<p><strong>ಬಸವಕಲ್ಯಾಣ</strong>: ‘ಜೆಡಿಎಸ್ ಅಭ್ಯರ್ಥಿ ಯಸ್ರಬ್ ಅಲಿ ಖಾದ್ರಿ ದೈವಭಕ್ತನಾಗಿದ್ದು, ಮೋಸ ಮಾಡಲಾರ. ಆದ್ದರಿಂದ ಅವರನ್ನು ಚುನಾವಣೆಯಲ್ಲಿ ಗೆಲ್ಲಿಸಬೇಕು’ ಎಂದು ಶಾಸಕ ಬಂಡೆಪ್ಪ ಕಾಶೆಂಪೂರ್ ಹೇಳಿದರು.</p>.<p>ಇಲ್ಲಿನ ಆಟೊನಗರದಲ್ಲಿ ಉಪ ಚುನಾವಣೆ ಅಂಗವಾಗಿ ಭಾನುವಾರ ಆಯೋಜಿಸಿದ್ದ ಜೆಡಿಎಸ್ ಅಭ್ಯರ್ಥಿ ಯಸ್ರಬ್ ಅಲಿ ಖಾದ್ರಿ ಅವರ ಪ್ರಚಾರ ಸಭೆಯಲ್ಲಿ ಮಾತನಾಡಿದರು.</p>.<p>‘ಪಕ್ಷದಿಂದ ಉತ್ತಮ ವ್ಯಕ್ತಿಯನ್ನು ಆಯ್ಕೆ ಮಾಡಿ ಟಿಕೆಟ್ ನೀಡಲಾಗಿದೆ. ಅಲ್ಲದೇ, ಇವರು ಸ್ಥಳೀಯರು. ಸಾಕಷ್ಟು ಸಾಮಾಜಿಕ ಕಾರ್ಯಗಳಲ್ಲಿ ಪಾಲ್ಗೊಂಡಿದ್ದು ಜನರ ಕಷ್ಟ– ಸುಖಗಳಿಗೆ ಸ್ಪಂದಿಸುತ್ತಾರೆ’ ಎಂದರು.</p>.<p>ಅಭ್ಯರ್ಥಿ ಸೈಯದ್ ಯಸ್ರಬ್ ಅಲಿ ಖಾದ್ರಿ ಮಾತನಾಡಿ, ‘ನಾನು ಸ್ಥಳೀಯನಾಗಿದ್ದು ನೀವು ಈ ಹಿಂದೆ ಅನೇಕರಿಗೆ ಮತ ನೀಡಿ ಅಧಿಕಾರ ಕೊಟ್ಟಿದ್ದೀರಿ. ಈ ಬಾರಿ ನನಗೆ ಮತ ನೀಡುವ ಮೂಲಕ ನಿಮ್ಮ ಸೇವೆ ಮಾಡುವ ಅವಕಾಶ ಕಲ್ಪಿಸಿ ಕೊಡಿ’ ಎಂದು ಮನವಿ ಮಾಡಿದರು.</p>.<p>ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಶಬ್ಬೀರ್ ಪಾಶಾ ಮುಜಾವರ್, ಪ್ರವಕ್ತಾ ಆಕಾಶ ಖಂಡಾಳೆ, ನಗರ ಘಟಕದ ಅಧ್ಯಕ್ಷ ಸುಶೀಲ ಆವಸ್ಥಿ ಪಾಲ್ಗೊಂಡಿದ್ದರು.</p>.<p>ಈ ಸಂದರ್ಭದಲ್ಲಿ ಅನೇಕರು ಜೆಡಿಎಸ್ ಸೇರ್ಪಡೆಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ</strong>: ‘ಜೆಡಿಎಸ್ ಅಭ್ಯರ್ಥಿ ಯಸ್ರಬ್ ಅಲಿ ಖಾದ್ರಿ ದೈವಭಕ್ತನಾಗಿದ್ದು, ಮೋಸ ಮಾಡಲಾರ. ಆದ್ದರಿಂದ ಅವರನ್ನು ಚುನಾವಣೆಯಲ್ಲಿ ಗೆಲ್ಲಿಸಬೇಕು’ ಎಂದು ಶಾಸಕ ಬಂಡೆಪ್ಪ ಕಾಶೆಂಪೂರ್ ಹೇಳಿದರು.</p>.<p>ಇಲ್ಲಿನ ಆಟೊನಗರದಲ್ಲಿ ಉಪ ಚುನಾವಣೆ ಅಂಗವಾಗಿ ಭಾನುವಾರ ಆಯೋಜಿಸಿದ್ದ ಜೆಡಿಎಸ್ ಅಭ್ಯರ್ಥಿ ಯಸ್ರಬ್ ಅಲಿ ಖಾದ್ರಿ ಅವರ ಪ್ರಚಾರ ಸಭೆಯಲ್ಲಿ ಮಾತನಾಡಿದರು.</p>.<p>‘ಪಕ್ಷದಿಂದ ಉತ್ತಮ ವ್ಯಕ್ತಿಯನ್ನು ಆಯ್ಕೆ ಮಾಡಿ ಟಿಕೆಟ್ ನೀಡಲಾಗಿದೆ. ಅಲ್ಲದೇ, ಇವರು ಸ್ಥಳೀಯರು. ಸಾಕಷ್ಟು ಸಾಮಾಜಿಕ ಕಾರ್ಯಗಳಲ್ಲಿ ಪಾಲ್ಗೊಂಡಿದ್ದು ಜನರ ಕಷ್ಟ– ಸುಖಗಳಿಗೆ ಸ್ಪಂದಿಸುತ್ತಾರೆ’ ಎಂದರು.</p>.<p>ಅಭ್ಯರ್ಥಿ ಸೈಯದ್ ಯಸ್ರಬ್ ಅಲಿ ಖಾದ್ರಿ ಮಾತನಾಡಿ, ‘ನಾನು ಸ್ಥಳೀಯನಾಗಿದ್ದು ನೀವು ಈ ಹಿಂದೆ ಅನೇಕರಿಗೆ ಮತ ನೀಡಿ ಅಧಿಕಾರ ಕೊಟ್ಟಿದ್ದೀರಿ. ಈ ಬಾರಿ ನನಗೆ ಮತ ನೀಡುವ ಮೂಲಕ ನಿಮ್ಮ ಸೇವೆ ಮಾಡುವ ಅವಕಾಶ ಕಲ್ಪಿಸಿ ಕೊಡಿ’ ಎಂದು ಮನವಿ ಮಾಡಿದರು.</p>.<p>ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಶಬ್ಬೀರ್ ಪಾಶಾ ಮುಜಾವರ್, ಪ್ರವಕ್ತಾ ಆಕಾಶ ಖಂಡಾಳೆ, ನಗರ ಘಟಕದ ಅಧ್ಯಕ್ಷ ಸುಶೀಲ ಆವಸ್ಥಿ ಪಾಲ್ಗೊಂಡಿದ್ದರು.</p>.<p>ಈ ಸಂದರ್ಭದಲ್ಲಿ ಅನೇಕರು ಜೆಡಿಎಸ್ ಸೇರ್ಪಡೆಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>