<p><strong>ಬೀದರ್: </strong>‘ಸುಶಿಕ್ಷಿತ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ’ ಎಂದು ಬೀದರ್ ಕ್ಷೇತ್ರ ಶಿಕ್ಷಣಾಧಿಕಾರಿ ಸೂರ್ಯಕಾಂತ ಮದಾನೆ ಅಭಿಪ್ರಾಯ ಪಟ್ಟರು.</p>.<p>ಪ್ರತಾಪನಗರದ ಜನಸೇವಾ ಶಾಲೆಯಲ್ಲಿ ಶನಿವಾರ ಮಾಜಿ ರಾಷ್ಟ್ರಪತಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜಯಂತಿ ಅಂಗವಾಗಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ದೇಶದ ಸರ್ವಂಗೀಣ ಅಭಿವೃದ್ಧಿಯಲ್ಲಿ ಶಿಕ್ಷಕರೇ ಪ್ರಧಾನ ಶಿಲ್ಪಿಗಳು. ಹೀಗಾಗಿ ಅವರಿಗೆ ನೀಡುವ ಗೌರವ ದೇವರ ಪೂಜೆಗೆ ಸಮಾನವಾಗಿದೆ’ ಎಂದರು.</p>.<p>‘ಕೋವಿಡ್ ಮಹಾಮಾರಿಗೆ ಇಡೀ ಜಗತ್ತು ಸೊರಗಿ ಹೋಗಿದೆ. ನಮ್ಮ ದೇಶಕ್ಕೂ ದೊಡ್ಡ ಆರ್ಥಿಕ ಪೆಟ್ಟು ಬಿದ್ದಿದೆ. ಅದರಲ್ಲೂ ಶಿಕ್ಷಕರ ಬದುಕು ಬಹು ಕಷ್ಟದಲ್ಲಿ ನಡೆಯುತ್ತಿದೆ’ ಎಂದು ಹೇಳಿದರು.</p>.<p>‘ಖಾಸಗಿ ಶಾಲಾ ಶಿಕ್ಷಕರಿಗಂತೂ ದಿಕ್ಕು ತೋಚದಂತಾಗಿದೆ. ಆದರೂ ತಮ್ಮ ವೃತ್ತಿಯನ್ನು ಮುಂದುವರೆಸಿ ಸರ್ಕಾರದ ಮಾರ್ಗದರ್ಶನ ಪಾಲಿಸುತ್ತ ವಠಾರ ಶಾಲೆಗಳನ್ನು ನಡೆಸುತ್ತ ಮಕ್ಕಳಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ. ಇವರ ಸೇವೆಗೆ ಸಮಾಜ ಉದಾರ ಪ್ರೋತ್ಸಾಹ ನೀಡಬೇಕು’ ಎಂದು ಮನವಿ ಮಾಡಿದರು.<br /><br />‘ಈ ತಿಂಗಳ 7ನೇ ತಾರಿಖಿನಿಂದ ಪ್ರೌಢಶಾಲೆ ಮಕ್ಕಳು ಸ್ವ ಇಚ್ಛೆಯಿಂದ ತಮ್ಮ ತಮ್ಮ ಶಾಲೆಗಳಿಗೆ ತೆರಳಿ ಅಲ್ಲಿಯ ಶಿಕ್ಷಕರಿಂದ ಪಠ್ಯಕ್ರಮದ ವಿಚಾರವಾಗಿ ಸೂಕ್ತ ಮಾರ್ಗದರ್ಶನ ಪಡೆದುಕೊಂಡು ಮನೆಯಲ್ಲೇ ಅಧ್ಯಯನ ಮುಂದುವರೆಸಬೇಕಿದೆ’ ಎಂದು ತಿಳಿಸಿದರು.</p>.<p>ಶಾಲೆಯ ಕಾರ್ಯದರ್ಶಿ ರೇವಣಸಿದ್ದಪ್ಪ ಜಲಾದೆ ಪ್ರಾಸ್ತಾವಿಕ ಮಾತನಾಡಿ, ‘ಸೋಮವಾರದಿಂದ ನಮ್ಮ ಶಾಲೆಯಲ್ಲಿ ವಠಾರ ತರಗತಿ ನಡೆಸಲು ನಿರ್ಧರಿಸಲಾಗಿದೆ. ಕೋವಿಡ್ ಮಹಾಮಾರಿಗಯಲ್ಲೂ ನಮ್ಮ ಶಿಕ್ಷಕರು ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ಮಾಡಿ ಶಿಕ್ಷಣ ಕ್ರಮ ಪ್ರಬುದ್ಧವಾಗಿಸಿದ್ದಾರೆ’ ಎಂದರು.</p>.<p>ಶಾಲೆಯ ಅಡಳಿತಧಿಕಾರಿ ಸೌಭಾಗ್ಯವತಿ ಮಾತನಾಡಿದರು. ಶಾಲೆಯ ನಿದೇಶಕ ಶಿವಲಿಂಗಪ್ಪ ಜಲಾದೆ ಹಾಗೂ ಬಿ.ಆರ್.ಸಿ ವಿಜಯಕುಮಾರ ಇದ್ದರು.</p>.<p>ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳು ತಮ್ಮ ಶಿಕ್ಷಕರನ್ನು ಸನ್ಮಾನಿಸಿ, ಕಾಣಿಕೆ ನೀಡಿದರು. ಭಾಗ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.ಪ್ರತಿಕ್ಷಾ ವಂದಿಸಿದರು. ಶಾಲೆಯ ಅಡಳಿತ ಮಂಡಳಿ ಹಾಗೂ ವಿದ್ಯಾರ್ಥಿಗಳು ಸೇರಿ ಕಾರ್ಯಕ್ರಮ ಆಯೋಜಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>‘ಸುಶಿಕ್ಷಿತ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ’ ಎಂದು ಬೀದರ್ ಕ್ಷೇತ್ರ ಶಿಕ್ಷಣಾಧಿಕಾರಿ ಸೂರ್ಯಕಾಂತ ಮದಾನೆ ಅಭಿಪ್ರಾಯ ಪಟ್ಟರು.</p>.<p>ಪ್ರತಾಪನಗರದ ಜನಸೇವಾ ಶಾಲೆಯಲ್ಲಿ ಶನಿವಾರ ಮಾಜಿ ರಾಷ್ಟ್ರಪತಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜಯಂತಿ ಅಂಗವಾಗಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ದೇಶದ ಸರ್ವಂಗೀಣ ಅಭಿವೃದ್ಧಿಯಲ್ಲಿ ಶಿಕ್ಷಕರೇ ಪ್ರಧಾನ ಶಿಲ್ಪಿಗಳು. ಹೀಗಾಗಿ ಅವರಿಗೆ ನೀಡುವ ಗೌರವ ದೇವರ ಪೂಜೆಗೆ ಸಮಾನವಾಗಿದೆ’ ಎಂದರು.</p>.<p>‘ಕೋವಿಡ್ ಮಹಾಮಾರಿಗೆ ಇಡೀ ಜಗತ್ತು ಸೊರಗಿ ಹೋಗಿದೆ. ನಮ್ಮ ದೇಶಕ್ಕೂ ದೊಡ್ಡ ಆರ್ಥಿಕ ಪೆಟ್ಟು ಬಿದ್ದಿದೆ. ಅದರಲ್ಲೂ ಶಿಕ್ಷಕರ ಬದುಕು ಬಹು ಕಷ್ಟದಲ್ಲಿ ನಡೆಯುತ್ತಿದೆ’ ಎಂದು ಹೇಳಿದರು.</p>.<p>‘ಖಾಸಗಿ ಶಾಲಾ ಶಿಕ್ಷಕರಿಗಂತೂ ದಿಕ್ಕು ತೋಚದಂತಾಗಿದೆ. ಆದರೂ ತಮ್ಮ ವೃತ್ತಿಯನ್ನು ಮುಂದುವರೆಸಿ ಸರ್ಕಾರದ ಮಾರ್ಗದರ್ಶನ ಪಾಲಿಸುತ್ತ ವಠಾರ ಶಾಲೆಗಳನ್ನು ನಡೆಸುತ್ತ ಮಕ್ಕಳಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ. ಇವರ ಸೇವೆಗೆ ಸಮಾಜ ಉದಾರ ಪ್ರೋತ್ಸಾಹ ನೀಡಬೇಕು’ ಎಂದು ಮನವಿ ಮಾಡಿದರು.<br /><br />‘ಈ ತಿಂಗಳ 7ನೇ ತಾರಿಖಿನಿಂದ ಪ್ರೌಢಶಾಲೆ ಮಕ್ಕಳು ಸ್ವ ಇಚ್ಛೆಯಿಂದ ತಮ್ಮ ತಮ್ಮ ಶಾಲೆಗಳಿಗೆ ತೆರಳಿ ಅಲ್ಲಿಯ ಶಿಕ್ಷಕರಿಂದ ಪಠ್ಯಕ್ರಮದ ವಿಚಾರವಾಗಿ ಸೂಕ್ತ ಮಾರ್ಗದರ್ಶನ ಪಡೆದುಕೊಂಡು ಮನೆಯಲ್ಲೇ ಅಧ್ಯಯನ ಮುಂದುವರೆಸಬೇಕಿದೆ’ ಎಂದು ತಿಳಿಸಿದರು.</p>.<p>ಶಾಲೆಯ ಕಾರ್ಯದರ್ಶಿ ರೇವಣಸಿದ್ದಪ್ಪ ಜಲಾದೆ ಪ್ರಾಸ್ತಾವಿಕ ಮಾತನಾಡಿ, ‘ಸೋಮವಾರದಿಂದ ನಮ್ಮ ಶಾಲೆಯಲ್ಲಿ ವಠಾರ ತರಗತಿ ನಡೆಸಲು ನಿರ್ಧರಿಸಲಾಗಿದೆ. ಕೋವಿಡ್ ಮಹಾಮಾರಿಗಯಲ್ಲೂ ನಮ್ಮ ಶಿಕ್ಷಕರು ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ಮಾಡಿ ಶಿಕ್ಷಣ ಕ್ರಮ ಪ್ರಬುದ್ಧವಾಗಿಸಿದ್ದಾರೆ’ ಎಂದರು.</p>.<p>ಶಾಲೆಯ ಅಡಳಿತಧಿಕಾರಿ ಸೌಭಾಗ್ಯವತಿ ಮಾತನಾಡಿದರು. ಶಾಲೆಯ ನಿದೇಶಕ ಶಿವಲಿಂಗಪ್ಪ ಜಲಾದೆ ಹಾಗೂ ಬಿ.ಆರ್.ಸಿ ವಿಜಯಕುಮಾರ ಇದ್ದರು.</p>.<p>ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳು ತಮ್ಮ ಶಿಕ್ಷಕರನ್ನು ಸನ್ಮಾನಿಸಿ, ಕಾಣಿಕೆ ನೀಡಿದರು. ಭಾಗ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.ಪ್ರತಿಕ್ಷಾ ವಂದಿಸಿದರು. ಶಾಲೆಯ ಅಡಳಿತ ಮಂಡಳಿ ಹಾಗೂ ವಿದ್ಯಾರ್ಥಿಗಳು ಸೇರಿ ಕಾರ್ಯಕ್ರಮ ಆಯೋಜಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>