ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

Published 9 ಮೇ 2024, 14:16 IST
Last Updated 9 ಮೇ 2024, 14:16 IST
ಅಕ್ಷರ ಗಾತ್ರ

ಬೀದರ್‌: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

ಹಿರಿಯ ಸಿವಿಲ್‌ ನ್ಯಾಯಾಧೀಶರೂ ಆದ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಕೆ.ಕನಕಟ್ಟೆ ಅವರು ಮೂವರು ದಂಪತಿಗೆ ಸಂಸಾರದ ಮಹತ್ವದ ಮನವರಿಕೆ ಮಾಡಿಸಿ ಒಂದು ಮಾಡಿದರು.

ಬೀದರ್‌ನ ಮೈಲೂರಿನ ಸುಮಯ್ಯಾ ಬೇಗಂ ಹಾಗೂ ಶಮಿ, ನೌಬಾದಿನ ಪೂಜಾ ಹಾಗೂ ಸಂತೋಷ, ನೌಬಾದ್‌ನವರೇ ಆದ ಸುಕೃತಾ ಹಾಗೂ ರಾಹುಲ್‌ ಪುನಃ ಒಂದಾದ ಜೋಡಿ. ಸಣ್ಣಪುಟ್ಟ ಕಾರಣಗಳಿಗಾಗಿ ದಂಪತಿ ಠಾಣೆ ಮೆಟ್ಟಿಲೇರಿದ್ದರು. 

‘ಮದುವೆ ಮತ್ತು ಕುಟುಂಬಕ್ಕೆ ಸಾಮಾಜಿಕವಾಗಿ ಹೆಚ್ಚಿನ ಮಹತ್ವ ಇದೆ. ಸಂಸಾರದಲ್ಲಿ ಭಾವನೆ, ಸಾಮರಸ್ಯ ಮತ್ತು ಸಂಸ್ಕೃತಿಗೆ ವಿಶೇಷ ಮಹತ್ವ ಇದೆ. ಕುಟುಂಬ ಸಂತಸವಾಗಿದ್ದರೆ ಇಡೀ ಸಮುದಾಯ ಮತ್ತು ಸಮಾಜ ಎರಡೂ ಸುಂದರವಾಗಿರುತ್ತದೆ. ಚಿಕ್ಕ ಪುಟ್ಟ ವಿಚಾರಗಳಿಗೆ ಪೋಲಿಸ್ ಠಾಣೆ, ನ್ಯಾಯಾಲಯಕ್ಕೆ ಅಲೆದಾಡುವ ಬದಲು ಮನೆಯ ಹಿರಿಯರು ಹುಡುಗ/ಹುಡುಗಿಯ ಸಮಸ್ಯೆಯನ್ನು ಆಲಿಸಿ ಸಮಸ್ಯೆ ಇತ್ಯರ್ಥಪಡಿಸಿದರೆ ಉತ್ತಮ. ನೆಮ್ಮದಿಯಿಂದ ಬಾಳಿದರೆ ಸಂಸಾರಕ್ಕೊಂದು ಅರ್ಥ’ ಎಂದು ಎಸ್.ಕೆ.ಕನಕಟ್ಟೆ ಹೇಳಿದರು.

ಮಹಿಳಾ  ಪೋಲಿಸ್‌ ಠಾಣೆ ಸಿಪಿಐ ರಾಮಪ್ಪ ಸಾವಳಗಿ, ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ಗುಂಡುರೆಡ್ಡಿ, ಲೋಕಾಯುಕ್ತ ಅಭಿಯೋಜಕ ಕೇಶವ ಶ್ರೀಮಾಳೆ, ಹಿರಿಯ ವಕೀಲ ಬಿ.ಎಸ್ ಪಾಟೀಲ, ಪ್ರಾಧಿಕಾರದ ಸಿಬ್ಬಂದಿ ಜಗದೀಶ್ವರ ದೊರೆ, ಆಕಾಶ ಸಜ್ಜನ, ರಾಹುಲ್‌, ಪ್ರೀತಿ ಜಿ.ಕೆ., ಜೀವನ್‌, ಯೋಹಾನ ಕಾಳೆ, ಈರಮ್ಮ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT