<p><br /><br />ಬೀದರ್: ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಯ ಮಾರ್ಗಗಳಲ್ಲಿ ಸ್ಥಾಪಿಸಲಾಗಿರುವ ಚೆಕ್ಪೋಸ್ಟ್ಗಳಲ್ಲಿ ಪೊಲೀಸ್ ಸಿಬ್ಬಂದಿಯನ್ನು ಹೆಚ್ಚಿಸಲಾಗಿದ್ದು, ತಪಾಸಣೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.</p>.<p>ಔರಾದ್ ತಾಲ್ಲೂಕಿನ ವನಮಾರಪಳ್ಳಿ, ಕಮಲನಗರ, ಕಮಲನಗರ ತಾಲ್ಲೂಕಿನ ಚಿಕ್ಲಿ, ಹುಲಸೂರು ತಾಲ್ಲೂಕಿನ ಅಂಬೇವಾಡಿ ಹಾಗೂ ಬಸವಕಲ್ಯಾಣ ತಾಲ್ಲೂಕಿನ ಚಂಡಕಾಪುರ ಚೆಕ್ಪೋಸ್ಟ್ಗಳ ಮಾರ್ಗವಾಗಿ ಬರುತ್ತಿರುವ ಪ್ರತಿಯೊಬ್ಬ ವ್ಯಕ್ತಿಯ ಕೋವಿಡ್ ನೆಗೆಟಿವ್ ವರದಿ ಪರಿಶೀಲಿಸಿದ ನಂತರವೇ ಅವಕಾಶ ಕಲ್ಪಿಸಲಾಯಿತು.</p>.<p>ತಪಾಸಣೆ ಬಿಗಿಗೊಳಿಸಿದ ಕಾರಣ ಜಿಲ್ಲೆಯೊಳಗೆ ಬರುವವರ ಸಂಖ್ಯೆ ಸ್ವಲ್ಪ ಕಡಿಮಾಗಿದೆ. ದ್ವಿಚಕ್ರ ವಾಹನದ ಮೇಲೆ ಮಾಸ್ಕ್ ಧರಿಸದೆ ಬಂದವರಿಗೆ ಪೊಲೀಸರು ಎಚ್ಚರಿಕೆ ನೀಡಿ ಬಿಸಿ ಮುಟ್ಟಿಸಿದರು.</p>.<p>ಬಂದ್ ಇದ್ದರೂ ಅನಗತ್ಯ ತಿರುಗಾಟ:<br />ಜಿಲ್ಲೆಯಲ್ಲಿ ಕರ್ಫ್ಯೂ ಜಾರಿ ಇರುವ ಕಾರಣ ಭಾನುವಾರ ಮಧ್ಯಾಹ್ನ 2 ಗಂಟೆಗೆ ಎಲ್ಲ ಅಂಗಡಿಗಳು ಮುಚ್ಚಿದ್ದವು. ಆದರೆ, ಸಾರ್ವಜನಿಕರ ಓಡಾಟ ನಿಂತಿರಲಿಲ್ಲ. ದ್ವಿಚಕ್ರ ವಾಹನಗಳ ಮೇಲೆ ಸಂಚರಿಸುವುದು ಮುಂದುವರಿದಿತ್ತು.<br />ಬೆಳಿಗ್ಗೆ ಮಾರುಕಟ್ಟೆಯಲ್ಲಿ ಬಹುತೇಕ ಜನ ಮಾಸ್ಕ್ ಧರಿಸದೆ ಅಲೆದಾಡುತ್ತಿದ್ದರು. ಅಂತರ ಸಹ ಕಾಯ್ದುಕೊಂಡಿರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><br /><br />ಬೀದರ್: ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಯ ಮಾರ್ಗಗಳಲ್ಲಿ ಸ್ಥಾಪಿಸಲಾಗಿರುವ ಚೆಕ್ಪೋಸ್ಟ್ಗಳಲ್ಲಿ ಪೊಲೀಸ್ ಸಿಬ್ಬಂದಿಯನ್ನು ಹೆಚ್ಚಿಸಲಾಗಿದ್ದು, ತಪಾಸಣೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.</p>.<p>ಔರಾದ್ ತಾಲ್ಲೂಕಿನ ವನಮಾರಪಳ್ಳಿ, ಕಮಲನಗರ, ಕಮಲನಗರ ತಾಲ್ಲೂಕಿನ ಚಿಕ್ಲಿ, ಹುಲಸೂರು ತಾಲ್ಲೂಕಿನ ಅಂಬೇವಾಡಿ ಹಾಗೂ ಬಸವಕಲ್ಯಾಣ ತಾಲ್ಲೂಕಿನ ಚಂಡಕಾಪುರ ಚೆಕ್ಪೋಸ್ಟ್ಗಳ ಮಾರ್ಗವಾಗಿ ಬರುತ್ತಿರುವ ಪ್ರತಿಯೊಬ್ಬ ವ್ಯಕ್ತಿಯ ಕೋವಿಡ್ ನೆಗೆಟಿವ್ ವರದಿ ಪರಿಶೀಲಿಸಿದ ನಂತರವೇ ಅವಕಾಶ ಕಲ್ಪಿಸಲಾಯಿತು.</p>.<p>ತಪಾಸಣೆ ಬಿಗಿಗೊಳಿಸಿದ ಕಾರಣ ಜಿಲ್ಲೆಯೊಳಗೆ ಬರುವವರ ಸಂಖ್ಯೆ ಸ್ವಲ್ಪ ಕಡಿಮಾಗಿದೆ. ದ್ವಿಚಕ್ರ ವಾಹನದ ಮೇಲೆ ಮಾಸ್ಕ್ ಧರಿಸದೆ ಬಂದವರಿಗೆ ಪೊಲೀಸರು ಎಚ್ಚರಿಕೆ ನೀಡಿ ಬಿಸಿ ಮುಟ್ಟಿಸಿದರು.</p>.<p>ಬಂದ್ ಇದ್ದರೂ ಅನಗತ್ಯ ತಿರುಗಾಟ:<br />ಜಿಲ್ಲೆಯಲ್ಲಿ ಕರ್ಫ್ಯೂ ಜಾರಿ ಇರುವ ಕಾರಣ ಭಾನುವಾರ ಮಧ್ಯಾಹ್ನ 2 ಗಂಟೆಗೆ ಎಲ್ಲ ಅಂಗಡಿಗಳು ಮುಚ್ಚಿದ್ದವು. ಆದರೆ, ಸಾರ್ವಜನಿಕರ ಓಡಾಟ ನಿಂತಿರಲಿಲ್ಲ. ದ್ವಿಚಕ್ರ ವಾಹನಗಳ ಮೇಲೆ ಸಂಚರಿಸುವುದು ಮುಂದುವರಿದಿತ್ತು.<br />ಬೆಳಿಗ್ಗೆ ಮಾರುಕಟ್ಟೆಯಲ್ಲಿ ಬಹುತೇಕ ಜನ ಮಾಸ್ಕ್ ಧರಿಸದೆ ಅಲೆದಾಡುತ್ತಿದ್ದರು. ಅಂತರ ಸಹ ಕಾಯ್ದುಕೊಂಡಿರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>