<p><strong>ಬೀದರ್:</strong> ‘ರಾಜ್ಯದಲ್ಲಿ ನಾಲ್ಕು ದಿನಗಳಲ್ಲಿ ಸಾರಿಗೆ ವ್ಯವಸ್ಥೆ ಸಹಜ ಸ್ಥಿತಿಗೆ ಬರಲಿದೆ. ಹೀಗಾಗಿ ಎಸ್ಮಾ ಜಾರಿ ಮಾಡುವ ಪ್ರಶ್ನೆಯೇ ಉದ್ಘವಿಸುವುದಿಲ್ಲ’ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದರು.</p>.<p>‘ಶುಕ್ರವಾರ 900 ಬಸ್, ಶನಿವಾರ 1500 ಸಂಚರಿಸಿವೆ. ಭಾನುವಾರ 2 ಸಾವಿರ ಬಸ್ಗಳು ಓಡಾಡಲಿವೆ. ಸೋಮವಾರದ ವೇಳೆ ನೌಕರರು ಕರ್ತವ್ಯದ ಮೇಲೆ ಹಾಜರಾಗುವ ವಿಶ್ವಾಸ ಇದೆ’ ಎಂದು ಹುಮನಾಬಾದ್ನಲ್ಲಿ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದರು.</p>.<p>‘ಕೆಲ ಚಾಲಕರು, ನಿರ್ವಾಹಕರು ಕರ್ತವ್ಯದ ಮೇಲೆ ಹಾಜರಾಗಲು ಸಿದ್ಧರಿದ್ದೇವೆ ಎಂದು ಕರೆಗಳನ್ನು ಮಾಡುತ್ತಿದ್ದಾರೆ. ನೌಕರರ ಸಂಘದ ಸದಸ್ಯರು ಬೆದರಿಕೆ ಹಾಕುತ್ತಿರುವ ಕಾರಣ ನೌಕರರು ಕೆಲಸಕ್ಕೆ ಹಾಜರಾಗಲು ಹಿಂಜರಿಯುತ್ತಿದ್ದಾರೆ. ನಾಲ್ಕು ದಿನಗಳ ಮುಷ್ಕರದಿಂದಾಗಿ ಈ ತಿಂಗಳು ಸಂಬಳ ಕೊಡಲು ಸಹ ನಿಗಮದ ಬಳಿ ಹಣ ಇಲ್ಲ. ಮತ್ತೆ ಸರ್ಕಾರ ನೆರವಿಗೆ ಬರಬೇಕಾಗಲಿದೆ’ ಎಂದರು.</p>.<p>‘ಮುಷ್ಕರದಿಂದ ಬಡವರು, ಮಧ್ಯಮ ವರ್ಗದವರು ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಯಗಾದಿ ಹಬ್ಬಕ್ಕೆ ಊರಿಗೆ ಹೋಗುವವರಿಗೂ ಸಮಸ್ಯೆ ಕಾಡುತ್ತಿದೆ. ಜನಸಾಮಾನ್ಯರ ಕಷ್ಟ ಅರಿತು ಸಾರಿಗೆ ನೌಕರರು ತಕ್ಷಣ ಕರ್ತವ್ಯಕ್ಕೆ ಹಾಜರಾಗಬೇಕು’ ಎಂದು ಮನವಿ ಮಾಡಿದರು.</p>.<p>‘ಬೆಂಕಿ ಹತ್ತಿದಾಗ ತೆನೆ ಸುಟ್ಟುಕೊಳ್ಳುತ್ತಿರುವವರು ರಾಜಕೀಯದಲ್ಲಿ ಇದ್ದಾರೆ. ಇದು ಒಳ್ಳೆಯದಲ್ಲ. ಇನ್ನೊಬ್ಬರ ಮುಖಕ್ಕೆ ಮಸಿ ಬಳಿಯಲು ಯತ್ನಿಸಿದರೆ ನಮ್ಮ ಕೈಗೆ ತಗುಲಿರುತ್ತದೆ ಎನ್ನುವ ಅರಿವು ನಮಗಿರಬೇಕು. ಡಿ.ಕೆ.ಶಿವಕುಮಾರ ಪ್ರತಿಭಟನಾಕಾರರಿಗೆ ಕುಮ್ಮಕ್ಕು ನೀಡುತ್ತಿದ್ದಾರೆ. ಸಾರಿಗೆ ನೌಕರರು ವಿವೇಚನೆಯಿಂದ ನಿರ್ಧಾರ ಕೈಗೊಳ್ಳಬೇಕು’ ಎಂದರು.</p>.<p>‘ಸರ್ಕಾರ, ಸಾರಿಗೆ ನೌಕರರಿಗೆ ಬೆದರಿಕೆ ಹಾಕಿಲ್ಲ. ಆದರೆ ಸಾರ್ವಜನಿಕರಿಗೆ ತೊಂದರೆಯಾದರೆ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಲಿದೆ’ ಎಂದು ಹೇಳಿದರು.</p>.<p><strong>‘ಮುಷ್ಕರದಲ್ಲಿ ರಾಜಕೀಯ ಬೇಡ’<br />ಬೆಂಗಳೂರು: </strong>ಸಾರಿಗೆ ನಿಗಮಗಳ ನೌಕರರು ನಡೆಸುತ್ತಿರುವ ಮುಷ್ಕರದ ವಿಚಾರದಲ್ಲಿ ವಿರೋಧ ಪಕ್ಷಗಳು ರಾಜಕೀಯ ಮಾಡಬಾರದು ಎಂದು ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.<br /><br />‘ಸಾರಿಗೆ ನೌಕರರ ಜತೆ ಸರ್ಕಾರ ಹಲವು ಸುತ್ತಿನ ಮಾತುಕತೆ ನಡೆಸಿದೆ. ಆದರೂ, ಕೆಲವರ ಕೈವಾಡದಿಂದ ಮುಷ್ಕರ ನಡೆಯುತ್ತಿದೆ. ಇಂತಹ ದುರಿತ ಕಾಲದಲ್ಲಿ ಕಾಂಗ್ರೆಸ್ ನಾಯಕರು ಸಮಸ್ಯೆ ಬಗೆಹರಿಸುವ ಬದಲಿಗೆ ರಾಜಕೀಯ ಹೇಳಿಕೆ ನೀಡುತ್ತಿರುವುದು ದುರ್ದೈವದ ಸಂಗತಿ’ ಎಂದವರು ತಿಳಿಸಿದ್ದಾರೆ.<br /><br />‘ಕೋಡಿಹಳ್ಳಿ ಚಂದ್ರಶೇಖರ್ ಜತೆ ಕೈಜೋಡಿಸಿರುವ ಕಾಂಗ್ರೆಸ್ ಮುಷ್ಕರದ ಬೆಂಕಿಯಲ್ಲಿ ಅಡುಗೆ ತಯಾರಿಸಲು ಹವಣಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗುತ್ತಿದೆ. ಕಂಡವರ ಮಕ್ಕಳನ್ನು ಬಾವಿಗೆ ತಳ್ಳಿ ಖುಷಿಪಡುವ ಪಟ್ಟಭದ್ರರನ್ನು ಬಂಧಿಸುವುದು ಅನಿವಾರ್ಯವಾಗಿತ್ತು’ ಎಂದು ಕೋಡಿಹಳ್ಳಿ ವಿರುದ್ಧದ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ‘ರಾಜ್ಯದಲ್ಲಿ ನಾಲ್ಕು ದಿನಗಳಲ್ಲಿ ಸಾರಿಗೆ ವ್ಯವಸ್ಥೆ ಸಹಜ ಸ್ಥಿತಿಗೆ ಬರಲಿದೆ. ಹೀಗಾಗಿ ಎಸ್ಮಾ ಜಾರಿ ಮಾಡುವ ಪ್ರಶ್ನೆಯೇ ಉದ್ಘವಿಸುವುದಿಲ್ಲ’ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದರು.</p>.<p>‘ಶುಕ್ರವಾರ 900 ಬಸ್, ಶನಿವಾರ 1500 ಸಂಚರಿಸಿವೆ. ಭಾನುವಾರ 2 ಸಾವಿರ ಬಸ್ಗಳು ಓಡಾಡಲಿವೆ. ಸೋಮವಾರದ ವೇಳೆ ನೌಕರರು ಕರ್ತವ್ಯದ ಮೇಲೆ ಹಾಜರಾಗುವ ವಿಶ್ವಾಸ ಇದೆ’ ಎಂದು ಹುಮನಾಬಾದ್ನಲ್ಲಿ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದರು.</p>.<p>‘ಕೆಲ ಚಾಲಕರು, ನಿರ್ವಾಹಕರು ಕರ್ತವ್ಯದ ಮೇಲೆ ಹಾಜರಾಗಲು ಸಿದ್ಧರಿದ್ದೇವೆ ಎಂದು ಕರೆಗಳನ್ನು ಮಾಡುತ್ತಿದ್ದಾರೆ. ನೌಕರರ ಸಂಘದ ಸದಸ್ಯರು ಬೆದರಿಕೆ ಹಾಕುತ್ತಿರುವ ಕಾರಣ ನೌಕರರು ಕೆಲಸಕ್ಕೆ ಹಾಜರಾಗಲು ಹಿಂಜರಿಯುತ್ತಿದ್ದಾರೆ. ನಾಲ್ಕು ದಿನಗಳ ಮುಷ್ಕರದಿಂದಾಗಿ ಈ ತಿಂಗಳು ಸಂಬಳ ಕೊಡಲು ಸಹ ನಿಗಮದ ಬಳಿ ಹಣ ಇಲ್ಲ. ಮತ್ತೆ ಸರ್ಕಾರ ನೆರವಿಗೆ ಬರಬೇಕಾಗಲಿದೆ’ ಎಂದರು.</p>.<p>‘ಮುಷ್ಕರದಿಂದ ಬಡವರು, ಮಧ್ಯಮ ವರ್ಗದವರು ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಯಗಾದಿ ಹಬ್ಬಕ್ಕೆ ಊರಿಗೆ ಹೋಗುವವರಿಗೂ ಸಮಸ್ಯೆ ಕಾಡುತ್ತಿದೆ. ಜನಸಾಮಾನ್ಯರ ಕಷ್ಟ ಅರಿತು ಸಾರಿಗೆ ನೌಕರರು ತಕ್ಷಣ ಕರ್ತವ್ಯಕ್ಕೆ ಹಾಜರಾಗಬೇಕು’ ಎಂದು ಮನವಿ ಮಾಡಿದರು.</p>.<p>‘ಬೆಂಕಿ ಹತ್ತಿದಾಗ ತೆನೆ ಸುಟ್ಟುಕೊಳ್ಳುತ್ತಿರುವವರು ರಾಜಕೀಯದಲ್ಲಿ ಇದ್ದಾರೆ. ಇದು ಒಳ್ಳೆಯದಲ್ಲ. ಇನ್ನೊಬ್ಬರ ಮುಖಕ್ಕೆ ಮಸಿ ಬಳಿಯಲು ಯತ್ನಿಸಿದರೆ ನಮ್ಮ ಕೈಗೆ ತಗುಲಿರುತ್ತದೆ ಎನ್ನುವ ಅರಿವು ನಮಗಿರಬೇಕು. ಡಿ.ಕೆ.ಶಿವಕುಮಾರ ಪ್ರತಿಭಟನಾಕಾರರಿಗೆ ಕುಮ್ಮಕ್ಕು ನೀಡುತ್ತಿದ್ದಾರೆ. ಸಾರಿಗೆ ನೌಕರರು ವಿವೇಚನೆಯಿಂದ ನಿರ್ಧಾರ ಕೈಗೊಳ್ಳಬೇಕು’ ಎಂದರು.</p>.<p>‘ಸರ್ಕಾರ, ಸಾರಿಗೆ ನೌಕರರಿಗೆ ಬೆದರಿಕೆ ಹಾಕಿಲ್ಲ. ಆದರೆ ಸಾರ್ವಜನಿಕರಿಗೆ ತೊಂದರೆಯಾದರೆ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಲಿದೆ’ ಎಂದು ಹೇಳಿದರು.</p>.<p><strong>‘ಮುಷ್ಕರದಲ್ಲಿ ರಾಜಕೀಯ ಬೇಡ’<br />ಬೆಂಗಳೂರು: </strong>ಸಾರಿಗೆ ನಿಗಮಗಳ ನೌಕರರು ನಡೆಸುತ್ತಿರುವ ಮುಷ್ಕರದ ವಿಚಾರದಲ್ಲಿ ವಿರೋಧ ಪಕ್ಷಗಳು ರಾಜಕೀಯ ಮಾಡಬಾರದು ಎಂದು ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.<br /><br />‘ಸಾರಿಗೆ ನೌಕರರ ಜತೆ ಸರ್ಕಾರ ಹಲವು ಸುತ್ತಿನ ಮಾತುಕತೆ ನಡೆಸಿದೆ. ಆದರೂ, ಕೆಲವರ ಕೈವಾಡದಿಂದ ಮುಷ್ಕರ ನಡೆಯುತ್ತಿದೆ. ಇಂತಹ ದುರಿತ ಕಾಲದಲ್ಲಿ ಕಾಂಗ್ರೆಸ್ ನಾಯಕರು ಸಮಸ್ಯೆ ಬಗೆಹರಿಸುವ ಬದಲಿಗೆ ರಾಜಕೀಯ ಹೇಳಿಕೆ ನೀಡುತ್ತಿರುವುದು ದುರ್ದೈವದ ಸಂಗತಿ’ ಎಂದವರು ತಿಳಿಸಿದ್ದಾರೆ.<br /><br />‘ಕೋಡಿಹಳ್ಳಿ ಚಂದ್ರಶೇಖರ್ ಜತೆ ಕೈಜೋಡಿಸಿರುವ ಕಾಂಗ್ರೆಸ್ ಮುಷ್ಕರದ ಬೆಂಕಿಯಲ್ಲಿ ಅಡುಗೆ ತಯಾರಿಸಲು ಹವಣಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗುತ್ತಿದೆ. ಕಂಡವರ ಮಕ್ಕಳನ್ನು ಬಾವಿಗೆ ತಳ್ಳಿ ಖುಷಿಪಡುವ ಪಟ್ಟಭದ್ರರನ್ನು ಬಂಧಿಸುವುದು ಅನಿವಾರ್ಯವಾಗಿತ್ತು’ ಎಂದು ಕೋಡಿಹಳ್ಳಿ ವಿರುದ್ಧದ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>