<p><strong>ಬಸವಕಲ್ಯಾಣ (ಬೀದರ್ ಜಿಲ್ಲೆ):</strong> ‘ಸಮಾನತೆಯ ಹರಿಕಾರ ಬಸವಣ್ಣನವರ ನೆಲದಲ್ಲಿ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋತರೆ ರಾಜ್ಯಕ್ಕೆ ಒಳ್ಳೆಯ ಭವಿಷ್ಯ ಇಲ್ಲ’ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಕಳವಳ ವ್ಯಕ್ತಪಡಿಸಿದರು.</p>.<p>ಕಾಂಗ್ರೆಸ್ ಅಭ್ಯರ್ಥಿ ಮಾಲಾ ಬಿ.ನಾರಾಯಣರಾವ್ ಪರವಾಗಿ ನಗರದಲ್ಲಿ ಹಿಂದುಳಿದ ವರ್ಗಗಳ ಒಕ್ಕೂಟದಿಂದ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಬಿಜೆಪಿ ಅಂದರೆ ಅದು ಭಾರತೀಯ ಜನತಾ ಪಾರ್ಟಿ ಅನ್ನೋದು ತಪ್ಪು. ಅದೀಗ ಬಿಸಿನೆಸ್ ಜನತಾ ಪಾರ್ಟಿ ಆಗಿ ಬದಲಾಗಿದೆ. ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಹೋರಾಟಕ್ಕೆ ಹಣೆಯುತ್ತಿಲ್ಲ. ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದರೂ ಸ್ಪಂದಿಸುತ್ತಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಬಂಗಾರಪ್ಪ ಅವರು ಕಾಂಗ್ರೆಸ್ನಿಂದಲೇ ಆಯ್ಕೆಯಾಗಿ ಮುಖ್ಯಮಂತ್ರಿ ಆಗಿದ್ದರು. ಅವರು ಆರಂಭಿಸಿದ್ದ ಪಂಪ್ಸೆಟ್ಗೆ ಉಚಿತ ವಿದ್ಯುತ್ ಪೂರೈಕೆ ಯೋಜನೆ, ಆಶ್ರಯ, ಅಕ್ಷಯ, ಭಾಗ್ಯಜ್ಯೋತಿ ಯೋಜನೆಗಳು ಎಲ್ಲಿವೆ? ಗ್ರಾಮೀಣ ಕೃಪಾಂಕ ನೀಡುವ ಪದ್ದತಿ ರದ್ದಾಗಿದೆ. ಸಿದ್ದರಾಮಯ್ಯ ಅವರಲ್ಲಿ ಬಂಗಾರಪ್ಪನವರ ಗುಣ ಕಂಡಿದ್ದರಿಂದಲೇ ಈ ಪಕ್ಷಕ್ಕೆ ಬಂದಿದ್ದೇನೆ’ ಎಂದರು.</p>.<p>ಬೀದರ್ ಶಾಸಕ ರಹೀಂಖಾನ್, ಪಕ್ಷದ ಹಿರಿಯ ಮುಖಂಡರಾದ ರವೀಂದ್ರ ಬೋರೋಳೆ, ದತ್ತು ಮೂಲಗೆ, ಚಂದ್ರಕಾಂತ ಮೇತ್ರೆ, ನಗರಸಭೆ ಸದಸ್ಯ ರಾಮ ಜಾಧವ, ಸಂತೋಷ ಗುತ್ತೇದಾರ, ಜೈದೀಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ (ಬೀದರ್ ಜಿಲ್ಲೆ):</strong> ‘ಸಮಾನತೆಯ ಹರಿಕಾರ ಬಸವಣ್ಣನವರ ನೆಲದಲ್ಲಿ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋತರೆ ರಾಜ್ಯಕ್ಕೆ ಒಳ್ಳೆಯ ಭವಿಷ್ಯ ಇಲ್ಲ’ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಕಳವಳ ವ್ಯಕ್ತಪಡಿಸಿದರು.</p>.<p>ಕಾಂಗ್ರೆಸ್ ಅಭ್ಯರ್ಥಿ ಮಾಲಾ ಬಿ.ನಾರಾಯಣರಾವ್ ಪರವಾಗಿ ನಗರದಲ್ಲಿ ಹಿಂದುಳಿದ ವರ್ಗಗಳ ಒಕ್ಕೂಟದಿಂದ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಬಿಜೆಪಿ ಅಂದರೆ ಅದು ಭಾರತೀಯ ಜನತಾ ಪಾರ್ಟಿ ಅನ್ನೋದು ತಪ್ಪು. ಅದೀಗ ಬಿಸಿನೆಸ್ ಜನತಾ ಪಾರ್ಟಿ ಆಗಿ ಬದಲಾಗಿದೆ. ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಹೋರಾಟಕ್ಕೆ ಹಣೆಯುತ್ತಿಲ್ಲ. ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದರೂ ಸ್ಪಂದಿಸುತ್ತಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಬಂಗಾರಪ್ಪ ಅವರು ಕಾಂಗ್ರೆಸ್ನಿಂದಲೇ ಆಯ್ಕೆಯಾಗಿ ಮುಖ್ಯಮಂತ್ರಿ ಆಗಿದ್ದರು. ಅವರು ಆರಂಭಿಸಿದ್ದ ಪಂಪ್ಸೆಟ್ಗೆ ಉಚಿತ ವಿದ್ಯುತ್ ಪೂರೈಕೆ ಯೋಜನೆ, ಆಶ್ರಯ, ಅಕ್ಷಯ, ಭಾಗ್ಯಜ್ಯೋತಿ ಯೋಜನೆಗಳು ಎಲ್ಲಿವೆ? ಗ್ರಾಮೀಣ ಕೃಪಾಂಕ ನೀಡುವ ಪದ್ದತಿ ರದ್ದಾಗಿದೆ. ಸಿದ್ದರಾಮಯ್ಯ ಅವರಲ್ಲಿ ಬಂಗಾರಪ್ಪನವರ ಗುಣ ಕಂಡಿದ್ದರಿಂದಲೇ ಈ ಪಕ್ಷಕ್ಕೆ ಬಂದಿದ್ದೇನೆ’ ಎಂದರು.</p>.<p>ಬೀದರ್ ಶಾಸಕ ರಹೀಂಖಾನ್, ಪಕ್ಷದ ಹಿರಿಯ ಮುಖಂಡರಾದ ರವೀಂದ್ರ ಬೋರೋಳೆ, ದತ್ತು ಮೂಲಗೆ, ಚಂದ್ರಕಾಂತ ಮೇತ್ರೆ, ನಗರಸಭೆ ಸದಸ್ಯ ರಾಮ ಜಾಧವ, ಸಂತೋಷ ಗುತ್ತೇದಾರ, ಜೈದೀಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>