕಿಸಿದ ಫಲವಾಗಿ ಕುವೈತ್‍ನಲ್ಲಿ ಇರುವ ಭಾರತದ ರಾಯಭಾರ ಕಚೇರಿಯು ಅಲ್ಲಿನ ಮೇಘಾ ಎಂಜಿನಿಯರಿಂಗ್ ಕಂಪನಿಗೆ ನೋಟಿಸ್ ಕೊಟ್ಟಿದೆ. ನೋಟಿಸ್ ಪಡೆದ ತಕ್ಷಣ ಕಂಪನಿಯವರು ಜಿಲ್ಲೆಯ ಯುವಕರನ್ನು ಭೇಟಿ ಮಾಡಿ ಎಲ್ಲರನ್ನೂ ಭಾರತಕ್ಕೆ ವಾಪಸ್ ಕಳುಹಿಸಿ ಕೊಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಊಟ ಹಾಗೂ ಇತರ ವ್ಯವಸ್ಥೆಗಳನ್ನೂ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಗುರುವಾರ ಮತ್ತೆ ವಿದೇಶಾಂಗ ಸಚಿವರನ್ನು ಸಂಪರ್ಕಿಸಿದ್ದು, ಈಗಾಗಲೇ ರಾಯಭಾರ ಕಚೇರಿ ಮೂಲಕ ಮೇಘಾ ಎಂಜಿನಿಯರಿಂಗ್ ಕಂಪನಿಯನ್ನು ಸಂಪರ್ಕಿಸಲಾಗಿದೆ. ಕಂಪನಿಯು ಬೀದರ್ ಜಿಲ್ಲೆಯ ಯುವಕರನ್ನು ಮರಳಿ ಭಾರತಕ್ಕೆ ಕಳುಹಿಸಲು ಬಾಜಿರಾ ಏರ್‌ಲೈನ್ಸ್‌ ಟಿಕೆಟ್ ವ್ಯವಸ್ಥೆಯನ್ನೂ ಮಾಡಿದೆ ಎಂದು ತಿಳಿಸಿದ್ದಾರೆ ಎಂದು ಹೇಳಿದ್ದಾರೆ.

ಕೋವಿಡ್ 19 ಸೋಂಕಿನ ಪ್ರಯುಕ್ತ ಸದ್ಯ ಅಂತರರಾಷ್ಟ್ರೀಯ ವಿಮಾನಯಾನ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಆಗಸ್ಟ್ ಎರಡನೇ ವಾರದಲ್ಲಿ ಅಂತರರಾಷ್ಟ್ರೀಯ ವಿಮಾನಯಾನ ಶುರುವಾಗಲಿದೆ. ವಿಮಾನಯಾನ ಆರಂಭವಾದ ಕೂಡಲೇ ಜಿಲ್ಲೆಯ ಯುವಕರನ್ನು ಕರೆ ತರಲಾಗುವುದು ಎಂದು ಆಶ್ವಾಸನೆ ಕೊಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ಕುವೈತ್‍ನಲ್ಲಿ ಇರುವ ಜಿಲ್ಲೆಯ ಯುವಕರನ್ನು ವಾಟ್ಸ್ಆ್ಯಪ್‌ ವಿಡಿಯೋ ಕಾಲ್ ಮೂಲಕ ಸಂಪರ್ಕಿಸಿ ಎಲ್ಲ ವಿಷಯಗಳನ್ನು ಅವರ ಗಮನಕ್ಕೆ ತಂದಿದೆ. ಧೈರ್ಯದಿಂದ ಇರುವಂತೆ ತಿಳಿಸಿದ್ದೇನೆ. ಹೀಗಾಗಿ ಕುವೈತ್‍ನಲ್ಲಿ ಸಿಲುಕಿಕೊಂಡವರ ಪಾಲಕರು ಆತಂಕ ಪಡುವ ಅಗತ್ಯ ಇಲ್ಲ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT