ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟ್ರ್ಯಾಕ್ಟರ್‌ ಡಿಕ್ಕಿ: ಬೈಕ್‌ ಸವಾರ ಸ್ಥಳದಲ್ಲೇ ಸಾವು

Last Updated 22 ಜುಲೈ 2022, 5:17 IST
ಅಕ್ಷರ ಗಾತ್ರ

ಕಮಲನಗರ: ಪಟ್ಟಣ ಸಮೀಪದ ಮದನೂರು-ರಾಂಪುರ ಕ್ರಾಸ್ ಬಳಿ ಬುಧವಾರ ಬೈಕ್‌ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಬೈಕ್‌ ಸವಾರ ರಾಮದಾಸ್ ಮೋಹನ್ ಚಾಪೆ (45) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಾಮದಾಸ್ ಮೋಹನ್ ಚಾಪೆ ಅವರು ರಾಷ್ಟ್ರಿಯ ಹೆದ್ದಾರಿ ಪಕ್ಕದ ದಾದ್ರಾ ಬಳಿ ವೆಲ್ಡಿಂಗ್ ಅಂಗಡಿ ಇಟ್ಟುಕೊಂಡಿದ್ದರು. ಬಾಲೂರಿಗೆ ತೆರಳಿ ವಾಪಸ್ ಅಂಗಡಿಗೆ ಬರುತ್ತಿದ್ದಾಗ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದೆ. ಮೃತನ ಪತ್ನಿ ಸವಿತಾ ರಾಮದಾಸ ನೀಡಿದ ದೂರಿನ ಮೇರೆಗೆ ಕಮಲನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಸ್ಥಳಕ್ಕೆ ಭಾಲ್ಕಿ ಡಿವೈಎಸ್ಪಿ ಪ್ರತ್ವಿಕ್ ಶಂಕರ್, ಸಿಪಿಐ ರಾಮಪ್ಪ ಸಾವಳಗಿ, ಪಿಎಸ್‍ಐ ಚಂದ್ರಶೇಖರ, ಭೇಟಿ ನೀಡಿ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT