ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್: ಯಡಿಯೂರಪ್ಪ ಬೆನ್ನಿಗೆ ನಿಂತ ಜಿಲ್ಲೆಯ ಮಠಾಧೀಶರು

Last Updated 20 ಜುಲೈ 2021, 13:29 IST
ಅಕ್ಷರ ಗಾತ್ರ

ಬೀದರ್: ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಜಿಲ್ಲೆಯ ಮಠಾಧೀಶರು ಯಡಿಯೂರಪ್ಪ ಅವರ ಬೆನ್ನಿಗೆ ನಿಂತಿದ್ದಾರೆ.

ಬೆಂಗಳೂರಿನಲ್ಲಿ ಮಂಗಳವಾರ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಮಠಾಧೀಶರು, ಇಡೀ ವೀರಶೈವ ಲಿಂಗಾಯತ ಸಮುದಾಯ ತಮ್ಮೊಂದಿಗೆ ಇದೆ ಎಂದು ಅಭಯ ನೀಡಿದ್ದಾರೆ.

ಮುಖ್ಯಮಂತ್ರಿ ಬದಲಾವಣೆ ಮಾಡಿದರೆ ಮತ್ತೆ ಇತಿಹಾಸ ಪುನರಾವರ್ತನೆ ಆಗಲಿದೆ. ಯಡಿಯೂರಪ್ಪ ಅವರನ್ನು ಬದಲಿಸಲು ಹೋದವರು ನಿರ್ನಾಮ ಆಗುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

ಘನಲಿಂಗ ರಾಜೇಶ್ವರ ಸ್ವಾಮೀಜಿ, ಶಂಭುಲಿಂಗ ಶಿವಾಚಾರ್ಯ ಡೊಣಗಾಂವ, ಚಿದಾನಂದ ಶಿವಾಚಾರ್ಯ ಜೊನ್ನಿಕೇರಿ, ಚನ್ನಮಲ್ಲೇಶ್ವರ ಸ್ವಾಮೀಜಿ ಹುಡಗಿ, ಜಯಶಾಂತಲಿಂಗ ಸ್ವಾಮೀಜಿ ಹಿರೆನಾಗಾಂವ, ಪಂಡಿತಾರಾಧ್ಯ ಶಿವಾಚಾರ್ಯ ಹಳ್ಳಿಖೇಡ(ಬಿ) ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT