<p><strong>ಹುಲಸೂರ</strong>: ತಾಲ್ಲೂಕಿನ ತೊಗಲೂರ ಗ್ರಾಮದಿಂದ ಗೋರಟಾ– ಮುಚಳಂಬ ಕ್ರಾಸ್ ವರೆಗಿನ ಸುಮಾರು 11 ಕಿ.ಮೀ ರಸ್ತೆಯು ತೀರಾ ಹದಗೆಟ್ಟಿದ್ದು, ಪ್ರಯಾಣಿಕರು ದಿನನಿತ್ಯ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.</p>.<p>ತೊಗಲೂರ ಗ್ರಾಮದ ಜನ ಸುತ್ತಲಿನ ಹಳ್ಳಿಗಳಿಗೆ ಹಾಗೂ ತಾಲ್ಲೂಕು ಕೇಂದ್ರಕ್ಕೆ ಸಂಪರ್ಕಿಸಲು ಉತ್ತಮ ರಸ್ತೆ ಇಲ್ಲ. ರಸ್ತೆಯ ತುಂಬಾ ಜಲ್ಲಿಕಲ್ಲುಗಳು ಎದ್ದಿವೆ. ತಗ್ಗುಗುಂಡಿಗಳು ಬಿದ್ದಿವೆ. ಇದರಿಂದ ಶಾಲಾ ಮಕ್ಕಳು, ಸರ್ಕಾರಿ ನೌಕರರು, ತುರ್ತು ಪರಿಸ್ಥಿಯಲ್ಲಿ ಆಸ್ಪತ್ರೆಗೆ ಹೋಗಬೇಕಾದ ರೋಗಿಗಳು ಸಂಕಷ್ಟ ಎದುರಿಸಬೇಕಾಗಿದೆ.</p>.<p>ಹುಲಸೂರ ತಾಲ್ಲೂಕು ಕೇಂದ್ರಕ್ಕೆ ತೊಗಲೂರ ಕೇವಲ 8 ಕಿ.ಮೀ ಅಂತರದಲ್ಲಿದೆ. ಆದರೆ, ರಸ್ತೆ ಸಮಸ್ಯೆ ಕಾರಣ ಬೆಲೂರ ಮೂಲಕ 20 ಕಿ.ಮೀ ಸುತ್ತಿ ಬರಬೇಕು. ಇದರಿಂದ ಸಮಯದ ಜೊತೆಗೆ ಹಣ ವ್ಯಯ ಆಗುತ್ತದೆ ಎಂದು ಗ್ರಾಮಸ್ಥರು ದೂರುತ್ತಾರೆ.</p>.<p>ತೊಗಲೂರ ಗ್ರಾಮ ಪಂಚಾಯಿತಿ ಕೇಂದ್ರವೂ ಆಗಿದೆ. ಪಂಚಾಯಿತಿ ವ್ಯಾಪ್ತಿಗೆ ಸೇರಿದ ಕಾದ್ರಾಬಾದ ಗ್ರಾಮಸ್ಥರು ತೊಗಲೂರಿಗೆ ಬರ ಬೇಕಾದರೆ ಗುಂಡಿ ಬಿದ್ದ ರಸ್ತೆ ಮೂಲಕ ಬರಬೇಕು. ಸರ್ಕಾರಿ ಬಸ್ ಸೌಲಭ್ಯ ಇಲ್ಲದ್ದರಿಂದ ದ್ವಿಚಕ್ರ ವಾಹನ ಇಲ್ಲವೆ, ಖಾಸಗಿ ವಾಹನಗಳ ಮೊರೆ ಹೋಗಬೇಕು.</p>.<p>‘ಗೋರಟಾ– ಮುಚಳಂಬ ಕ್ರಾಸ್ದಿಂದ ತೊಗಲೂರ ಕಾದ್ರಬಾದ ಮೂಲಕ ಜವಳಗಾ (ಕೆ) ವರೆಗೂ ರಸ್ತೆ ದಾಂಬರೀಕರಣ ಆಗಬೇಕು. ಈ ಕುರಿತು ಜಿಲ್ಲಾಡಳಿತ ಸೇರಿದಂತೆ ಮುಖ್ಯಮಂತ್ರಿ ಅವರಿಗೂ ಮನವಿಪತ್ರ ಸಲ್ಲಿಸಿದರೂ ಯಾವುದೇ ಪ್ರಯೋಜನ ಆಗಿಲ್ಲ’ ಎಂದು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಕೆ.ಎಸ್.ಬಿರಾದಾರ,ಮಹೆಬೂಬ ಪಟೇಲ್,ಬಂಡೆಪ್ಪ ಎಸ್.ಮಂಠಾಳೆ,ವೆಂಕಟರಾವ ಶೇರಿಕಾರ ಆಕ್ರೋಶ ವ್ಯಕ್ತಪಡಿಸುತ್ತಾರೆ.</p>.<p>‘ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ನಮ್ಮ ಹಳ್ಳಿ ಜನರ ಕೂಗು ಕೇಳುತ್ತಿಲ್ಲ. ಈ ರೀತಿ ನಿರ್ಲಕ್ಷ್ಯ ತೋರಿದಲ್ಲಿ ಸುತ್ತಲಿನ ಗ್ರಾಮದ ಜನರು ಸೇರಿ ಮಾರ್ಚ್ 31ರ ವರೆಗೂ ಈ ರಸ್ತೆ ನಿರ್ಮಾಣ ಕುರಿತು ಕ್ರಮ ಕೈಗೊಳ್ಳಬೇಕು. ಇದೇ ರೀತಿ ವಿಳಂಬ ತೋರಿದಲ್ಲಿ ಗೋರಟಾ– ಮುಚಳಂಬ ಕ್ರಾಸ್ (ಭಾಲ್ಕಿ– ಬಸವಕಲ್ಯಾಣ ರಸ್ತೆ)ನಲ್ಲಿ ಏಪ್ರಿಲ್ 5ರಂದು ಬೆಳಿಗ್ಗೆ 9 ಗಂಟೆಯಿಂದ ಆಮರಣ ಉಪವಾಸ ಸತ್ಯಾಗ್ರಹ ಆಂದೋಲನ ಮಾಡಲಾಗುವುದು’ ಎಂದು ಹುಲಸೂರ ತಾಲ್ಲೂಕು ರಚನೆ ಬಸವಕಲ್ಯಾಣ ಜಿಲ್ಲಾ ಕೇಂದ್ರ ಹೋರಾಟ ಸಂಘಟನೆಯ ಸಂಚಾಲಕ ಎಂ.ಜಿ ರಾಜೋಳೆ ಎಚ್ಚರಿಕೆ ನೀಡಿದ್ದಾರೆ.</p>.<p class="Briefhead"><strong>ಹೋರಾಟಕ್ಕೆ ನಿರ್ಧಾರ</strong><br />ತೊಗಲೂರ ರಸ್ತೆ ಸುಧಾರಣೆಗೆ ಆಗ್ರಹಿಸಿ ಗ್ರಾ.ಪಂ ಅಧ್ಯಕ್ಷ ರಾಜಶೇಖರ ಪಾಟೀಲ, ಉಪಾಧ್ಯಕ್ಷೆ ಲಕ್ಷ್ಮೀ ಬಾಯಿ ಧಬಾಲೆ ಸೇರಿದಂತೆ ಗ್ರಾಮದ ಮುಖಂಡರು ಹಾಗೂ ಸುತ್ತಲಿನ ಗ್ರಾಮಸ್ಥರು ಹೋರಾಟಕ್ಕೆ ಮಾಡಲು ನಿರ್ಧರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಲಸೂರ</strong>: ತಾಲ್ಲೂಕಿನ ತೊಗಲೂರ ಗ್ರಾಮದಿಂದ ಗೋರಟಾ– ಮುಚಳಂಬ ಕ್ರಾಸ್ ವರೆಗಿನ ಸುಮಾರು 11 ಕಿ.ಮೀ ರಸ್ತೆಯು ತೀರಾ ಹದಗೆಟ್ಟಿದ್ದು, ಪ್ರಯಾಣಿಕರು ದಿನನಿತ್ಯ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.</p>.<p>ತೊಗಲೂರ ಗ್ರಾಮದ ಜನ ಸುತ್ತಲಿನ ಹಳ್ಳಿಗಳಿಗೆ ಹಾಗೂ ತಾಲ್ಲೂಕು ಕೇಂದ್ರಕ್ಕೆ ಸಂಪರ್ಕಿಸಲು ಉತ್ತಮ ರಸ್ತೆ ಇಲ್ಲ. ರಸ್ತೆಯ ತುಂಬಾ ಜಲ್ಲಿಕಲ್ಲುಗಳು ಎದ್ದಿವೆ. ತಗ್ಗುಗುಂಡಿಗಳು ಬಿದ್ದಿವೆ. ಇದರಿಂದ ಶಾಲಾ ಮಕ್ಕಳು, ಸರ್ಕಾರಿ ನೌಕರರು, ತುರ್ತು ಪರಿಸ್ಥಿಯಲ್ಲಿ ಆಸ್ಪತ್ರೆಗೆ ಹೋಗಬೇಕಾದ ರೋಗಿಗಳು ಸಂಕಷ್ಟ ಎದುರಿಸಬೇಕಾಗಿದೆ.</p>.<p>ಹುಲಸೂರ ತಾಲ್ಲೂಕು ಕೇಂದ್ರಕ್ಕೆ ತೊಗಲೂರ ಕೇವಲ 8 ಕಿ.ಮೀ ಅಂತರದಲ್ಲಿದೆ. ಆದರೆ, ರಸ್ತೆ ಸಮಸ್ಯೆ ಕಾರಣ ಬೆಲೂರ ಮೂಲಕ 20 ಕಿ.ಮೀ ಸುತ್ತಿ ಬರಬೇಕು. ಇದರಿಂದ ಸಮಯದ ಜೊತೆಗೆ ಹಣ ವ್ಯಯ ಆಗುತ್ತದೆ ಎಂದು ಗ್ರಾಮಸ್ಥರು ದೂರುತ್ತಾರೆ.</p>.<p>ತೊಗಲೂರ ಗ್ರಾಮ ಪಂಚಾಯಿತಿ ಕೇಂದ್ರವೂ ಆಗಿದೆ. ಪಂಚಾಯಿತಿ ವ್ಯಾಪ್ತಿಗೆ ಸೇರಿದ ಕಾದ್ರಾಬಾದ ಗ್ರಾಮಸ್ಥರು ತೊಗಲೂರಿಗೆ ಬರ ಬೇಕಾದರೆ ಗುಂಡಿ ಬಿದ್ದ ರಸ್ತೆ ಮೂಲಕ ಬರಬೇಕು. ಸರ್ಕಾರಿ ಬಸ್ ಸೌಲಭ್ಯ ಇಲ್ಲದ್ದರಿಂದ ದ್ವಿಚಕ್ರ ವಾಹನ ಇಲ್ಲವೆ, ಖಾಸಗಿ ವಾಹನಗಳ ಮೊರೆ ಹೋಗಬೇಕು.</p>.<p>‘ಗೋರಟಾ– ಮುಚಳಂಬ ಕ್ರಾಸ್ದಿಂದ ತೊಗಲೂರ ಕಾದ್ರಬಾದ ಮೂಲಕ ಜವಳಗಾ (ಕೆ) ವರೆಗೂ ರಸ್ತೆ ದಾಂಬರೀಕರಣ ಆಗಬೇಕು. ಈ ಕುರಿತು ಜಿಲ್ಲಾಡಳಿತ ಸೇರಿದಂತೆ ಮುಖ್ಯಮಂತ್ರಿ ಅವರಿಗೂ ಮನವಿಪತ್ರ ಸಲ್ಲಿಸಿದರೂ ಯಾವುದೇ ಪ್ರಯೋಜನ ಆಗಿಲ್ಲ’ ಎಂದು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಕೆ.ಎಸ್.ಬಿರಾದಾರ,ಮಹೆಬೂಬ ಪಟೇಲ್,ಬಂಡೆಪ್ಪ ಎಸ್.ಮಂಠಾಳೆ,ವೆಂಕಟರಾವ ಶೇರಿಕಾರ ಆಕ್ರೋಶ ವ್ಯಕ್ತಪಡಿಸುತ್ತಾರೆ.</p>.<p>‘ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ನಮ್ಮ ಹಳ್ಳಿ ಜನರ ಕೂಗು ಕೇಳುತ್ತಿಲ್ಲ. ಈ ರೀತಿ ನಿರ್ಲಕ್ಷ್ಯ ತೋರಿದಲ್ಲಿ ಸುತ್ತಲಿನ ಗ್ರಾಮದ ಜನರು ಸೇರಿ ಮಾರ್ಚ್ 31ರ ವರೆಗೂ ಈ ರಸ್ತೆ ನಿರ್ಮಾಣ ಕುರಿತು ಕ್ರಮ ಕೈಗೊಳ್ಳಬೇಕು. ಇದೇ ರೀತಿ ವಿಳಂಬ ತೋರಿದಲ್ಲಿ ಗೋರಟಾ– ಮುಚಳಂಬ ಕ್ರಾಸ್ (ಭಾಲ್ಕಿ– ಬಸವಕಲ್ಯಾಣ ರಸ್ತೆ)ನಲ್ಲಿ ಏಪ್ರಿಲ್ 5ರಂದು ಬೆಳಿಗ್ಗೆ 9 ಗಂಟೆಯಿಂದ ಆಮರಣ ಉಪವಾಸ ಸತ್ಯಾಗ್ರಹ ಆಂದೋಲನ ಮಾಡಲಾಗುವುದು’ ಎಂದು ಹುಲಸೂರ ತಾಲ್ಲೂಕು ರಚನೆ ಬಸವಕಲ್ಯಾಣ ಜಿಲ್ಲಾ ಕೇಂದ್ರ ಹೋರಾಟ ಸಂಘಟನೆಯ ಸಂಚಾಲಕ ಎಂ.ಜಿ ರಾಜೋಳೆ ಎಚ್ಚರಿಕೆ ನೀಡಿದ್ದಾರೆ.</p>.<p class="Briefhead"><strong>ಹೋರಾಟಕ್ಕೆ ನಿರ್ಧಾರ</strong><br />ತೊಗಲೂರ ರಸ್ತೆ ಸುಧಾರಣೆಗೆ ಆಗ್ರಹಿಸಿ ಗ್ರಾ.ಪಂ ಅಧ್ಯಕ್ಷ ರಾಜಶೇಖರ ಪಾಟೀಲ, ಉಪಾಧ್ಯಕ್ಷೆ ಲಕ್ಷ್ಮೀ ಬಾಯಿ ಧಬಾಲೆ ಸೇರಿದಂತೆ ಗ್ರಾಮದ ಮುಖಂಡರು ಹಾಗೂ ಸುತ್ತಲಿನ ಗ್ರಾಮಸ್ಥರು ಹೋರಾಟಕ್ಕೆ ಮಾಡಲು ನಿರ್ಧರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>