<p><strong>ಬೆಂಗಳೂರು: </strong>ನಗರದಲ್ಲಿ ಕೆಲ ದಿನ ಬಿಡುವು ನೀಡಿದ್ದ ಮಳೆ, ಮಂಗಳವಾರ ಮಧ್ಯಾಹ್ನ ಹಾಗೂ ರಾತ್ರಿ ಧಾರಾಕಾರವಾಗಿ ಸುರಿಯಿತು. ಗುಡುಗು–ಸಿಡಿಲಿನ ಅಬ್ಬರವೂ ಜೋರಾಗಿತ್ತು.</p>.<p>ನಗರದ ಹಲವೆಡೆ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನ 3 ಗಂಟೆ ಸುಮಾರಿಗೆ ಹಲವೆಡೆ ಜಿಟಿ ಜಿಟಿಯಾಗಿ ಮಳೆ ಆರಂಭವಾಯಿತು. ನಂತರ ಮಳೆ ಅಬ್ಬರ ಜೋರಾಗಿತ್ತು. ಸಂಜೆ ಬಿಡುವು ಕೊಟ್ಟ ಮಳೆ, ರಾತ್ರಿ 9ರ ಸುಮಾರಿಗೆ ಪುನಃ ಜೋರಾಗಿ ಸುರಿಯಿತು.</p>.<p>ಹೆಣ್ಣೂರು, ನಾಗವಾರ, ರಾಜಾಜಿನಗರ, ಬಸವೇಶ್ವರ ನಗರ, ವಿಜಯನಗರ, ನಂದಿನಿ ಲೇಔಟ್, ಪೀಣ್ಯ, ಮಲ್ಲೇಶ್ವರ, ಸಂಜಯನಗರ, ಆರ್.ಟಿ.ನಗರ, ಹೆಬ್ಬಾಳ, ಯಶವಂತಪುರ, ಕತ್ರಿಗುಪ್ಪೆ, ಬನಶಂಕರಿ, ಬಸವನಗುಡಿ, ಗಿರಿನಗರ, ರಾಜರಾಜೇಶ್ವರಿನಗರ, ಕೆಂಗೇರಿ, ದೀಪಾಂಜಲಿನಗರ, ಚಾಮರಾಜಪೇಟೆ, ಶಿವಾಜಿನಗರ, ಕೋರಮಂಗಲ, ಅಶೋಕನಗರ ಹಾಗೂ ಸುತ್ತಮುತ್ತ ಸ್ಥಳಗಳಲ್ಲಿ ಮಳೆ ಇತ್ತು.</p>.<p>ಮಳೆಯಿಂದಾಗಿ ಮೆಜೆಸ್ಟಿಕ್, ಶ್ರೀರಾಮಪುರ, ಶಿವಾನಂದ ವೃತ್ತದ ಕೆಲ ರಸ್ತೆಗಳ ಮೇಲೆಯೇ ನೀರು ಹರಿಯತು. ಅದರಲ್ಲೇ ವಾಹನಗಳು ಸಂಚರಿಸಿದವು. ರೈಲ್ವೆ ಕೆಳಸೇತುವೆಯಲ್ಲೂ ನೀರು ನಿಂತಿತ್ತು. ನೀರಿನಲ್ಲೇ ರಸ್ತೆ ದಾಟಲು ಮುಂದಾಗಿದ್ದ ಕೆಲ ವಾಹನಗಳು ಕೆಟ್ಟು ನಿಂತಿದ್ದು ಕಂಡುಬಂತು.</p>.<p>ರೇಸ್ಕೋರ್ಸ್ ರಸ್ತೆಯಲ್ಲಿ ಕಾಮಗಾರಿ ನಡೆಯುತ್ತಿದ್ದು, ಅದಕ್ಕಾಗಿ ಗುಂಡಿಗಳನ್ನು ಅಗೆಯಲಾಗಿದೆ. ಮಳೆಯಿಂದಾಗಿ ಗುಂಡಿಯಲ್ಲಿ ನೀರು ತುಂಬಿಕೊಂಡು ರಸ್ತೆ ಮೇಲೆಯೇ ಹರಿಯಿತು.</p>.<p>’ನಗರದ ಬಹುತೇಕ ಕಡೆ ಮಳೆಯಾಗಿದೆ. ಗುಡುಗು–ಸಿಡಿಲು ಮಾತ್ರ ಇತ್ತು. ಗಾಳಿ ವೇಗವಾಗಿರಲಿಲ್ಲ. ರಸ್ತೆಯಲ್ಲಿ ನೀರು ನಿಂತಿದ್ದು ಬಿಟ್ಟರೆ ಬೇರೆ ಯಾವ ರೀತಿಯ ದೂರುಗಳು ಬಂದಿಲ್ಲ’ ಎಂದು ಬಿಬಿಎಂಪಿ ಸಹಾಯವಾಣಿ ಸಿಬ್ಬಂದಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನಗರದಲ್ಲಿ ಕೆಲ ದಿನ ಬಿಡುವು ನೀಡಿದ್ದ ಮಳೆ, ಮಂಗಳವಾರ ಮಧ್ಯಾಹ್ನ ಹಾಗೂ ರಾತ್ರಿ ಧಾರಾಕಾರವಾಗಿ ಸುರಿಯಿತು. ಗುಡುಗು–ಸಿಡಿಲಿನ ಅಬ್ಬರವೂ ಜೋರಾಗಿತ್ತು.</p>.<p>ನಗರದ ಹಲವೆಡೆ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನ 3 ಗಂಟೆ ಸುಮಾರಿಗೆ ಹಲವೆಡೆ ಜಿಟಿ ಜಿಟಿಯಾಗಿ ಮಳೆ ಆರಂಭವಾಯಿತು. ನಂತರ ಮಳೆ ಅಬ್ಬರ ಜೋರಾಗಿತ್ತು. ಸಂಜೆ ಬಿಡುವು ಕೊಟ್ಟ ಮಳೆ, ರಾತ್ರಿ 9ರ ಸುಮಾರಿಗೆ ಪುನಃ ಜೋರಾಗಿ ಸುರಿಯಿತು.</p>.<p>ಹೆಣ್ಣೂರು, ನಾಗವಾರ, ರಾಜಾಜಿನಗರ, ಬಸವೇಶ್ವರ ನಗರ, ವಿಜಯನಗರ, ನಂದಿನಿ ಲೇಔಟ್, ಪೀಣ್ಯ, ಮಲ್ಲೇಶ್ವರ, ಸಂಜಯನಗರ, ಆರ್.ಟಿ.ನಗರ, ಹೆಬ್ಬಾಳ, ಯಶವಂತಪುರ, ಕತ್ರಿಗುಪ್ಪೆ, ಬನಶಂಕರಿ, ಬಸವನಗುಡಿ, ಗಿರಿನಗರ, ರಾಜರಾಜೇಶ್ವರಿನಗರ, ಕೆಂಗೇರಿ, ದೀಪಾಂಜಲಿನಗರ, ಚಾಮರಾಜಪೇಟೆ, ಶಿವಾಜಿನಗರ, ಕೋರಮಂಗಲ, ಅಶೋಕನಗರ ಹಾಗೂ ಸುತ್ತಮುತ್ತ ಸ್ಥಳಗಳಲ್ಲಿ ಮಳೆ ಇತ್ತು.</p>.<p>ಮಳೆಯಿಂದಾಗಿ ಮೆಜೆಸ್ಟಿಕ್, ಶ್ರೀರಾಮಪುರ, ಶಿವಾನಂದ ವೃತ್ತದ ಕೆಲ ರಸ್ತೆಗಳ ಮೇಲೆಯೇ ನೀರು ಹರಿಯತು. ಅದರಲ್ಲೇ ವಾಹನಗಳು ಸಂಚರಿಸಿದವು. ರೈಲ್ವೆ ಕೆಳಸೇತುವೆಯಲ್ಲೂ ನೀರು ನಿಂತಿತ್ತು. ನೀರಿನಲ್ಲೇ ರಸ್ತೆ ದಾಟಲು ಮುಂದಾಗಿದ್ದ ಕೆಲ ವಾಹನಗಳು ಕೆಟ್ಟು ನಿಂತಿದ್ದು ಕಂಡುಬಂತು.</p>.<p>ರೇಸ್ಕೋರ್ಸ್ ರಸ್ತೆಯಲ್ಲಿ ಕಾಮಗಾರಿ ನಡೆಯುತ್ತಿದ್ದು, ಅದಕ್ಕಾಗಿ ಗುಂಡಿಗಳನ್ನು ಅಗೆಯಲಾಗಿದೆ. ಮಳೆಯಿಂದಾಗಿ ಗುಂಡಿಯಲ್ಲಿ ನೀರು ತುಂಬಿಕೊಂಡು ರಸ್ತೆ ಮೇಲೆಯೇ ಹರಿಯಿತು.</p>.<p>’ನಗರದ ಬಹುತೇಕ ಕಡೆ ಮಳೆಯಾಗಿದೆ. ಗುಡುಗು–ಸಿಡಿಲು ಮಾತ್ರ ಇತ್ತು. ಗಾಳಿ ವೇಗವಾಗಿರಲಿಲ್ಲ. ರಸ್ತೆಯಲ್ಲಿ ನೀರು ನಿಂತಿದ್ದು ಬಿಟ್ಟರೆ ಬೇರೆ ಯಾವ ರೀತಿಯ ದೂರುಗಳು ಬಂದಿಲ್ಲ’ ಎಂದು ಬಿಬಿಎಂಪಿ ಸಹಾಯವಾಣಿ ಸಿಬ್ಬಂದಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>