ಜಿಲ್ಲಾಧಿಕಾರಿ ಡಾ.ಎಚ್.ಆರ್.ಮಹಾದೇವ ಮಾತನಾಡಿ,‘ಚುನಾವಣೆ ಕರ್ತವ್ಯವನ್ನು ಸುಸೂತ್ರವಾಗಿ ನಿಭಾಯಿಸಿದಂತೆ, ಮೇ 23 ರಂದು ನಡೆಯಲಿರುವ ಮತ ಎಣಿಕೆ ಕೆಲಸವನ್ನೂ ಅಚ್ಚುಕಟ್ಟಾಗಿ ಮಾಡಬೇಕು. ಅಂದು ಸಿಬ್ಬಂದಿ ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಕರ್ತವ್ಯಕ್ಕೆ ಹಾಜರಾಗಬೇಕು. ತಮ್ಮಲ್ಲಿರುವ ಎಲ್ಲ ರೀತಿಯ ಗೊಂದಲಗಳನ್ನು ಮುಂಚಿತವಾಗಿಯೇ ನಿವಾರಿಸಿಕೊಂಡು ಮಾನಸಿಕವಾಗಿ ಸಿದ್ಧರಾಗಬೇಕು’ ಎಂದು ತಿಳಿಸಿದರು.