ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮನೆ ಬೀಗ ಮುರಿದು ಕಳವು

Last Updated 2 ಅಕ್ಟೋಬರ್ 2022, 5:24 IST
ಅಕ್ಷರ ಗಾತ್ರ

ಹುಲಸೂರ: ಪಟ್ಟಣದ ಹೊರವಲಯದಲ್ಲಿರುವ ರೈತ ಯುವರಾಜ ರಾವಸಾಬ ಇಂಚೂರೆ ಅವರ ಮನೆಯಲ್ಲಿ ಶುಕ್ರವಾರ ಕಳ್ಳತನ ನಡೆದಿದೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಬೀಗ ಮುರಿದು ₹80 ಸಾವಿರ ಮೌಲ್ಯದ ಬಂಗಾರ, ಬೆಳ್ಳಿ ಹಾಗೂ ₹10 ಸಾವಿರ ನಗದು ದೋಚಿಕೊಂಡು ಪರಾರಿಯಾಗಿದ್ದಾರೆ.

ನಂತರ ಹತ್ತಿರದ ಸಾಯಿ ಬಾಬಾ ಮಂದಿರದ ಬೀಗ ಮುರಿದು ಕಾಣಿಕೆ ಹುಂಡಿಒಡೆಯಲು ವಿಫಲ ಪ್ರಯತ್ನ ಮಾಡಿದ್ದಾರೆ. ಪೊಲೀಸರು ಶ್ವಾನ ದಳದ ಜತೆ ಆಗಮಿಸಿ ಪರಿಶೀಲನೆ ನಡೆಸಿದರು.

ಹುಲಸೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಾಧ ದಳದ ಪಿಎಸ್‌ಐ ಸುಭಾಷ್, ಪಿಎಸ್‌ಐ ನಿಂಗಪ್ಪ ಮಣ್ಣುರು, ಪೊಲೀಸ್ ಸಿಬ್ಬಂದಿ ಶ್ರೀಶೈಲ ಗೀರಿ, ಧನರಾಜ ಬಾಲಕುಂದೆ ಸೇರಿದಂತೆ ಶ್ವಾನ ದಳದ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT