ಬೀದರ್: ಪಶು ಸಂಗೋಪನೆ ಸಚಿವ ಪ್ರಭು ಚವಾಣ್ ಆಗಸ್ಟ್ 13ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಅಂದು ಬೆಳಿಗ್ಗೆ 8.30ಕ್ಕೆ ಬೋಂತಿ ತಾಂಡಾದಿಂದ ನಿರ್ಗಮಿಸಿ, ಬೆಳಿಗ್ಗೆ 10 ಗಂಟೆಗೆ ಮರಖಲ್ ಗ್ರಾಮದಲ್ಲಿ ಗ್ರಾಮ-1 ಸೇವಾ ಕೇಂದ್ರವನ್ನು ಉದ್ಘಾಟಿಸುವರು. ಬಳಿಕ ಬೆಳಿಗ್ಗೆ 10.30ರಿಂದ ಸಂಜೆ 4.30ರವರೆಗೆ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆಯುವ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಪಾಲ್ಗೊಳ್ಳುವರು.
ಸಂಜೆ 4.30ಕ್ಕೆ ಬೀದರ್ನಿಂದ ನಿರ್ಗಮಿಸಿ, ಬೋಂತಿ ತಾಂಡಾಕ್ಕೆ ತೆರಳಿ ವಾಸ್ತವ್ಯ ಮಾಡಲಿದ್ದಾರೆ ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.