ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ಹೊಂಡದಲ್ಲಿ ಬಿದ್ದು ಮೂವರು ಸಹೋದರರ ಸಾವು

Last Updated 4 ಆಗಸ್ಟ್ 2020, 16:04 IST
ಅಕ್ಷರ ಗಾತ್ರ

ಭಾಲ್ಕಿ (ಬೀದರ್‌ ಜಿಲ್ಲೆ):ತಾಲ್ಲೂಕಿನ ಚಳಕಾಪೂರವಾಡಿ ಗ್ರಾಮದಲ್ಲಿಮಂಗಳವಾರ ಕೃಷಿ ಹೊಂಡದಲ್ಲಿ ಬಿದ್ದುಒಂದೇ ಕುಟುಂಬದ ಮೂವರು ಮಕ್ಕಳು ಮೃತಪಟ್ಟಿದ್ದಾರೆ.

ಧೂಳಪ್ಪ ಬನ್ನಾಳೆ ಅವರ ಕಿರಿಯ ಮಗ ಹಣಮಂತ ರೆಡ್ಡಿ (16) ಪಕ್ಕದ ಜಮೀನಿನಲ್ಲಿರುವ ಕೃಷಿ ಹೊಂಡದಲ್ಲಿ ಮುಖ ತೊಳೆದುಕೊಳ್ಳಲು ಹೋದಾಗ ಕಾಲು ಜಾರಿ ನೀರಿನಲ್ಲಿ ಬಿದ್ದಿದ್ದಾನೆ. 18 ವರ್ಷದ ಎರಡನೇ ಮಗ ಕರಿಬಸವ ರೆಡ್ಡಿ ಸಹೋದರನನ್ನು ರಕ್ಷಿಸಲು ಹೋಗಿ ಅವನೂ ಹೊಂಡದಲ್ಲಿ ಬಿದ್ದಿದ್ದಾನೆ. ಇವರಿಬ್ಬರನ್ನು ರಕ್ಷಿಸಲು ಹೋದ 20 ವರ್ಷದ ಹಿರಿಯ ಸಹೋದರ ವೀರೇಂದ್ರರೆಡ್ಡಿ ನೀರಿನಲ್ಲಿ ಬಿದ್ದಿದ್ದಾನೆ. ಯಾರಿಗೂ ಈಜು ಬಾರದ ಕಾರಣ ಮೂವರೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT