ಬೀದರ್: ಜಿಲ್ಲಾ ಜನಪದ ಸಾಹಿತ್ಯ ಉತ್ಸವ ಮತ್ತು ಎರಡನೇ ಜಿಲ್ಲಾ ಜಾನಪದ ಸಮ್ಮೇಳನದ ಸರ್ವಾಧ್ಯಕ್ಷೆ ನಾಟ್ಯಶ್ರೀ ನೃತ್ಯಾಲಯದ ನಿದೇರ್ಶಕಿ ರಾಣಿ ಸತ್ಯಮೂರ್ತಿ ಮೆರವಣಿಗೆ ನಗರದಲ್ಲಿ ನಡೆಯಿತು.
ಜನವಾಡ ರಸ್ತೆಯಲ್ಲಿರುವ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರದ ಆವರಣದಲ್ಲಿ ವಿಶ್ವ ಹಿಂದೂ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ರಾಮಕೃಷ್ಣನ್ ಸಾಳೆ ಮೆರವಣಿಗೆಗೆ ಚಾಲನೆ ನೀಡಿದರು.
ಕಬ್ಬು ಹಾಗೂ ಮಾವಿನ ಎಲೆ ಕಟ್ಟಿದ ಅಲಂಕೃತ ಬಂಡಿಯಲ್ಲಿ ಸಮ್ಮೇಳನಾಧ್ಯಕ್ಷರನ್ನು ಕರ್ನಾಟಕ ಸಾಹಿತ್ಯ ಸಭಾಂಗಣದ ವರೆಗೆ ಮೆರವಣಿಗೆಯಲ್ಲಿ ಕರೆ ತರಲಾಯಿತು.
ಮಹಿಳಾ ಕೋಲಾಟ, ಡೊಳ್ಳು ಕುಣಿತ, ಗೊಂಬೆ ಕುಣಿತ, ಲಂಬಾಣಿ ನೃತ್ಯ, ಭಜನಾ ತಂಡಗಳು ಮೆರವಣಿಗೆಗೆ ಕಳಿಕಟ್ಟಿದ್ದವು. ಅನೇಕ ಮಹಿಳೆಯರು ಸಾಂಪ್ರದಾಯಿಕ ಪೋಷಾಕು ಧರಿಸಿ ಗಮನ ಸೆಳೆದರು.