ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸೇರಿ ಪ್ರತಿ ವರ್ಷ ಜ. 29ಕ್ಕೆ ಪ್ರೀತಿ, ಅಭಿಮಾನದಿಂದ ತಮ್ಮ ಜನ್ಮದಿನ ಕಾರ್ಯಕ್ರಮ ಸಂಘಟಿಸುತ್ತಿದ್ದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕೇಕ್ ಕತ್ತರಿಸುತ್ತಿದ್ದೆ. ಆದರೆ, ಈ ವರ್ಷ ಕೋವಿಡ್ನಿಂದ ಇಡೀ ವಿಶ್ವವೇ ತೊಂದರೆಯಲ್ಲಿದೆ. ಬೀದರ್ ಸೇರಿ ಕಲ್ಯಾಣ ಕರ್ನಾಟಕ ಭಾಗದ ಜನ ಅತಿವೃಷ್ಟಿ ಹೊಡೆತಕ್ಕೆ ಒಳಗಾಗಿದ್ದಾರೆ. ಇಂಥ ಸಂದರ್ಭದಲ್ಲಿ ಸಾರ್ವಜನಿಕವಾಗಿ ಸಂಭ್ರಮ ಆಚರಿಸುವುದು ಸರಿಯಲ್ಲ ಎನ್ನುವ ಕಾರಣಕ್ಕೆ ಜನ್ಮದಿನ ಆಚರಣೆ ಮಾಡಿಕೊಳ್ಳದೇ ಇರಲು ತೀರ್ಮಾನಿಸಿದ್ದೇನೆ.