<p><strong>ಬೀದರ್: </strong>‘ಸ್ಥಳೀಯರ ಅವಶ್ಯಕತೆಗಳಿಗೆ ಪೂರಕವಾಗಿ ಸ್ಪಂದಿಸುವುದೇ ಸಹಕಾರ ಸಂಘಗಳ ಯಶಸ್ಸಿನ ಗುಟ್ಟಾಗಿದೆ’ ಎಂದು ರಾಜ್ಯ ಮಹಿಳಾ ಸಹಕಾರಿ ಮಹಾ ಮಂಡಳದ ಅಧ್ಯಕ್ಷೆ ಶಕುಂತಲಾ ಬೆಲ್ದಾಳೆ ಹೇಳಿದರು.</p>.<p>ಡಾ ಗುರುಪಾದಪ್ಪ ನಾಗಮಾರಪಳ್ಳಿ ಸಹಾರ್ದ ತರಬೇತಿ ಕೇಂದ್ರದಲ್ಲಿ ನಬಾರ್ಡ್ ವತಿಯಿಂದ ಬಾಗಲಕೋಟೆ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಾಕಾರ ಸಂಘಗಳ ಅಧ್ಯಕ್ಷರು ಮತ್ತು ಆಡಳಿತ ಮಂಡಳಿ ಸದಸ್ಯರಿಗಾಗಿ ಆಯೋಜಸಿದ್ದ ಮೂರು ದಿನಗಳ ತರಬೇತಿಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸಹಕಾರ ಸಂಘಗಳ ಮೂಲಕ ಜನರು ಆರ್ಥಿಕ ಸೇವೆಗಳನ್ನು ಸುಲಭವಾಗಿ ಪಡೆಯಲು ಸಾಧ್ಯವಾಗುತ್ತದೆ. ಇದು ಸಮುದಾಯದಲ್ಲಿ ಸಹಕಾರ ಮನೋಭಾವನೆ, ಒಗ್ಗಟ್ಟು, ಸಹಬಾಳ್ವೆಯನ್ನು ಕಲಿಸುತ್ತದೆ’ ಎಂದು ತಿಳಿಸಿದರು.</p>.<p>‘ಸರ್ವರಿಗೂ ಸಮ ಪಾಲು ಸಮ ಬಾಳು ತತ್ವದಡಿಯಲ್ಲಿ ಜಾತಿಮತ ಭೇದವಿಲ್ಲದೆ ಕೂಡಿ ಬಾಳುವ ಹಾಗೂ ಭ್ರಾತೃತ್ವ ಭಾವನೆಯನ್ನು ಬೆಳೆಸುವ ಸಹಕಾರ ರಂಗ ಸಮುದಾಯಕ್ಕೆ ನೆರವಾಗಿದೆ’ ನಾಯಕರಾಗಿ ಬೆಳೆಯಲು ಸಹ ಅವಕಾಶಗಳಿವೆ’ ಎಂದರು.</p>.<p>ಬಾಗಲಕೋಟೆ ಕಂದಗಲ್ ಪಿಕೆಪಿಎಸ ಅಧ್ಯಕ್ಷ ಪಂಪಣ್ಣ ಅನುಭವ ಹಂಚಿಕೊಂಡರು. ಸಹಾರ್ದ ನಿರ್ದೇಶಕ ಬಿ. ಸುಬ್ರಹ್ಮಣ್ಯ ಪ್ರಭು ಅವರು ತರಬೇತಿ ಉದ್ದೇಶಗಳನ್ನು ವಿವರಿಸಿದರು.<br /><br />ಸಹಾರ್ದ ಸಂಸ್ಥೆಯ ಉಪನ್ಯಾಸಕ ಎಸ್.ಜಿ.ಪಾಟೀಲ ನಿರೂಪಿಸಿದರು. ಮಹಾಲಿಂಗ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>‘ಸ್ಥಳೀಯರ ಅವಶ್ಯಕತೆಗಳಿಗೆ ಪೂರಕವಾಗಿ ಸ್ಪಂದಿಸುವುದೇ ಸಹಕಾರ ಸಂಘಗಳ ಯಶಸ್ಸಿನ ಗುಟ್ಟಾಗಿದೆ’ ಎಂದು ರಾಜ್ಯ ಮಹಿಳಾ ಸಹಕಾರಿ ಮಹಾ ಮಂಡಳದ ಅಧ್ಯಕ್ಷೆ ಶಕುಂತಲಾ ಬೆಲ್ದಾಳೆ ಹೇಳಿದರು.</p>.<p>ಡಾ ಗುರುಪಾದಪ್ಪ ನಾಗಮಾರಪಳ್ಳಿ ಸಹಾರ್ದ ತರಬೇತಿ ಕೇಂದ್ರದಲ್ಲಿ ನಬಾರ್ಡ್ ವತಿಯಿಂದ ಬಾಗಲಕೋಟೆ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಾಕಾರ ಸಂಘಗಳ ಅಧ್ಯಕ್ಷರು ಮತ್ತು ಆಡಳಿತ ಮಂಡಳಿ ಸದಸ್ಯರಿಗಾಗಿ ಆಯೋಜಸಿದ್ದ ಮೂರು ದಿನಗಳ ತರಬೇತಿಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸಹಕಾರ ಸಂಘಗಳ ಮೂಲಕ ಜನರು ಆರ್ಥಿಕ ಸೇವೆಗಳನ್ನು ಸುಲಭವಾಗಿ ಪಡೆಯಲು ಸಾಧ್ಯವಾಗುತ್ತದೆ. ಇದು ಸಮುದಾಯದಲ್ಲಿ ಸಹಕಾರ ಮನೋಭಾವನೆ, ಒಗ್ಗಟ್ಟು, ಸಹಬಾಳ್ವೆಯನ್ನು ಕಲಿಸುತ್ತದೆ’ ಎಂದು ತಿಳಿಸಿದರು.</p>.<p>‘ಸರ್ವರಿಗೂ ಸಮ ಪಾಲು ಸಮ ಬಾಳು ತತ್ವದಡಿಯಲ್ಲಿ ಜಾತಿಮತ ಭೇದವಿಲ್ಲದೆ ಕೂಡಿ ಬಾಳುವ ಹಾಗೂ ಭ್ರಾತೃತ್ವ ಭಾವನೆಯನ್ನು ಬೆಳೆಸುವ ಸಹಕಾರ ರಂಗ ಸಮುದಾಯಕ್ಕೆ ನೆರವಾಗಿದೆ’ ನಾಯಕರಾಗಿ ಬೆಳೆಯಲು ಸಹ ಅವಕಾಶಗಳಿವೆ’ ಎಂದರು.</p>.<p>ಬಾಗಲಕೋಟೆ ಕಂದಗಲ್ ಪಿಕೆಪಿಎಸ ಅಧ್ಯಕ್ಷ ಪಂಪಣ್ಣ ಅನುಭವ ಹಂಚಿಕೊಂಡರು. ಸಹಾರ್ದ ನಿರ್ದೇಶಕ ಬಿ. ಸುಬ್ರಹ್ಮಣ್ಯ ಪ್ರಭು ಅವರು ತರಬೇತಿ ಉದ್ದೇಶಗಳನ್ನು ವಿವರಿಸಿದರು.<br /><br />ಸಹಾರ್ದ ಸಂಸ್ಥೆಯ ಉಪನ್ಯಾಸಕ ಎಸ್.ಜಿ.ಪಾಟೀಲ ನಿರೂಪಿಸಿದರು. ಮಹಾಲಿಂಗ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>