<p><strong>ಔರಾದ್: </strong>ಶ್ರೀಗಂಧದ ಮರಗಳಿಗೆ ಕಳ್ಳರ ಕಾಟ ಶುರುವಾಗಿದೆ. ರೈತರಲ್ಲಿ ಆತಂಕ ಮನೆ ಮಾಡಿದೆ.</p>.<p>‘ತಾಲ್ಲೂಕಿನ ಯನಗುಂದಾ ಹಾಗೂ ಸುತ್ತಲಿನ ಗ್ರಾಮಗಳ 100ಕ್ಕೂ ಹೆಚ್ಚು ಶ್ರೀಗಂಧದ ಮರಗಳನ್ನು ಕಳವು ಮಾಡಲಾಗಿದೆ. ರಾತ್ರಿ ಸಮಯದಲ್ಲಿ ಕಳ್ಳರು ಯಂತ್ರದ ಸಹಾಯದಿಂದ ಕಡಿದು ಬೇರೆಡೆ ಸಾಗಿಸುತ್ತಿದ್ದಾರೆ’ ಎಂದು ರೈತ ಬಸಗೊಂಡ ಅವರು ಪೊಲೀಸರು ಹಾಗೂ ಅರಣ್ಯ ಇಲಾಖೆಗೆ ದೂರು ನೀಡಿದ್ದಾರೆ.</p>.<p>ಉತ್ತಮ ಬೆಲೆ ಸಿಗುತ್ತದೆ ಎಂಬ ಕಾರಣಕ್ಕೆ ಶ್ರೀಗಂಧ ನಾಟಿ ಮಾಡಿದ್ದೇವೆ. ಹಲವು ವರ್ಷಗಳಿಂದ ಅವುಗಳನ್ನು ಮಕ್ಕಳಂತೆ ಪೋಷಣೆ ಮಾಡುತ್ತಿದ್ದೇವೆ. ಕಟಾವಿಗೆ ಬಂದಿವೆ. ಕಳ್ಳರ ಪಾಲಾಗುತ್ತಿವೆ. ನಾವು ಹತ್ತಾರು ವರ್ಷಗಳಿಂದ ಬೆವರು ಸುರಿಸಿದ್ದು ವ್ಯರ್ಥವಾಗಿದೆ’ ಎಂದು ರೈತ ಧನರಾಜ ಪಾಟೀಲ ದೂರಿದ್ದಾರೆ.</p>.<p>‘ಶ್ರೀಗಂಧದ ಮರಗಳು ಕಳವಾದ ಕುರಿತು ಪೊಲೀಸರು ಮತ್ತು ಅರಣ್ಯ ಇಲಾಖೆಗೆ ಲಿಖಿತ ದೂರು ನೀಡಲಾಗಿದೆ. ಪ್ರಯೋಜನವಾಗಿಲ್ಲ. ಆರೋಪಿಗಳನ್ನು ಹಿಡಿದು ನಮ್ಮ ಶ್ರೀಗಂಧ ನಮಗೆ ವಾಪಸ್ ಕೊಡಿಸಬೇಕು’ ಎಂದು ಯನಗುಂದಾ ರೈತರು ಆಗ್ರಹಿಸಿದ್ದಾರೆ.</p>.<p>‘ಯನಗುಂದಾ ಗ್ರಾಮದಲ್ಲಿ ಶ್ರೀಗಂಧದ ಮರಗಳು ಕಳವು ಆಗಿರುವುದು ನಿಜ. ಆರೋಪಿಗಳನ್ನು ಪತ್ತೆ ಮಾಡುತ್ತಿದ್ದೇವೆ. ಯನಗುಂದಾ ಶಿವಾರದಲ್ಲಿ ರಾತ್ರಿ ವೇಳೆ ಕಾರ್ಯಾಚರಣೆ ನಡೆಸಿದ್ದೇವೆ’ ಎಂದು ವಲಯ ಅರಣ್ಯಾಧಿಕಾರಿ ಪ್ರೇಮಶೇಖರ್ ಚಾಂದೋರಿ ತಿಳಿಸಿದ್ದಾರೆ.</p>.<p>‘ಔರಾದ್ ಪಟ್ಟಣದ ಮನೆಯೊಂದರಲ್ಲಿ ಸಂಗ್ರಹಿಸಿಟ್ಟಿದ್ದ ಎರಡು ಕ್ವಿಂಟಲ್ ಶ್ರೀಗಂಧದ ಕಟ್ಟಿಗೆ ತುಂಡುಗಳನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಪ್ರಕರಣ ಸಂಬಂಧ ಬಂಧಿತ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿ ತಾಲ್ಲೂಕಿನ ವಿವಿಧೆಡೆ ನಡೆದ ಶ್ರೀಗಂಧ ಕಳವು ಪ್ರಕರಣಗಳನ್ನು ಪತ್ತೆ ಮಾಡಬೇಕು’ ಎಂದು ರೈತ ಮುಖಂಡರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಾದ್: </strong>ಶ್ರೀಗಂಧದ ಮರಗಳಿಗೆ ಕಳ್ಳರ ಕಾಟ ಶುರುವಾಗಿದೆ. ರೈತರಲ್ಲಿ ಆತಂಕ ಮನೆ ಮಾಡಿದೆ.</p>.<p>‘ತಾಲ್ಲೂಕಿನ ಯನಗುಂದಾ ಹಾಗೂ ಸುತ್ತಲಿನ ಗ್ರಾಮಗಳ 100ಕ್ಕೂ ಹೆಚ್ಚು ಶ್ರೀಗಂಧದ ಮರಗಳನ್ನು ಕಳವು ಮಾಡಲಾಗಿದೆ. ರಾತ್ರಿ ಸಮಯದಲ್ಲಿ ಕಳ್ಳರು ಯಂತ್ರದ ಸಹಾಯದಿಂದ ಕಡಿದು ಬೇರೆಡೆ ಸಾಗಿಸುತ್ತಿದ್ದಾರೆ’ ಎಂದು ರೈತ ಬಸಗೊಂಡ ಅವರು ಪೊಲೀಸರು ಹಾಗೂ ಅರಣ್ಯ ಇಲಾಖೆಗೆ ದೂರು ನೀಡಿದ್ದಾರೆ.</p>.<p>ಉತ್ತಮ ಬೆಲೆ ಸಿಗುತ್ತದೆ ಎಂಬ ಕಾರಣಕ್ಕೆ ಶ್ರೀಗಂಧ ನಾಟಿ ಮಾಡಿದ್ದೇವೆ. ಹಲವು ವರ್ಷಗಳಿಂದ ಅವುಗಳನ್ನು ಮಕ್ಕಳಂತೆ ಪೋಷಣೆ ಮಾಡುತ್ತಿದ್ದೇವೆ. ಕಟಾವಿಗೆ ಬಂದಿವೆ. ಕಳ್ಳರ ಪಾಲಾಗುತ್ತಿವೆ. ನಾವು ಹತ್ತಾರು ವರ್ಷಗಳಿಂದ ಬೆವರು ಸುರಿಸಿದ್ದು ವ್ಯರ್ಥವಾಗಿದೆ’ ಎಂದು ರೈತ ಧನರಾಜ ಪಾಟೀಲ ದೂರಿದ್ದಾರೆ.</p>.<p>‘ಶ್ರೀಗಂಧದ ಮರಗಳು ಕಳವಾದ ಕುರಿತು ಪೊಲೀಸರು ಮತ್ತು ಅರಣ್ಯ ಇಲಾಖೆಗೆ ಲಿಖಿತ ದೂರು ನೀಡಲಾಗಿದೆ. ಪ್ರಯೋಜನವಾಗಿಲ್ಲ. ಆರೋಪಿಗಳನ್ನು ಹಿಡಿದು ನಮ್ಮ ಶ್ರೀಗಂಧ ನಮಗೆ ವಾಪಸ್ ಕೊಡಿಸಬೇಕು’ ಎಂದು ಯನಗುಂದಾ ರೈತರು ಆಗ್ರಹಿಸಿದ್ದಾರೆ.</p>.<p>‘ಯನಗುಂದಾ ಗ್ರಾಮದಲ್ಲಿ ಶ್ರೀಗಂಧದ ಮರಗಳು ಕಳವು ಆಗಿರುವುದು ನಿಜ. ಆರೋಪಿಗಳನ್ನು ಪತ್ತೆ ಮಾಡುತ್ತಿದ್ದೇವೆ. ಯನಗುಂದಾ ಶಿವಾರದಲ್ಲಿ ರಾತ್ರಿ ವೇಳೆ ಕಾರ್ಯಾಚರಣೆ ನಡೆಸಿದ್ದೇವೆ’ ಎಂದು ವಲಯ ಅರಣ್ಯಾಧಿಕಾರಿ ಪ್ರೇಮಶೇಖರ್ ಚಾಂದೋರಿ ತಿಳಿಸಿದ್ದಾರೆ.</p>.<p>‘ಔರಾದ್ ಪಟ್ಟಣದ ಮನೆಯೊಂದರಲ್ಲಿ ಸಂಗ್ರಹಿಸಿಟ್ಟಿದ್ದ ಎರಡು ಕ್ವಿಂಟಲ್ ಶ್ರೀಗಂಧದ ಕಟ್ಟಿಗೆ ತುಂಡುಗಳನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಪ್ರಕರಣ ಸಂಬಂಧ ಬಂಧಿತ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿ ತಾಲ್ಲೂಕಿನ ವಿವಿಧೆಡೆ ನಡೆದ ಶ್ರೀಗಂಧ ಕಳವು ಪ್ರಕರಣಗಳನ್ನು ಪತ್ತೆ ಮಾಡಬೇಕು’ ಎಂದು ರೈತ ಮುಖಂಡರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>