<p><strong>ಬೀದರ್: </strong>ಜಿಲ್ಲೆಯಲ್ಲಿ 5ರಿಂದ 8ನೇ ತರಗತಿಗಳು ಸೋಮವಾರ ಪ್ರಾರಂಭವಾದವು. ಶಿಕ್ಷಕರು ವಿಭಿನ್ನ ರೀತಿಯಲ್ಲಿ ವಿದ್ಯಾರ್ಥಿಗಳಿಗೆ ಸ್ವಾಗತ ನೀಡಿ ಶಾಲೆಗೆ ಬರ ಮಾಡಿಕೊಂಡರು.</p>.<p>ಕೆಲ ಶಾಲೆಗಳನ್ನು ತಳಿರು ತೋರಣಗಳಿಂದ ಅಲಂಕರಿಸಿದರೆ ಕೆಲ ಶಾಲೆಗಳ ಆವರಣದಲ್ಲಿ ರಂಗೋಲಿ ರಂಗೋಲಿ ಹಾಕಲಾಗಿತ್ತು. ಶಾಲೆಯ ಶಿಕ್ಷಕರು ಪ್ರವೇಶದ್ವಾರದಲ್ಲಿ ವಿದ್ಯಾರ್ಥಿಗಳ ಮೇಲೆ ಪುಷ್ಪಾರ್ಚನೆ ಮಾಡಿ ಸಂಭ್ರಮದಿಂದ ಸ್ವಾಗತಿಸಿದರು.</p>.<p>ಕಳೆದ ಒಂದೂವರೆ ವರ್ಷಗಳಿಂದ ಶಾಲೆಗಳು ವಿದ್ಯಾರ್ಥಿಗಳು ಬೀಕೋ ಎನ್ನುತ್ತಿದ್ದವು. ಸೋಮವಾರ ಬೆಳಿಗ್ಗೆ ಶಾಲಾ ಕೊಠಡಿಗಳನ್ನು ಸ್ಯಾನಿಟೈಜೇಶನ್ ಮಾಡಲಾಗಿತ್ತು. ಅನೇಕ ವಿದ್ಯಾರ್ಥಿಗಳಿಗೆ ಮೊದಲ ದಿನ ಪಠ್ಯಪುಸ್ತಕ, ಪೆನ್ನು, ಹಾಲಿನ ಪೌಡರ್ ವಿತರಿಸಲಾಯಿತು.</p>.<p>ಬೀದರ್ ತಾಲ್ಲೂಕಿನ ಆಣದೂರವಾಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಹಾಲಿನ ಪೌಡರ್ ವಿತರಿಸಿ ಬರ ಮಾಡಿಕೊಳ್ಳಲಾಯಿತು.</p>.<p>‘ಒಂದೂವರೆ ವರ್ಷದ ನಂತರ ಶಾಲೆಗಳು ತೆರೆದುಕೊಂಡಿವೆ. ಹೀಗಾಗಿ ಉತ್ಸಾಹದಿಂದಲೇ ಮಕ್ಕಳು ಶಾಲೆಗೆ ಹಾಜರಾದರು. ಆಸಕ್ತಿಯಿಂದ ಪಾಠ ಆಲಿಸಿದರು’ ಎಂದು ಶಿಕ್ಷಕ ಸಂಜೀವಕುಮಾರ ಅತಿವಾಳೆ ತಿಳಿಸಿದರು.</p>.<p>ಹುಮನಾಬಾದ್ ತಾಲ್ಲೂಕಿನ ಚಂದನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಾಲಾರ್ಪಣೆ ಮಾಡಿ ಅಭಿನಂದಿಸಲಾಯಿತು. ಬೀದರ್ನ ಜೀಜಾಮಾತಾ ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪುಷ್ಪವೃಷ್ಟಿ ಮಾಡಲಾಯಿತು. ಮಕ್ಕಳು ಖುಷಿಯಿಂದಲೇ ಶಾಲೆಗೆ ಬಂದರು.</p>.<p>‘ಆನ್ಲೈನ್ನಲ್ಲಿ ಹೇಳಿಕೊಡುತ್ತಿದ್ದ ಪಾಠ ಸರಿಯಾಗಿ ಅರ್ಥವಾಗುತ್ತಿರಲಿಲ್ಲ. ಶಾಲೆಯಲ್ಲಿ ಪಾಠ ಆಲಿಸಲು ಹೆಚ್ಚು ಇಷ್ಟವಾಗುತ್ತದೆ’ ಎಂದು ವಿದ್ಯಾನಗರ ಶಾಲೆಯ ವಿದ್ಯಾರ್ಥಿಗಳಾದ ನಿತಿನ್ ಹಾಗೂ ಬಸವೇಶ್ವರಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ಜಿಲ್ಲೆಯಲ್ಲಿ 5ರಿಂದ 8ನೇ ತರಗತಿಗಳು ಸೋಮವಾರ ಪ್ರಾರಂಭವಾದವು. ಶಿಕ್ಷಕರು ವಿಭಿನ್ನ ರೀತಿಯಲ್ಲಿ ವಿದ್ಯಾರ್ಥಿಗಳಿಗೆ ಸ್ವಾಗತ ನೀಡಿ ಶಾಲೆಗೆ ಬರ ಮಾಡಿಕೊಂಡರು.</p>.<p>ಕೆಲ ಶಾಲೆಗಳನ್ನು ತಳಿರು ತೋರಣಗಳಿಂದ ಅಲಂಕರಿಸಿದರೆ ಕೆಲ ಶಾಲೆಗಳ ಆವರಣದಲ್ಲಿ ರಂಗೋಲಿ ರಂಗೋಲಿ ಹಾಕಲಾಗಿತ್ತು. ಶಾಲೆಯ ಶಿಕ್ಷಕರು ಪ್ರವೇಶದ್ವಾರದಲ್ಲಿ ವಿದ್ಯಾರ್ಥಿಗಳ ಮೇಲೆ ಪುಷ್ಪಾರ್ಚನೆ ಮಾಡಿ ಸಂಭ್ರಮದಿಂದ ಸ್ವಾಗತಿಸಿದರು.</p>.<p>ಕಳೆದ ಒಂದೂವರೆ ವರ್ಷಗಳಿಂದ ಶಾಲೆಗಳು ವಿದ್ಯಾರ್ಥಿಗಳು ಬೀಕೋ ಎನ್ನುತ್ತಿದ್ದವು. ಸೋಮವಾರ ಬೆಳಿಗ್ಗೆ ಶಾಲಾ ಕೊಠಡಿಗಳನ್ನು ಸ್ಯಾನಿಟೈಜೇಶನ್ ಮಾಡಲಾಗಿತ್ತು. ಅನೇಕ ವಿದ್ಯಾರ್ಥಿಗಳಿಗೆ ಮೊದಲ ದಿನ ಪಠ್ಯಪುಸ್ತಕ, ಪೆನ್ನು, ಹಾಲಿನ ಪೌಡರ್ ವಿತರಿಸಲಾಯಿತು.</p>.<p>ಬೀದರ್ ತಾಲ್ಲೂಕಿನ ಆಣದೂರವಾಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಹಾಲಿನ ಪೌಡರ್ ವಿತರಿಸಿ ಬರ ಮಾಡಿಕೊಳ್ಳಲಾಯಿತು.</p>.<p>‘ಒಂದೂವರೆ ವರ್ಷದ ನಂತರ ಶಾಲೆಗಳು ತೆರೆದುಕೊಂಡಿವೆ. ಹೀಗಾಗಿ ಉತ್ಸಾಹದಿಂದಲೇ ಮಕ್ಕಳು ಶಾಲೆಗೆ ಹಾಜರಾದರು. ಆಸಕ್ತಿಯಿಂದ ಪಾಠ ಆಲಿಸಿದರು’ ಎಂದು ಶಿಕ್ಷಕ ಸಂಜೀವಕುಮಾರ ಅತಿವಾಳೆ ತಿಳಿಸಿದರು.</p>.<p>ಹುಮನಾಬಾದ್ ತಾಲ್ಲೂಕಿನ ಚಂದನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಾಲಾರ್ಪಣೆ ಮಾಡಿ ಅಭಿನಂದಿಸಲಾಯಿತು. ಬೀದರ್ನ ಜೀಜಾಮಾತಾ ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪುಷ್ಪವೃಷ್ಟಿ ಮಾಡಲಾಯಿತು. ಮಕ್ಕಳು ಖುಷಿಯಿಂದಲೇ ಶಾಲೆಗೆ ಬಂದರು.</p>.<p>‘ಆನ್ಲೈನ್ನಲ್ಲಿ ಹೇಳಿಕೊಡುತ್ತಿದ್ದ ಪಾಠ ಸರಿಯಾಗಿ ಅರ್ಥವಾಗುತ್ತಿರಲಿಲ್ಲ. ಶಾಲೆಯಲ್ಲಿ ಪಾಠ ಆಲಿಸಲು ಹೆಚ್ಚು ಇಷ್ಟವಾಗುತ್ತದೆ’ ಎಂದು ವಿದ್ಯಾನಗರ ಶಾಲೆಯ ವಿದ್ಯಾರ್ಥಿಗಳಾದ ನಿತಿನ್ ಹಾಗೂ ಬಸವೇಶ್ವರಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>