<p><strong>ಬೀದರ್: </strong>ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಮುಷ್ಕರ ಗುರುವಾರ ಮೂರನೇ ದಿನಕ್ಕೆ ಪಾದಾರ್ಪಣೆ ಮಾಡಿದೆ. ಎನ್ಇಕೆಎಸ್ಆರ್ಟಿಸಿ ಬೀದರ್ ವಿಭಾಗದ ಅಧಿಕಾರಿಗಳ ಮನವಿ ಮೇರೆಗೆ ನೆರೆ ರಾಜ್ಯಗಳ ಬಸ್ಗಳು ಶುಕ್ರವಾರ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸಿದವು.</p>.<p>ತೆಲಂಗಾಣ, ಮಹಾರಾಷ್ಟ್ರ ಸಾರಿಗೆ, ಖಾಸಗಿ ಬಸ್ಗಳು ಹಾಗೂ ಕ್ರೂಸರ್ಗಳು ಬಸ್ ನಿಲ್ದಾಣಗಳಿಂದಲೇ ಸಂಚರಿಸಿದವು.</p>.<p>ಸಮೀಪದ ಪಟ್ಟಣಗಳಿಗೆ ಹೊರಟಿದ್ದ ಪ್ರಯಾಣಿಕರಿಗೆ ಯಾವುದೇ ರೀತಿಯ ಸಮಸ್ಯೆಯಾಗಲಿಲ್ಲ. ದೂರದ ನಗರಗಳಿಗೆ ಹೋಗ ಬೇಕಿದ್ದ ಪ್ರಯಾಣಿಕರು ತೊಂದರೆ ಅನುಭವಿಸಬೇಕಾಯಿತು.</p>.<p>ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರು ಮುಷ್ಕರದ ಕಾರಣ ಹೆಚ್ಚುವರಿ ಬಸ್ಗಳನ್ನು ಓಡಿಸುವಂತೆ ಬೀದರ್ ವಿಭಾಗದ ಅಧಿಕಾರಿಗಳು ನೆರೆಯ ತೆಲಂಗಾಣ ಹಾಗೂ ಮಹಾರಾಷ್ಟ್ರದ ಸಾರಿಗೆ ನಿಗಮದ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದರಿಂದ ಶುಕ್ರವಾರ ಜಿಲ್ಲೆಯಲ್ಲಿ 235 ಮಾರ್ಗಗಳಲ್ಲಿ ನೆರೆ ರಾಜ್ಯದ ಬಸ್ಗಳು ಸಂಚರಿಸಿದವು.</p>.<p>ತೆಲಂಗಾಣದ 150 ಹಾಗೂ ಮಹಾರಾಷ್ಟ್ರದ 85 ಬಸ್ಗಳು ಸಂಚರಿಸಿವೆ. ರಸ್ತೆ ಸಾರಿಗೆ ಸಂಸ್ಥೆಯ 12 ಬಸ್ಗಳು ಹೈದರಾಬಾದ್, ಕಲಬುರ್ಗಿ ಹಾಗೂ ತಾಲ್ಲೂಕು ಕೇಂದ್ರಗಳಿಗೆ ಹೋಗಿ ಬಂದಿವೆ ಎಂದು ಎನ್ಇಕೆಎಸ್ಆರ್ಟಿಸಿ ಬೀದರ್ ವಿಭಾಗೀಯ ಸಂಚಾಲಕ ಚಂದ್ರಕಾಂತ ಫುಲೇಕರ್ ತಿಳಿಸಿದ್ದಾರೆ.</p>.<p>ತೆಲಂಗಾಣ ಸಾರಿಗೆ ಬಸ್ಗಳು ಪ್ರಯಾಣಿಕರಿಂದ ತುಂಬಿದ್ದವು. ಜಿಲ್ಲಾ ಕೇಂದ್ರದಿಂದ ಹೈದರಾಬಾದ್ ಹಾಗೂ ತಾಲ್ಲೂಕು ಕೇಂದ್ರಗಳಿಗೆ ಹೋಗಿ ಬರುವ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಲಾಗಿತ್ತು. ನಗರದ ಕೇಂದ್ರ ಬಸ್ ನಿಲ್ದಾಣ ಸೇರಿದಂತೆ ತಾಲ್ಲೂಕು ಕೇಂದ್ರಗಳಲ್ಲಿರುವ ಬಸ್ ನಿಲ್ದಾಣಗಳಲ್ಲೂ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.</p>.<p>ಬಸ್ ನಿಲ್ದಾಣಗಳಲ್ಲಿನ ಮಾರಾಟ ಮಳಿಗೆಗಳು ತೆರೆದುಕೊಂಡಿರಲಿಲ್ಲ. ಬಸ್ ನಿಲ್ದಾಣ ಒಳಗಡೆಯೂ ಆಟೋ ಸೇವೆಗೆ ಅವಕಾಶ ಕಲ್ಪಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಮುಷ್ಕರ ಗುರುವಾರ ಮೂರನೇ ದಿನಕ್ಕೆ ಪಾದಾರ್ಪಣೆ ಮಾಡಿದೆ. ಎನ್ಇಕೆಎಸ್ಆರ್ಟಿಸಿ ಬೀದರ್ ವಿಭಾಗದ ಅಧಿಕಾರಿಗಳ ಮನವಿ ಮೇರೆಗೆ ನೆರೆ ರಾಜ್ಯಗಳ ಬಸ್ಗಳು ಶುಕ್ರವಾರ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸಿದವು.</p>.<p>ತೆಲಂಗಾಣ, ಮಹಾರಾಷ್ಟ್ರ ಸಾರಿಗೆ, ಖಾಸಗಿ ಬಸ್ಗಳು ಹಾಗೂ ಕ್ರೂಸರ್ಗಳು ಬಸ್ ನಿಲ್ದಾಣಗಳಿಂದಲೇ ಸಂಚರಿಸಿದವು.</p>.<p>ಸಮೀಪದ ಪಟ್ಟಣಗಳಿಗೆ ಹೊರಟಿದ್ದ ಪ್ರಯಾಣಿಕರಿಗೆ ಯಾವುದೇ ರೀತಿಯ ಸಮಸ್ಯೆಯಾಗಲಿಲ್ಲ. ದೂರದ ನಗರಗಳಿಗೆ ಹೋಗ ಬೇಕಿದ್ದ ಪ್ರಯಾಣಿಕರು ತೊಂದರೆ ಅನುಭವಿಸಬೇಕಾಯಿತು.</p>.<p>ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರು ಮುಷ್ಕರದ ಕಾರಣ ಹೆಚ್ಚುವರಿ ಬಸ್ಗಳನ್ನು ಓಡಿಸುವಂತೆ ಬೀದರ್ ವಿಭಾಗದ ಅಧಿಕಾರಿಗಳು ನೆರೆಯ ತೆಲಂಗಾಣ ಹಾಗೂ ಮಹಾರಾಷ್ಟ್ರದ ಸಾರಿಗೆ ನಿಗಮದ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದರಿಂದ ಶುಕ್ರವಾರ ಜಿಲ್ಲೆಯಲ್ಲಿ 235 ಮಾರ್ಗಗಳಲ್ಲಿ ನೆರೆ ರಾಜ್ಯದ ಬಸ್ಗಳು ಸಂಚರಿಸಿದವು.</p>.<p>ತೆಲಂಗಾಣದ 150 ಹಾಗೂ ಮಹಾರಾಷ್ಟ್ರದ 85 ಬಸ್ಗಳು ಸಂಚರಿಸಿವೆ. ರಸ್ತೆ ಸಾರಿಗೆ ಸಂಸ್ಥೆಯ 12 ಬಸ್ಗಳು ಹೈದರಾಬಾದ್, ಕಲಬುರ್ಗಿ ಹಾಗೂ ತಾಲ್ಲೂಕು ಕೇಂದ್ರಗಳಿಗೆ ಹೋಗಿ ಬಂದಿವೆ ಎಂದು ಎನ್ಇಕೆಎಸ್ಆರ್ಟಿಸಿ ಬೀದರ್ ವಿಭಾಗೀಯ ಸಂಚಾಲಕ ಚಂದ್ರಕಾಂತ ಫುಲೇಕರ್ ತಿಳಿಸಿದ್ದಾರೆ.</p>.<p>ತೆಲಂಗಾಣ ಸಾರಿಗೆ ಬಸ್ಗಳು ಪ್ರಯಾಣಿಕರಿಂದ ತುಂಬಿದ್ದವು. ಜಿಲ್ಲಾ ಕೇಂದ್ರದಿಂದ ಹೈದರಾಬಾದ್ ಹಾಗೂ ತಾಲ್ಲೂಕು ಕೇಂದ್ರಗಳಿಗೆ ಹೋಗಿ ಬರುವ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಲಾಗಿತ್ತು. ನಗರದ ಕೇಂದ್ರ ಬಸ್ ನಿಲ್ದಾಣ ಸೇರಿದಂತೆ ತಾಲ್ಲೂಕು ಕೇಂದ್ರಗಳಲ್ಲಿರುವ ಬಸ್ ನಿಲ್ದಾಣಗಳಲ್ಲೂ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.</p>.<p>ಬಸ್ ನಿಲ್ದಾಣಗಳಲ್ಲಿನ ಮಾರಾಟ ಮಳಿಗೆಗಳು ತೆರೆದುಕೊಂಡಿರಲಿಲ್ಲ. ಬಸ್ ನಿಲ್ದಾಣ ಒಳಗಡೆಯೂ ಆಟೋ ಸೇವೆಗೆ ಅವಕಾಶ ಕಲ್ಪಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>