ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಪ್ಪಾಯ ‘ಸಿಹಿ’ ಕಂಡ ಯುವ ರೈತ: ₹6 ಲಕ್ಷ ಆದಾಯ ಗಳಿಕೆ

ಸಾವಯವ ಗೊಬ್ಬರದಿಂದ ಉತ್ತಮ ಫಸಲು
Last Updated 26 ಮಾರ್ಚ್ 2022, 4:51 IST
ಅಕ್ಷರ ಗಾತ್ರ

ಹುಮನಾಬಾದ್: ಸಮೀಪದ ಮೀನಕೇರಾ ಗ್ರಾಮದ ಯುವ ರೈತ ರಾಜಕುಮಾರ ಗಬಾಡಿ ಎಂಬುವವರು ತಮ್ಮ 4 ಎಕರೆಯಲ್ಲಿ ಪಪ್ಪಾಯ ನಾಟಿ ಮಾಡಿ ಯಶಸ್ಸು
ಕಂಡಿದ್ದಾರೆ.

ಪ್ರತಿ ಎಕರೆಗೆ 900 ಸಸಿಗಳಂತೆ ನರ್ಸರಿಯಿಂದ ಸುಮಾರು 3,600 ಸಸಿಗಳನ್ನು ತಂದು ಹೊಲದಲ್ಲಿ ನೆಟ್ಟಿದ್ದಾರೆ. ನಾಟಿಗೂ ಮುಂಚೆ ಹೊಲಕ್ಕೆ ತಿಪ್ಪೆ ಗೊಬ್ಬರ ಹಾಕಿದ್ದಾರೆ. 6 ರಿಂದ 7 ಅಡಿ ಅಂತರದಲ್ಲಿ ಸಸಿಗಳನ್ನು ನಾಟಿ ಮಾಡಿದ್ದಾರೆ.

ರಾಸಾಯನಿಕ ಗೊಬ್ಬರ ಬಳಕೆಯ ಬದಲು, ಸಾವಯವ ಗೊಬ್ಬರ ಉಪಯೋಗ ಮಾಡಿದ್ದರಿಂದ ಖರ್ಚಿನ ಪ್ರಮಾಣವೂ ಕಡಿಮೆಯಾಯಿತು ಹಾಗೂ ಗುಣಮಟ್ಟದ ಇಳುವರಿ ಬರಲು ಸಾಧ್ಯವಾಗಿದೆ ಎನ್ನುತ್ತಾರೆ ರಾಜಕುಮಾರ ಅವರು.

ಸಸಿಗಳನ್ನು ನೆಟ್ಟ ಮೂರು ತಿಂಗಳಿಗೆ ಫಲ ಆರಂಭವಾಗಿದ್ದು, ಪ್ರತಿ ಗಿಡಗಳೂ ಉತ್ತಮ ಕಾಯಿಗಳನ್ನು ಹೊಂದಿವೆ. ಅಲ್ಲದೆ ಸಾಮಾನ್ಯವಾಗಿ ಪ್ರತಿ ಕಾಯಿಗಳು 5 ರಿಂದ 12 ಕೆ.ಜಿ ತೂಕ ಹೊಂದಿವೆ. ಇಲ್ಲಿಯವರೆಗೆ ಪಪ್ಪಾಯ ಬೆಳೆಗೆ ₹2.5 ಲಕ್ಷ ಖರ್ಚು ವೆಚ್ಚ ಮಾಡಲಾಗಿದೆ. ನಾಲ್ಕು ಎಕರೆಯಲ್ಲಿ ಇಲ್ಲಿಯವರೆಗೆ 65 ಟನ್ ಇಳುವರಿ ಬಂದಿದೆ.

ಇನ್ನು 20 ಟನ್‌ಗಿಂತಲು ಹೆಚ್ಚು ಫಸಲು ಹೊಲದಲ್ಲಿ ಇದೆ.

ದೆಹಲಿ ಮಾರುಕಟ್ಟೆಯ ಖರೀದಿದಾರರು ಪ್ರತಿ ಕೆ.ಜಿಗೆ 12ರಂತೆ ತಾವೇ ಕೊಯ್ಲು ಮಾಡಿಕೊಂಡು ಹೋಗುತ್ತಿದ್ದಾರೆ. ಪಪ್ಪಾಯ ಬೆಳೆಯು ಕೇವಲ ಆರು ತಿಂಗಳಲ್ಲೇ ಕೊಯ್ಲಿಗೆ ಸಿದ್ಧವಾಗುತ್ತದೆ. ಈ ಬೆಳೆಯಿಂದ ಇಲ್ಲಿಯವರೆಗೆ ಸುಮಾರು ₹ 6 ಲಕ್ಷ ಆದಾಯ ಗಳಿಸಲಾಗಿದೆ ಎಂದು ರೈತ ರಾಜಕುಮಾರ ಮಾಹಿತಿ
ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT