‘ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಈಗಾಗಲೇ ಮನವಿ ಸಲ್ಲಿಸಲಾಗಿದೆ. ಆದರೆ, ಸರ್ಕಾರ ಇನ್ನೂ ಆದೇಶ ಹೊರಡಿಸಿಲ್ಲ. ವಿಳಂಬ ನೀತಿಯಿಂದಾಗಿ ಎಂಜಿನಿಯರ್ಗಳು ತೊಂದರೆ ಅನುಭವಿಸಬೇಕಾಗಿದೆ’ ಎಂದು ಹೇಳಿದರು.
‘ವಿವಾಹಿತ ಎಂಜಿನಿಯರ್ಗಳ ಪತಿ, ಪತ್ನಿ ಬೇರೆ ಬೇರೆ ಇಲಾಖೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಮಕ್ಕಳ ವಿದ್ಯಾಭ್ಯಾಸ, ಅತ್ತೆ, ಮಾವ, ತಂದೆ–ತಾಯಿ ಹಾಗೂ ಸಂಸಾರದ ನಿರ್ವಹಣೆ ಕಷ್ಟವಾಗುತ್ತಿದೆ. ಎಂಜಿನಿಯರ್ಗಳ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ವರ್ಗಾವಣೆಗೆ ಆದೇಶ ನೀಡಬೇಕು’ ಎಂದು ಒತ್ತಾಯಿಸಿದರು.