<p><strong>ಬೀದರ್: </strong>ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗಾಗಿಯೇ ಸಿದ್ಧ ಪಡಿಸಲಾದ ಹೊಸ ವಿಧಾನದ ಎಲೆಕ್ಟ್ರಾನಿಕ್ ಮತಯಂತ್ರಗಳ ಬಳಕೆ ಕುರಿತು ಜಿಲ್ಲೆಯ 53 ಮಾಸ್ಟರ್ ಟ್ರೇನರ್ಗಳಿಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ತರಬೇತಿ ನೀಡಲಾಯಿತು.</p>.<p>ತಾಲ್ಲೂಕು ಮಟ್ಟದಲ್ಲಿ ಚುನಾವಣಾ ಅಧಿಕಾರಿಗಳಿಗೆ ತರಬೇತಿ ನೀಡಲಿರುವ ಮಾಸ್ಟರ್ ಟ್ರೇನರ್ಸ್ ಹಲವು ಪ್ರಶ್ನೆಗಳನ್ನು ಕೇಳುವ ತಮ್ಮ ಗೊಂದಲಗಳನ್ನು ನಿವಾರಿಸಿಕೊಂಡರು. ಇಬ್ಬರು, ಮೂವರು, ನಾಲ್ವರು ಹಾಗೂ ಐವರು ಸದಸ್ಯರು ಒಂದೇ ವಾರ್ಡ್ನಿಂದ ಸರ್ಧಿಸಿದರೆ ಮತಯಂತ್ರಗಳನ್ನು ಹೇಗೆ ಸಿದ್ಧಪಡಿಸಿಕೊಳ್ಳಬೇಕು. ಮತಯಂತ್ರವನ್ನು ಹೇಗೆ ಜೋಡಿಕೊಳ್ಳಬೇಕು ಎನ್ನುವ ಕುರಿತು ಮಾಹಿತಿ ಪಡೆದರು.</p>.<p>ಜಿಲ್ಲಾಧಿಕಾರಿ ರಾಮಚಂದ್ರನ್ ಆರ್, ಮಾತನಾಡಿ, ‘ಚುನಾವಣೆ ಕಾರ್ಯಕ್ಕೆ ನಿಯೋಜನೆಗೊಂಡಿರುವ<br />ಮಾಸ್ಟರ್ ಟ್ರೇನರ್ಗಳು ಮೊದಲು ಪರಿಪೂರ್ಣ ತರಬೇತಿ ಪಡೆದು ಇತರರಿಗೆ ತಿಳಿಸಬೇಕು’ ಎಂದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಹಾಗೂ ಜಿಲ್ಲಾ ಮಾಸ್ಟರ್ ಟ್ರೇನರ್ ಡಾ.ಗೌತಮ ಅರಳಿ ಅವರು ತಾಲ್ಲೂಕು ಮಟ್ಟದ ಮಾಸ್ಟರ್ ಟ್ರೇನರ್ಗಳಿಗೆ ಮಾರ್ಗದರ್ಶನ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗಾಗಿಯೇ ಸಿದ್ಧ ಪಡಿಸಲಾದ ಹೊಸ ವಿಧಾನದ ಎಲೆಕ್ಟ್ರಾನಿಕ್ ಮತಯಂತ್ರಗಳ ಬಳಕೆ ಕುರಿತು ಜಿಲ್ಲೆಯ 53 ಮಾಸ್ಟರ್ ಟ್ರೇನರ್ಗಳಿಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ತರಬೇತಿ ನೀಡಲಾಯಿತು.</p>.<p>ತಾಲ್ಲೂಕು ಮಟ್ಟದಲ್ಲಿ ಚುನಾವಣಾ ಅಧಿಕಾರಿಗಳಿಗೆ ತರಬೇತಿ ನೀಡಲಿರುವ ಮಾಸ್ಟರ್ ಟ್ರೇನರ್ಸ್ ಹಲವು ಪ್ರಶ್ನೆಗಳನ್ನು ಕೇಳುವ ತಮ್ಮ ಗೊಂದಲಗಳನ್ನು ನಿವಾರಿಸಿಕೊಂಡರು. ಇಬ್ಬರು, ಮೂವರು, ನಾಲ್ವರು ಹಾಗೂ ಐವರು ಸದಸ್ಯರು ಒಂದೇ ವಾರ್ಡ್ನಿಂದ ಸರ್ಧಿಸಿದರೆ ಮತಯಂತ್ರಗಳನ್ನು ಹೇಗೆ ಸಿದ್ಧಪಡಿಸಿಕೊಳ್ಳಬೇಕು. ಮತಯಂತ್ರವನ್ನು ಹೇಗೆ ಜೋಡಿಕೊಳ್ಳಬೇಕು ಎನ್ನುವ ಕುರಿತು ಮಾಹಿತಿ ಪಡೆದರು.</p>.<p>ಜಿಲ್ಲಾಧಿಕಾರಿ ರಾಮಚಂದ್ರನ್ ಆರ್, ಮಾತನಾಡಿ, ‘ಚುನಾವಣೆ ಕಾರ್ಯಕ್ಕೆ ನಿಯೋಜನೆಗೊಂಡಿರುವ<br />ಮಾಸ್ಟರ್ ಟ್ರೇನರ್ಗಳು ಮೊದಲು ಪರಿಪೂರ್ಣ ತರಬೇತಿ ಪಡೆದು ಇತರರಿಗೆ ತಿಳಿಸಬೇಕು’ ಎಂದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಹಾಗೂ ಜಿಲ್ಲಾ ಮಾಸ್ಟರ್ ಟ್ರೇನರ್ ಡಾ.ಗೌತಮ ಅರಳಿ ಅವರು ತಾಲ್ಲೂಕು ಮಟ್ಟದ ಮಾಸ್ಟರ್ ಟ್ರೇನರ್ಗಳಿಗೆ ಮಾರ್ಗದರ್ಶನ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>