ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರ್ಗಾವಣೆ: ಆರು ನ್ಯಾಯಾಧೀಶರಿಗೆ ಬೀಳ್ಕೊಡುಗೆ

Last Updated 12 ಮೇ 2022, 10:44 IST
ಅಕ್ಷರ ಗಾತ್ರ

ಬೀದರ್: ವರ್ಗಾವಣೆಗೊಂಡ ವಿವಿಧ ನ್ಯಾಯಾಲಯಗಳ ಆರು ನ್ಯಾಯಾಧೀಶರನ್ನು ಇಲ್ಲಿಯ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಇರುವ ಜಿಲ್ಲಾ ವಕೀಲರ ಸಂಘದ ಸಭಾಂಗಣದಲ್ಲಿ ಸನ್ಮಾನಿಸಿ, ಬೀಳ್ಕೊಡಲಾಯಿತು.

ಹಿರಿಯ ಸಿವಿಲ್ ನ್ಯಾಯಾಧೀಶ ಸಿದ್ರಾಮ ಟಿ.ಪಿ, ಪ್ರಧಾನ ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶ ಶಶಿಕಾಂತ ಭಾವಿಕಟ್ಟಿ, ಹಿರಿಯ ಸಿವಿಲ್ ನ್ಯಾಯಾಧೀಶೆ ಜರಿನಾ, ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಆರ್.ಪಿ. ಗೌಡ, ಜೆಎಂಎಫ್‍ಸಿಯ ಪ್ರಧಾನ ಸಿವಿಲ್ ನ್ಯಾಯಾಧೀಶ ಈಶ್ವರ ಮುಸಲ್ಮಾರಿ ಹಾಗೂ ಒಂದನೇ ಹೆಚ್ಚುವರಿ ನ್ಯಾಯಾಧೀಶ ವಿನಯ್ ವಾಂಖೆಡೆ ಅವರನ್ನು ಜಿಲ್ಲಾ ವಕೀಲರ ಸಂಘದ ಪದಾಧಿಕಾರಿಗಳು ಶಾಲು ಹೊದಿಸಿ ಸನ್ಮಾನಿಸಿದರು.

ಜಿಲ್ಲಾ ನ್ಯಾಯಾಲಯದಲ್ಲಿ ನ್ಯಾಯಾಧೀಶರು ಸಲ್ಲಿಸಿದ ಸೇವೆಯನ್ನು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅಶೋಕಕುಮಾರ ಮಾನೂರೆ ಸ್ಮರಿಸಿದರು.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ ಎಸ್. ಚಂಗರೆಡ್ಡಿ ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ರವಿಕುಮಾರ ವಾಡೆ, ಪ್ರಧಾನ ಕಾರ್ಯದರ್ಶಿ ಶಿವಶರಣಪ್ಪ (ಪುಟ್ಟು) ಪಾಟೀಲ, ಜಂಟಿ ಕಾರ್ಯದರ್ಶಿ ಕೃಷ್ಣ ಬಿರಾದಾರ, ಖಜಾಂಚಿ ಅಬ್ದುಲ್ ಹಫೀಜ್ ಮೊದಲಾದವರು ಇದ್ದರು. ಜಿಲ್ಲಾ ವಕೀಲರ ಸಂಘದ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT