ಭಾಲ್ಕಿ: ತಾಲ್ಲೂಕಿನ ಖಾನಾಪೂರ ಗ್ರಾಮದ ಸರ್ಕಾರಿ ಶಾಲೆ ಸಮೀಪದ ಓಣಿ ಜನರಿಗೆ ನೀರಿನ ಸೌಕರ್ಯ ಕಲ್ಪಿಸಲು ಶಾಲೆ ಆವರಣದಲ್ಲಿ ಹಾಳು ಬಿದ್ದಿದ್ದ ಕೈ ಪಂಪನ್ನು ದುರಸ್ಥಿ ಮಾಡಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲಾಗಿದೆ.
ಶಾಲೆ ಸಮೀಪದ ಓಣಿ ಜನರಿಗೆ ಆಗುತ್ತಿರುವ ನೀರಿನ ಸಮಸ್ಯೆ ಕುರಿತು ಬುಧವಾರ ‘ಖಾನಾಪೂರ: ಉಲ್ಬಣಿಸಿದ ನೀರಿನ ಸಮಸ್ಯೆ’ ಎಂಬ ಶೀರ್ಷಿಕೆ ಅಡಿಯಲ್ಲಿ ‘ಪ್ರಜಾವಾಣಿ’ ವರದಿ ಪ್ರಕಟಿಸಿತ್ತು.
ವರದಿಗೆ ಸ್ಪಂದಿಸಿದ ಮಳಚಾಪೂರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿವಶೆಟ್ಟಿ ಸೀತಾ ಅವರು ಖುದ್ಧಾಗಿ ಸ್ಥಳಕ್ಕೆ ಭೇಟಿ ನೀಡಿ ಕೆಲಸಗಾರರ ಸಹಾಯದಿಂದ ಕೈ ಪಂಪನ್ನು ದುರಸ್ಥಿಗೊಳಿಸಿದರು.