<p><strong>ಬೀದರ್: </strong>‘ಸಮಾಜಕ್ಕೆ ಸೇವೆ ಸಲ್ಲಿಸಬೇಕೆನ್ನುವ ಅಭಿಲಾಷೆ ಹೊಂದಿರುವ ವ್ಯಕ್ತಿಗಳಿಗೆ ಸಹಕಾರ ಉತ್ತಮ ಕ್ಷೇತ್ರವಾಗಿದೆ’ ಎಂದು ರಾಯಚೂರು ವಿಭಾಗದ ಸಹಕಾರ ಇಲಾಖೆಯ ಜಂಟಿ ನಿಬಂಧಕ ಗೋಪಾಲ ಚವಾಣ್ ಹೇಳಿದರು.</p>.<p>ನಗರದ ಸಹಾರ್ದ ತರಬೇತಿ ಸಂಸ್ಥೆಯಲ್ಲಿ ಬಿಡಿಸಿಸಿ ಬ್ಯಾಂಕಿನ ಸ್ವಸಹಾಯ ಗುಂಪಿನ ಮೇಲ್ವಿಚಾರಕರಿಗಾಗಿ ಆಯೋಜಿಸಿರುವ ಮೂರು ದಿನಗಳ ತರಬೇತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಆರ್ಥಿಕ ಪ್ರಗತಿಯ ಜತೆಗೆ ಸಾಮಾಜಿಕ ಪ್ರಗತಿಯನ್ನೂ ಸಾಧಿಸಲು ಸಹಕಾರ ಕ್ಷೇತ್ರ ನೆರವಾಗಿದೆ. ಸರ್ವರಿಗೂ ಸಮಪಾಲು, ಸರ್ವರಿಗೂ ಸಹಬಾಳ್ವೆ ಎನ್ನುವ ತತ್ವದಡಿ ಕಾರ್ಯ ನಿರ್ವಹಿಸುವ ಸಹಕಾರಿ ಸಂಘಗಳು ರೈತರ ಆಶಾಕಿರಣಗಳಾಗಿವೆ’ ಎಂದು ತಿಳಿಸಿದರು.</p>.<p>‘ಡಿಸಿಸಿ ಬ್ಯಾಂಕುಗಳು ಮತ್ತು ಸಂಘಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿದಾಗ ಜನರಿಗೆ ಉತ್ತಮ ಆರ್ಥಿಕ ಸೇವೆ ಸಿಗಲು ಸಾಧ್ಯವಿದೆ. ಸಹಕಾರ ಇಲಾಖೆಯು ಸ್ವಸಹಾಯ ಗುಂಪುಗಳ ಮೂಲಕ ಬಡವರಿಗೆ<br />ಕಾಯಕ ಯೋಜನೆಯಡಿ ಶೂನ್ಯ ಬಡ್ಡಿ ದರದಲ್ಲಿ ಸಾಲ ಒದಗಿಸುತ್ತಿದೆ. ಸ್ವಸಹಾಯ ಗುಂಪುಗಳು ಇದರ ಪ್ರಯೋಜನ ಪಡೆಯಬೇಕು’ ಎಂದು ಹೇಳಿದರು.</p>.<p>‘ಸಹಕಾರ ಬ್ಯಾಂಕುಗಳು ಬಡವರ ಬಂಧು ಯೋಜನೆಯ ಮೂಲಕ ಪಟ್ಟಣ ಪ್ರದೇಶದ ಸಣ್ಣ ವ್ಯಾಪಾರಿಗಳಿಗೆ ಸಹ ಕಿರು ಸಾಲ ವಿತರಿಸುತ್ತಿದೆ. ಪ್ರತಿಯೊಬ್ಬರು ವ್ಯಾವಹಾರಿಕ ನಿರ್ವಹಣೆ ಸೂತ್ರ ಹಾಗೂ ಕಂಪ್ಯೂಟರ್ ಆಧಾರಿತ ತಂತ್ರಜ್ಞಾನವನ್ನು ಅರಿತುಕೊಳ್ಳಬೇಕು’ ಎಂದು ಹೇಳಿದರು.</p>.<p>ಬೆಂಗಳೂರು ಉಪ ವಿಭಾಗದ ಜಂಟಿ ನಿಬಂಧಕ ಲೋಕೇಶ ಮಾತನಾಡಿ, ‘ಸಾಲ ಪಡೆದವರು ಆಸ್ತಿ ಮಾರಿ ಸಾಲ ತೀರಿಸಬಾರದು. ದುಡ್ಡು ದುಡಿಸಿ ಸಾಲ ತೀರಿಸುವಂತಾಗಬೇಕು’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ ಪ್ರಧಾನ ವ್ಯವಸ್ಥಾಪಕ ವಿಠ್ಠಲ ರೆಡ್ಡಿ, ‘ಸ್ವ ಸಹಾಯ ಸಂಘಗಳು ವ್ಯವಹಾರ ಅಭಿವೃದ್ಧಿಸಿಕೊಂಡು ಸ್ವಾವಲಂಬಿಯಾಗಬೇಕು. ಮೇಲ್ವಿಚಾರಕರು ದೂರದೃಷ್ಟಿ ಯೋಜನೆ, ಪ್ರಾಮಾಣಿಕ ದುಡಿಮೆಯ ಮೂಲಕ ಸ್ವಸಹಾಯ ಗುಂಪಿನ ಸದಸ್ಯರಿಗೆ ತಿಳಿವಳಿಕೆ ನೀಡಬೇಕು’ ಎಂದು ಹೇಳಿದರು.</p>.<p>ಪ್ರಧಾನ ವ್ಯವಸ್ಥಾಪಕ ಅನಿಲ ಪಾಟೀಲ ಮಾತನಾಡಿ, ‘ಬೀದರ್ ಜಿಲ್ಲೆಯಲ್ಲಿ 27,600 ಸ್ವಸಹಾಯ ಗುಂಪುಗಳಿವೆ.<br />12,726 ಗುಂಪುಗಳು ನಬಾರ್ಡನ ಈ- ಶಕ್ತಿ ಯೋಜನೆಯಡಿಯಲ್ಲಿ ನೋಂದಾಯಿಸಿಕೊಂಡಿವೆ. ಇದರಿಂದ<br />ಒಬ್ಬರೇ ಸದಸ್ಯರು ಎರಡು ಗುಂಪುಗಳಲ್ಲಿ ಸದಸ್ಯರಾಗುವುದನ್ನು ತಡೆಯಬಹುದಾಗಿದೆ. ಬ್ಯಾಂಕುಗಳಿಗೆ ಸಾಲ ನೀಡಲು ಸಹ ಅನುಕೂಲವಾಗುತ್ತದೆ’ ಎಂದು ತಿಳಿಸಿದರು.</p>.<p>ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ ಪ್ರಧಾನ ವ್ಯವಸ್ಥಾಪಕ ಚನ್ನಬಸಯ್ಯ ಸ್ವಾಮಿ ಸಹಾರ್ದ ತರಬೇತಿ ಸಂಸ್ಥೆಯ ನಿರ್ದೇಶಕ ಸುಬ್ಯಹ್ಮಣ್ಯ ಪ್ರಭು ಪ್ರಾಸ್ತಾವಿಕವಾಗಿ ಮಾತನಾಡಿದರು. ತನ್ವೀರ್ ರಜಾ ಹಾಗೂ ನಾಗಶೆಟ್ಟಿ ಘೋಡಂಪಳ್ಳಿ ನಿರೂಪಿಸಿದರು. ಸಹಾರ್ದ ತರಬೇತಿ ಸಂಸ್ಥೆಯ ಸಂಪನ್ಮೂಲ ವ್ಯಕ್ತಿ ಎಸ್.ಜಿ. ಪಾಟೀಲ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>‘ಸಮಾಜಕ್ಕೆ ಸೇವೆ ಸಲ್ಲಿಸಬೇಕೆನ್ನುವ ಅಭಿಲಾಷೆ ಹೊಂದಿರುವ ವ್ಯಕ್ತಿಗಳಿಗೆ ಸಹಕಾರ ಉತ್ತಮ ಕ್ಷೇತ್ರವಾಗಿದೆ’ ಎಂದು ರಾಯಚೂರು ವಿಭಾಗದ ಸಹಕಾರ ಇಲಾಖೆಯ ಜಂಟಿ ನಿಬಂಧಕ ಗೋಪಾಲ ಚವಾಣ್ ಹೇಳಿದರು.</p>.<p>ನಗರದ ಸಹಾರ್ದ ತರಬೇತಿ ಸಂಸ್ಥೆಯಲ್ಲಿ ಬಿಡಿಸಿಸಿ ಬ್ಯಾಂಕಿನ ಸ್ವಸಹಾಯ ಗುಂಪಿನ ಮೇಲ್ವಿಚಾರಕರಿಗಾಗಿ ಆಯೋಜಿಸಿರುವ ಮೂರು ದಿನಗಳ ತರಬೇತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಆರ್ಥಿಕ ಪ್ರಗತಿಯ ಜತೆಗೆ ಸಾಮಾಜಿಕ ಪ್ರಗತಿಯನ್ನೂ ಸಾಧಿಸಲು ಸಹಕಾರ ಕ್ಷೇತ್ರ ನೆರವಾಗಿದೆ. ಸರ್ವರಿಗೂ ಸಮಪಾಲು, ಸರ್ವರಿಗೂ ಸಹಬಾಳ್ವೆ ಎನ್ನುವ ತತ್ವದಡಿ ಕಾರ್ಯ ನಿರ್ವಹಿಸುವ ಸಹಕಾರಿ ಸಂಘಗಳು ರೈತರ ಆಶಾಕಿರಣಗಳಾಗಿವೆ’ ಎಂದು ತಿಳಿಸಿದರು.</p>.<p>‘ಡಿಸಿಸಿ ಬ್ಯಾಂಕುಗಳು ಮತ್ತು ಸಂಘಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿದಾಗ ಜನರಿಗೆ ಉತ್ತಮ ಆರ್ಥಿಕ ಸೇವೆ ಸಿಗಲು ಸಾಧ್ಯವಿದೆ. ಸಹಕಾರ ಇಲಾಖೆಯು ಸ್ವಸಹಾಯ ಗುಂಪುಗಳ ಮೂಲಕ ಬಡವರಿಗೆ<br />ಕಾಯಕ ಯೋಜನೆಯಡಿ ಶೂನ್ಯ ಬಡ್ಡಿ ದರದಲ್ಲಿ ಸಾಲ ಒದಗಿಸುತ್ತಿದೆ. ಸ್ವಸಹಾಯ ಗುಂಪುಗಳು ಇದರ ಪ್ರಯೋಜನ ಪಡೆಯಬೇಕು’ ಎಂದು ಹೇಳಿದರು.</p>.<p>‘ಸಹಕಾರ ಬ್ಯಾಂಕುಗಳು ಬಡವರ ಬಂಧು ಯೋಜನೆಯ ಮೂಲಕ ಪಟ್ಟಣ ಪ್ರದೇಶದ ಸಣ್ಣ ವ್ಯಾಪಾರಿಗಳಿಗೆ ಸಹ ಕಿರು ಸಾಲ ವಿತರಿಸುತ್ತಿದೆ. ಪ್ರತಿಯೊಬ್ಬರು ವ್ಯಾವಹಾರಿಕ ನಿರ್ವಹಣೆ ಸೂತ್ರ ಹಾಗೂ ಕಂಪ್ಯೂಟರ್ ಆಧಾರಿತ ತಂತ್ರಜ್ಞಾನವನ್ನು ಅರಿತುಕೊಳ್ಳಬೇಕು’ ಎಂದು ಹೇಳಿದರು.</p>.<p>ಬೆಂಗಳೂರು ಉಪ ವಿಭಾಗದ ಜಂಟಿ ನಿಬಂಧಕ ಲೋಕೇಶ ಮಾತನಾಡಿ, ‘ಸಾಲ ಪಡೆದವರು ಆಸ್ತಿ ಮಾರಿ ಸಾಲ ತೀರಿಸಬಾರದು. ದುಡ್ಡು ದುಡಿಸಿ ಸಾಲ ತೀರಿಸುವಂತಾಗಬೇಕು’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ ಪ್ರಧಾನ ವ್ಯವಸ್ಥಾಪಕ ವಿಠ್ಠಲ ರೆಡ್ಡಿ, ‘ಸ್ವ ಸಹಾಯ ಸಂಘಗಳು ವ್ಯವಹಾರ ಅಭಿವೃದ್ಧಿಸಿಕೊಂಡು ಸ್ವಾವಲಂಬಿಯಾಗಬೇಕು. ಮೇಲ್ವಿಚಾರಕರು ದೂರದೃಷ್ಟಿ ಯೋಜನೆ, ಪ್ರಾಮಾಣಿಕ ದುಡಿಮೆಯ ಮೂಲಕ ಸ್ವಸಹಾಯ ಗುಂಪಿನ ಸದಸ್ಯರಿಗೆ ತಿಳಿವಳಿಕೆ ನೀಡಬೇಕು’ ಎಂದು ಹೇಳಿದರು.</p>.<p>ಪ್ರಧಾನ ವ್ಯವಸ್ಥಾಪಕ ಅನಿಲ ಪಾಟೀಲ ಮಾತನಾಡಿ, ‘ಬೀದರ್ ಜಿಲ್ಲೆಯಲ್ಲಿ 27,600 ಸ್ವಸಹಾಯ ಗುಂಪುಗಳಿವೆ.<br />12,726 ಗುಂಪುಗಳು ನಬಾರ್ಡನ ಈ- ಶಕ್ತಿ ಯೋಜನೆಯಡಿಯಲ್ಲಿ ನೋಂದಾಯಿಸಿಕೊಂಡಿವೆ. ಇದರಿಂದ<br />ಒಬ್ಬರೇ ಸದಸ್ಯರು ಎರಡು ಗುಂಪುಗಳಲ್ಲಿ ಸದಸ್ಯರಾಗುವುದನ್ನು ತಡೆಯಬಹುದಾಗಿದೆ. ಬ್ಯಾಂಕುಗಳಿಗೆ ಸಾಲ ನೀಡಲು ಸಹ ಅನುಕೂಲವಾಗುತ್ತದೆ’ ಎಂದು ತಿಳಿಸಿದರು.</p>.<p>ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ ಪ್ರಧಾನ ವ್ಯವಸ್ಥಾಪಕ ಚನ್ನಬಸಯ್ಯ ಸ್ವಾಮಿ ಸಹಾರ್ದ ತರಬೇತಿ ಸಂಸ್ಥೆಯ ನಿರ್ದೇಶಕ ಸುಬ್ಯಹ್ಮಣ್ಯ ಪ್ರಭು ಪ್ರಾಸ್ತಾವಿಕವಾಗಿ ಮಾತನಾಡಿದರು. ತನ್ವೀರ್ ರಜಾ ಹಾಗೂ ನಾಗಶೆಟ್ಟಿ ಘೋಡಂಪಳ್ಳಿ ನಿರೂಪಿಸಿದರು. ಸಹಾರ್ದ ತರಬೇತಿ ಸಂಸ್ಥೆಯ ಸಂಪನ್ಮೂಲ ವ್ಯಕ್ತಿ ಎಸ್.ಜಿ. ಪಾಟೀಲ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>