<p><strong>ಬೀದರ್: </strong>ಜಿಲ್ಲೆಯ ವಿವಿಧೆಡೆ ಶನಿವಾರ ಗುಡುಗು, ಮಿಂಚು ಸಹಿತ ಮಳೆಯಾಗಿದೆ. ಸಿಡಿಲು ಬಡಿದು ಔರಾದ್ ತಾಲ್ಲೂಕಿನ ಮೆಡಪಳ್ಳಿ ಗ್ರಾಮದಲ್ಲಿ ಮಹಿಳೆ ಮೃತಪಟ್ಟಿದ್ದಾರೆ. ಚಿಟಗುಪ್ಪ ತಾಲ್ಲೂಕಿನ ಕುಡಂಬಲ್ ಗ್ರಾಮದಲ್ಲಿ ಎಮ್ಮೆ ಸಾವನ್ನಪ್ಪಿದೆ.</p>.<p>ಕಮಲನಗರ, ಹುಲಸೂರು, ಭಾಲ್ಕಿ ಸೇರಿ ವಿವಿಧೆಡೆ ಕೆಲ ಕಾಲ ತುಂತುರು ಮಳೆ ಸುರಿದಿದೆ. ಮಧ್ಯಾಹ್ನದ ನಂತರ ಜಿಲ್ಲೆಯಲ್ಲಿ ವಾತಾವರಣದಲ್ಲಿ ಬದಲಾವಣೆ ಉಂಟಾಯಿತು. ಆಗಸದಲ್ಲಿ ಮೊಡಗಳು ಆವರಿಸಿದವು. ಮಿಂಚು, ಗುಡುಗಿನ ಸದ್ದು ಕೇಳಿಸಿತು. ಬಿರುಗಾಳಿಯೂ ಬೀಸಿತು.</p>.<p>ಕೋವಿಡ್ ಸೋಂಕಿನ ಕಾರಣ ವಿಧಿಸಲಾದ ಕರ್ಫ್ಯೂ ಪ್ರಯುಕ್ತ ಮನೆಯಲ್ಲೇ ಇರುವ ಸಾರ್ವಜನಿಕರು ಪ್ರಖರ ಬಿಸಿಲಿನಿಂದಾಗಿ ಬೀಸುತ್ತಿರುವ ಬಿಸಿ ಗಾಳಿಯಿಂದ ಕಂಗೆಟ್ಟಿದ್ದರು. ವಾತಾವರಣ ಬದಲಾಗಿ, ಸಂಜೆ ತಣ್ಣನೆಯ ಗಾಳಿ ಬೀಸಿದ್ದರಿಂದ ನೆಮ್ಮದಿಯ ನಿಟ್ಟುಸಿರು ಬಿಟ್ಟರು.</p>.<p class="Subhead"><strong>ಮಹಿಳೆ ಸಾವು:</strong> ಔರಾದ್ ತಾಲ್ಲೂಕಿನ ಮೆಡಪಳ್ಳಿ ಗ್ರಾಮದಲ್ಲಿ ಶನಿವಾರ ಸಂಜೆ ಮಹಿಳೆಯೊಬ್ಬರು ಸಿಡಿಲು ಬಡಿದು ಮೃತಪಟ್ಟಿದ್ದಾರೆ.</p>.<p>ಅನಿತಾ ಬಸಯ್ಯ ಸ್ವಾಮಿ (35) ಮೃತ ಮಹಿಳೆ. ಹೊಲದಿಂದ ಮನೆಗೆ ಬರುವಾಗ ಮಾರ್ಗದಲ್ಲಿ ಸಿಡಿಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಈ ಸಂಬಂಧ ಚಿಂತಾಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಎಸ್ಐ ಅಶೋಕ, ಪೇದೆ ಮಹೇಂದ್ರ, ಪ್ರಕಾಶ ಸ್ಥಳಕ್ಕೆ ಭೇಟಿ ನೀಡಿದ್ದರು.</p>.<p class="Subhead"><strong>ಗುಡುಗು ಸಹಿತ ಮಳೆ: </strong>ಖಟಕಚಿಂಚೋಳಿ ಪಟ್ಟಣದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಶನಿವಾರ ಸಂಜೆ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಗುಡುಗು ಸಹಿತ ಮಳೆ ಸುರಿಯಿತು.</p>.<p>ಮಧ್ಯಾಹ್ನ ನಾಲ್ಕು ಗಂಟೆಯವರೆಗೆ ಕಡು ಬಿಸಿಲಿನಿಂದ ಕೂಡಿದ ವಾತಾವರಣವಿತ್ತು. ಆದರೆ ಸಂಜೆ ಸುರಿದ ಮಳೆಯಿಂದಾಗಿ ಮನೆಗಳ ಮೇಲಿನ ತಗಡಿನ ಶೀಟ್ (ಪತ್ರಾಸ್)ಗಳು ಹಾರಿಬಿದ್ದಿವೆ. ರಸ್ತೆಯ ತುಂಬಾ ನೀರು ಹರಿಯಿತು.</p>.<p>ಕಲಬುರ್ಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ವಿವಿಧೆಡೆ, ಚಿಂಚೋಳಿ ತಾಲ್ಲೂಕಿನ ಗಡಿಲಿಂಗದಳ್ಳಿ ಸುತ್ತಮುತ್ತ ಶನಿವಾರ ಆಲಿಕಲ್ಲು ಸಹಿತ ಜೋರು ಮಳೆಯಾಯಿತು. ಕಾಳಗಿ ತಾಲ್ಲೂಕಿನಲ್ಲಿ ಗುಡುಗು, ಗಾಳಿ ಸಹಿತ ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ಜಿಲ್ಲೆಯ ವಿವಿಧೆಡೆ ಶನಿವಾರ ಗುಡುಗು, ಮಿಂಚು ಸಹಿತ ಮಳೆಯಾಗಿದೆ. ಸಿಡಿಲು ಬಡಿದು ಔರಾದ್ ತಾಲ್ಲೂಕಿನ ಮೆಡಪಳ್ಳಿ ಗ್ರಾಮದಲ್ಲಿ ಮಹಿಳೆ ಮೃತಪಟ್ಟಿದ್ದಾರೆ. ಚಿಟಗುಪ್ಪ ತಾಲ್ಲೂಕಿನ ಕುಡಂಬಲ್ ಗ್ರಾಮದಲ್ಲಿ ಎಮ್ಮೆ ಸಾವನ್ನಪ್ಪಿದೆ.</p>.<p>ಕಮಲನಗರ, ಹುಲಸೂರು, ಭಾಲ್ಕಿ ಸೇರಿ ವಿವಿಧೆಡೆ ಕೆಲ ಕಾಲ ತುಂತುರು ಮಳೆ ಸುರಿದಿದೆ. ಮಧ್ಯಾಹ್ನದ ನಂತರ ಜಿಲ್ಲೆಯಲ್ಲಿ ವಾತಾವರಣದಲ್ಲಿ ಬದಲಾವಣೆ ಉಂಟಾಯಿತು. ಆಗಸದಲ್ಲಿ ಮೊಡಗಳು ಆವರಿಸಿದವು. ಮಿಂಚು, ಗುಡುಗಿನ ಸದ್ದು ಕೇಳಿಸಿತು. ಬಿರುಗಾಳಿಯೂ ಬೀಸಿತು.</p>.<p>ಕೋವಿಡ್ ಸೋಂಕಿನ ಕಾರಣ ವಿಧಿಸಲಾದ ಕರ್ಫ್ಯೂ ಪ್ರಯುಕ್ತ ಮನೆಯಲ್ಲೇ ಇರುವ ಸಾರ್ವಜನಿಕರು ಪ್ರಖರ ಬಿಸಿಲಿನಿಂದಾಗಿ ಬೀಸುತ್ತಿರುವ ಬಿಸಿ ಗಾಳಿಯಿಂದ ಕಂಗೆಟ್ಟಿದ್ದರು. ವಾತಾವರಣ ಬದಲಾಗಿ, ಸಂಜೆ ತಣ್ಣನೆಯ ಗಾಳಿ ಬೀಸಿದ್ದರಿಂದ ನೆಮ್ಮದಿಯ ನಿಟ್ಟುಸಿರು ಬಿಟ್ಟರು.</p>.<p class="Subhead"><strong>ಮಹಿಳೆ ಸಾವು:</strong> ಔರಾದ್ ತಾಲ್ಲೂಕಿನ ಮೆಡಪಳ್ಳಿ ಗ್ರಾಮದಲ್ಲಿ ಶನಿವಾರ ಸಂಜೆ ಮಹಿಳೆಯೊಬ್ಬರು ಸಿಡಿಲು ಬಡಿದು ಮೃತಪಟ್ಟಿದ್ದಾರೆ.</p>.<p>ಅನಿತಾ ಬಸಯ್ಯ ಸ್ವಾಮಿ (35) ಮೃತ ಮಹಿಳೆ. ಹೊಲದಿಂದ ಮನೆಗೆ ಬರುವಾಗ ಮಾರ್ಗದಲ್ಲಿ ಸಿಡಿಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಈ ಸಂಬಂಧ ಚಿಂತಾಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಎಸ್ಐ ಅಶೋಕ, ಪೇದೆ ಮಹೇಂದ್ರ, ಪ್ರಕಾಶ ಸ್ಥಳಕ್ಕೆ ಭೇಟಿ ನೀಡಿದ್ದರು.</p>.<p class="Subhead"><strong>ಗುಡುಗು ಸಹಿತ ಮಳೆ: </strong>ಖಟಕಚಿಂಚೋಳಿ ಪಟ್ಟಣದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಶನಿವಾರ ಸಂಜೆ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಗುಡುಗು ಸಹಿತ ಮಳೆ ಸುರಿಯಿತು.</p>.<p>ಮಧ್ಯಾಹ್ನ ನಾಲ್ಕು ಗಂಟೆಯವರೆಗೆ ಕಡು ಬಿಸಿಲಿನಿಂದ ಕೂಡಿದ ವಾತಾವರಣವಿತ್ತು. ಆದರೆ ಸಂಜೆ ಸುರಿದ ಮಳೆಯಿಂದಾಗಿ ಮನೆಗಳ ಮೇಲಿನ ತಗಡಿನ ಶೀಟ್ (ಪತ್ರಾಸ್)ಗಳು ಹಾರಿಬಿದ್ದಿವೆ. ರಸ್ತೆಯ ತುಂಬಾ ನೀರು ಹರಿಯಿತು.</p>.<p>ಕಲಬುರ್ಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ವಿವಿಧೆಡೆ, ಚಿಂಚೋಳಿ ತಾಲ್ಲೂಕಿನ ಗಡಿಲಿಂಗದಳ್ಳಿ ಸುತ್ತಮುತ್ತ ಶನಿವಾರ ಆಲಿಕಲ್ಲು ಸಹಿತ ಜೋರು ಮಳೆಯಾಯಿತು. ಕಾಳಗಿ ತಾಲ್ಲೂಕಿನಲ್ಲಿ ಗುಡುಗು, ಗಾಳಿ ಸಹಿತ ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>