<p><strong>ಬೀದರ್: </strong>ಕೋಹಿರ್ನಿಂದ ಬೀದರ್ ವರೆಗಿನ ರೈಲು ಮಾರ್ಗ ವಿದ್ಯುದ್ದೀಕರಣ ಕಾಮಗಾರಿ ಜೂನ್ ಅಂತ್ಯದೊಳಗೆ ಪೂರ್ಣಗೊಳ್ಳಲಿದೆ ಎಂದು ಸಂಸದ ಭಗವಂತ ಖೂಬಾ ತಿಳಿಸಿದ್ದಾರೆ.</p>.<p>ವಿಕಾರಾಬಾದ್ನಿಂದ ಪರಳಿ ವೈಜಿನಾಥವರೆಗೆ 269 ಕಿ.ಮೀ. ರೈಲು ಮಾರ್ಗ ವಿದ್ಯುದ್ದೀಕರಣಕ್ಕೆ ₹262.12 ಕೋಟಿ ಮಂಜೂರಾಗಿದೆ. ಮೊದಲ ಕಂತಾಗಿ ₹90 ಕೋಟಿ ಬಿಡುಗಡೆಯೂ ಆಗಿದೆ ಎಂದು ಹೇಳಿದ್ದಾರೆ.</p>.<p>ವಿಕಾರಾಬಾದ್ನಿಂದ ಕೋಹಿರ್ ವರೆಗಿನ ರೈಲು ಮಾರ್ಗ ವಿದ್ಯುದ್ದೀಕರ ಣದ ಮೊದಲ ಹಂತದ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದೆ. ಪ್ರಾಯೋಗಿಕ ಕಾರ್ಯಾಚರಣೆ ಕೂಡ ನಡೆದಿದೆ ಎಂದು ತಿಳಿಸಿದ್ದಾರೆ.</p>.<p>ಕೋಹಿರ್ನಿಂದ ಬೀದರ್ವರೆಗಿನ ಎರಡನೇ ಹಂತದ ಕಾಮಗಾರಿ ಮುಕ್ತಾ ಯದ ನಂತರ ಪ್ರಾಯೋಗಿಕ ಕಾರ್ಯಾ ಚರಣೆ ನಡೆಯಲಿದೆ. ಬಳಿಕ ಹಂತ ಹಂತವಾಗಿ ಮುಂದಿನ ಕಾಮಗಾರಿಗಳು ನಡೆಯಲಿವೆ ಎಂದು ಹೇಳಿದ್ದಾರೆ.</p>.<p>ಬರುವ ಕೆಲವೇ ತಿಂಗಳಲ್ಲಿ ವಿಕಾರಾಬಾದ್ನಿಂದ ಜಹೀರಾಬಾದ್- ಬೀದರ್- ಖಾನಾಪುರ, ಭಾಲ್ಕಿ- ಕಮಲನಗರ- ಉದಗಿರ- ಲಾತೂರ್ ರಸ್ತೆ- ಪಣಗಾಂವ ಮಾರ್ಗವಾಗಿ ಪರಳಿ ವೈಜಿನಾಥವರೆಗೆ ವಿದ್ಯುತ್ ಚಾಲಿತ ರೈಲು ಓಡಲಿದೆ. ಇದು, ಜಿಲ್ಲೆಯ ಅಭಿವೃದ್ಧಿಗೆ ಹೊಸ ಆಯಾಮ ನೀಡಲಿದೆ. ಮುಂದೆಯೂ ಈ ರೀತಿಯ ಅಭಿವೃದ್ಧಿ ಕಾರ್ಯಗಳು ಆಗಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<p>2014 ರಿಂದ ರೈಲ್ವೆ ಇಲಾಖೆಯಿಂದ ಬೀದರ್ ಜಿಲ್ಲೆಗೆ ಅನೇಕ ಕೊಡುಗೆಗಳು ಸಿಕ್ಕಿವೆ. ಬೀದರ್-ಕಲಬುರ್ಗಿ, ಬೆಂಗಳೂರು, ಮುಂಬೈ, ತಿರುಪತಿ, ಶಿರಡಿ, ಪಂಢರಾಪುರ, ಕೋಲ್ಹಾಪುರ, ಮಚಲಿಪಟ್ನಂ ಸೇರಿ ಅನೇಕ ಕಡೆಗಳಲ್ಲಿ ರೈಲು ಸೇವೆ ಆರಂಭಿಸಲಾಗಿದೆ. ರೈಲು ನಿಲ್ದಾಣಗಳ ಸೌಂದರ್ಯೀಕರಣ, ಶುಚಿತ್ವ, ಮೂಲಸೌಕರ್ಯಕ್ಕೆ ಒತ್ತು ಕೊಟ್ಟು ಜನರಿಗೆ ಅನುಕೂಲ ಮಾಡಿ ಕೊಡಲಾಗಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ಕೋಹಿರ್ನಿಂದ ಬೀದರ್ ವರೆಗಿನ ರೈಲು ಮಾರ್ಗ ವಿದ್ಯುದ್ದೀಕರಣ ಕಾಮಗಾರಿ ಜೂನ್ ಅಂತ್ಯದೊಳಗೆ ಪೂರ್ಣಗೊಳ್ಳಲಿದೆ ಎಂದು ಸಂಸದ ಭಗವಂತ ಖೂಬಾ ತಿಳಿಸಿದ್ದಾರೆ.</p>.<p>ವಿಕಾರಾಬಾದ್ನಿಂದ ಪರಳಿ ವೈಜಿನಾಥವರೆಗೆ 269 ಕಿ.ಮೀ. ರೈಲು ಮಾರ್ಗ ವಿದ್ಯುದ್ದೀಕರಣಕ್ಕೆ ₹262.12 ಕೋಟಿ ಮಂಜೂರಾಗಿದೆ. ಮೊದಲ ಕಂತಾಗಿ ₹90 ಕೋಟಿ ಬಿಡುಗಡೆಯೂ ಆಗಿದೆ ಎಂದು ಹೇಳಿದ್ದಾರೆ.</p>.<p>ವಿಕಾರಾಬಾದ್ನಿಂದ ಕೋಹಿರ್ ವರೆಗಿನ ರೈಲು ಮಾರ್ಗ ವಿದ್ಯುದ್ದೀಕರ ಣದ ಮೊದಲ ಹಂತದ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದೆ. ಪ್ರಾಯೋಗಿಕ ಕಾರ್ಯಾಚರಣೆ ಕೂಡ ನಡೆದಿದೆ ಎಂದು ತಿಳಿಸಿದ್ದಾರೆ.</p>.<p>ಕೋಹಿರ್ನಿಂದ ಬೀದರ್ವರೆಗಿನ ಎರಡನೇ ಹಂತದ ಕಾಮಗಾರಿ ಮುಕ್ತಾ ಯದ ನಂತರ ಪ್ರಾಯೋಗಿಕ ಕಾರ್ಯಾ ಚರಣೆ ನಡೆಯಲಿದೆ. ಬಳಿಕ ಹಂತ ಹಂತವಾಗಿ ಮುಂದಿನ ಕಾಮಗಾರಿಗಳು ನಡೆಯಲಿವೆ ಎಂದು ಹೇಳಿದ್ದಾರೆ.</p>.<p>ಬರುವ ಕೆಲವೇ ತಿಂಗಳಲ್ಲಿ ವಿಕಾರಾಬಾದ್ನಿಂದ ಜಹೀರಾಬಾದ್- ಬೀದರ್- ಖಾನಾಪುರ, ಭಾಲ್ಕಿ- ಕಮಲನಗರ- ಉದಗಿರ- ಲಾತೂರ್ ರಸ್ತೆ- ಪಣಗಾಂವ ಮಾರ್ಗವಾಗಿ ಪರಳಿ ವೈಜಿನಾಥವರೆಗೆ ವಿದ್ಯುತ್ ಚಾಲಿತ ರೈಲು ಓಡಲಿದೆ. ಇದು, ಜಿಲ್ಲೆಯ ಅಭಿವೃದ್ಧಿಗೆ ಹೊಸ ಆಯಾಮ ನೀಡಲಿದೆ. ಮುಂದೆಯೂ ಈ ರೀತಿಯ ಅಭಿವೃದ್ಧಿ ಕಾರ್ಯಗಳು ಆಗಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<p>2014 ರಿಂದ ರೈಲ್ವೆ ಇಲಾಖೆಯಿಂದ ಬೀದರ್ ಜಿಲ್ಲೆಗೆ ಅನೇಕ ಕೊಡುಗೆಗಳು ಸಿಕ್ಕಿವೆ. ಬೀದರ್-ಕಲಬುರ್ಗಿ, ಬೆಂಗಳೂರು, ಮುಂಬೈ, ತಿರುಪತಿ, ಶಿರಡಿ, ಪಂಢರಾಪುರ, ಕೋಲ್ಹಾಪುರ, ಮಚಲಿಪಟ್ನಂ ಸೇರಿ ಅನೇಕ ಕಡೆಗಳಲ್ಲಿ ರೈಲು ಸೇವೆ ಆರಂಭಿಸಲಾಗಿದೆ. ರೈಲು ನಿಲ್ದಾಣಗಳ ಸೌಂದರ್ಯೀಕರಣ, ಶುಚಿತ್ವ, ಮೂಲಸೌಕರ್ಯಕ್ಕೆ ಒತ್ತು ಕೊಟ್ಟು ಜನರಿಗೆ ಅನುಕೂಲ ಮಾಡಿ ಕೊಡಲಾಗಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>