ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂರು ಸುತ್ತು ಗುಂಡು ಹಾರಿಸಿದ ಪಿಎಸ್‌ಐ

ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ ಸರಗಳ್ಳರು
Last Updated 29 ನವೆಂಬರ್ 2020, 16:09 IST
ಅಕ್ಷರ ಗಾತ್ರ

ಬೀದರ್‌: ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಇಬ್ಬರು ಸರಗಳ್ಳರ ಮೇಲೆ ಪಿಎಸ್‌ಐ ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ, ವಶಕ್ಕೆ ಪಡೆದುಕೊಂಡ ಘಟನೆ ಭಾನುವಾರ ಹುಮನಾಬಾದ್‌ ಹೊರವಲಯದಲ್ಲಿ ನಡೆದಿದೆ.

ಬೀದರ್‌ನ ಇರಾನಿ ಗಲ್ಲಿಯ ಜಾವೇದ್ ಖಾನ್ ಮತ್ತು ಶಾದುಲ್ಲಾ ಬಂಧಿತ ಆರೋಪಿಗಳು.

ಸರಗಳ್ಳರು ಬೈಕ್‌ನಲ್ಲಿ ಹುಮನಾಬಾದ್‌ನತ್ತ ಹೊರಟಿರುವ ಬಗ್ಗೆ ದೊರೆತ ಮಾಹಿತಿ ಹಿನ್ನೆಲೆಯಲ್ಲಿ ಹುಮನಾಬಾದ್ ಪೊಲೀಸ್ ಠಾಣೆ ಪಿಎಸ್ಐಗಳಾದ ರವಿಕುಮಾರ, ಕಿರಣಕುಮಾರ ನೇತೃತ್ವದ ತಂಡ ಹೆದ್ದಾರಿಯಲ್ಲಿ ನಿಗಾ ವಹಿಸಿತ್ತು.

ಬೈಕ್‌ ತಡೆಯಲು ಮುಂದಾದಾಗ, ಆರೋಪಿಗಳು ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದರು. ಆಗ ರವಿಕುಮಾರ ಗಾಳಿಯಲ್ಲಿ ಗುಂಡು ಹಾರಿಸಿದರು. ರವಿಕುಮಾರ, ಕಿರಣಕುಮಾರ, ಕಾನ್‌ಸ್ಟೆಬಲ್ ಭಗವಾನ ಮತ್ತು ನವೀನ್ ಅವರಿಗೆ ಗಾಯಗಳಾಗಿವೆ.

ಜಿಲ್ಲಾ ಹೆಚ್ಚುವರಿ ಜಿಲ್ಲಾ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಗೋಪಾಲ್‌ ಬ್ಯಾಕೋಡಿ, ಡಿವೈಎಸ್‌ಪಿ ಹಾಗೂ ಸಿಪಿಐ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT