ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೇವೆ ಕಾಯಂ ಮಾಡಲು ಆಗ್ರಹ

Last Updated 13 ಜುಲೈ 2021, 16:27 IST
ಅಕ್ಷರ ಗಾತ್ರ

ಬೀದರ್: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸೇವೆ ಕಾಯಂಗೊಳಿಸ ಬೇಕು ಎಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಆಗ್ರಹಿಸಿದೆ.

ಬೇಡಿಕೆ ದಿನದ ಅಂಗವಾಗಿ ಸಂಘದ ತಾಲ್ಲೂಕು ಘಟಕದ ಪದಾಧಿಕಾರಿಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಮನವಿಪತ್ರವನ್ನು ನಗರದಲ್ಲಿ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಕಾರ್ಮಿಕರೆಂದು ಪರಿಗಣಿಸಿ ಕನಿಷ್ಠ ವೇತನ ಹಾಗೂ ಸೇವಾ ಭದ್ರತೆ ನೀಡಬೇಕು ಎನ್ನುವುದು ಸೇರಿದಂತೆ 45ನೇ ಕಾರ್ಮಿಕ ಸಮ್ಮೇಳನದ ಎಲ್ಲ ಶಿಫಾರಸುಗಳನ್ನು ಜಾರಿಗೊಳಿಸಬೇಕು. ಸಮಗ್ರ ಶಿಶು ಅಭಿವೃದ್ಧಿ ಯೋಜನೆ ನಿರಂತರ ಮುಂದುವರಿಸಬೇಕು ಎಂದು ಒತ್ತಾಯಿಸಿದರು.

ಸಂಘದ ಬೀದರ್ ತಾಲ್ಲೂಕು ಘಟಕದ ಅಧ್ಯಕ್ಷೆ ಶಕುಂತಲಾ ಸೋನಿ, ಕಾರ್ಯದರ್ಶಿ ಸುಜಾತಾ, ಖಜಾಂಚಿ ಶಾಂತಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT