ಕೊರೊನಾ ಸೋಂಕು ತಡೆಗೆ ದೇಶದಾದ್ಯಂತ ಲಾಕ್ಡೌನ್ ವಿಧಿಸಿದ ಸಂದರ್ಭದಲ್ಲಿ ಅಗತ್ಯ ಸೇವೆಗಳ ವ್ಯಾಪ್ತಿಗೆ ಬರುವ ಕಾರಣ ವ್ಯಾಪಾರಿಗಳು ಅಂಗಡಿ ಮುಂಗಟ್ಟುಗಳನ್ನು ತೆರೆದಿಟ್ಟು ರೈತರಿಗೆ ಸೇವೆ ಒದಗಿಸಿದ್ದರು. ಇದೀಗ ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವ್ಯಾಪಾರ, ವಹಿವಾಟು ಬಂದ್ ಮಾಡಿದ್ದರಿಂದ ನಗರದ ಪ್ರಮುಖ ಮಾರುಕಟ್ಟೆ ಗಾಂಧಿಗಂಜ್ ಸ್ತಬ್ಧವಾಗಿದೆ. ಎಂಟು ದಿನಗಳಿಂದ ಆಹಾರಧಾನ್ಯಗಳ ಖರೀದಿ, ಮಾರಾಟ ಹಾಗೂ ರೈತರ ಓಡಾಟ ಇಲ್ಲದೇ ಭಣಗುಡುತ್ತಿದೆ.