ಸ್ಥಳೀಯ ಜನಪ್ರತಿನಿಧಿಗಳ ಕಾಳಜಿ, ಈ ಹಿಂದಿನ ಜಿಲ್ಲಾ ಪಂಚಾಯಿತಿ ಸಿಇಒ ಮಹಾಂತೇಶ ಬೀಳಗಿ, ಜ್ಞಾನೇಂದ್ರಕುಮಾರ ಗಂಗ್ವಾರ್, ಜಹೀರಾ ನಸೀಮ್, ಪಿಡಿಒ ಶಿವಾನಂದ ಔರಾದೆ ಅವರ ಪರಿಶ್ರಮದಿಂದ ಧುಪತಮಹಾಗಾಂವ್ ಗ್ರಾಮ ಪಂಚಾಯಿತಿ ರಾಜ್ಯದಲ್ಲಿ ಗುರುತಿಸಿಕೊಂಡಿದೆ. ಈ ಪಂಚಾಯಿತಿ ಈಗ ಅಮೃತ ಯೋಜನೆಯಡಿ ಆಯ್ಕೆ ಯಾಗಿದ್ದು, ₹ 25 ಲಕ್ಷ ಅನುದಾನವೂ ಮಂಜೂರಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಇಒ ಬೀರೇಂದ್ರಸಿಂಗ್ ತಿಳಿಸಿದ್ದಾರೆ.