<p><strong>ಕಮಲನಗರ</strong> : ಶಿಕ್ಷಕರು ಹಾಗೂ ಪಾಲಕರು ಮಕ್ಕಳ ಮನಸ್ಸಿನ ಮೇಲೆ ಒತ್ತಡ ಹೇರುವ ಬದಲು, ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಉತ್ತಮ ಗೊಳಿಸಲು ಶಿಕ್ಷಕರು ಪ್ರಯತ್ನಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲಾ ಶಿಕ್ಷಣಾಧಿಕಾರಿ ಶಿವಕುಮಾರ ಸ್ವಾಮಿ ಹೇಳಿದರು.</p>.<p>ಪಟ್ಟಣದ ಡಾ.ಚನ್ನಬಸವ ಪಟ್ಟದ್ದೇವರ ಪ್ರೌಢ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗಾಗಿ ಪ್ರೌಢ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಒಂದು ದಿನದ ತರಬೇತಿ ಕಾರ್ಯಾಗಾರ ಹಾಗೂ ನೇರ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಔರಾದ್ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಟಿ.ಮಂಜುನಾಥ ಮಾತನಾಡಿ, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ. ಪರೀಕ್ಷೆಯ ಭಯ ಹೋಗಲಾಡಿಸಿ ಎಂದರು.</p>.<p>ಆಡಳಿತ ಅಧಿಕಾರಿ ಚನ್ನಬಸವ ಘಾಳೆ, ಕಮಲನಗರ ಕ್ಷೇತ್ರ ಶಿಕ್ಷಣಾಧಿಕಾರಿ ಶಿವಕಾಂತ ಹಣಮಶೆಟ್ಟೆ, ಸಂಪನ್ಮೂಲ ವ್ಯಕ್ತಿ ಸೈಯದ್ ಫರ್ಕುನ್ ಪಾಶಾ, ಭೀಮಪ್ಪ, ಶಶಿಕಾಂತ ಜೋಶಿ, ಸಂಪೂರ್ಣಾನಂದ, ಮನೋಹರ ಬಿರಾದಾರ ಮಾತನಾಡಿದರು.</p>.<p>ಶಿವಕುಮಾರ ಧರಣೆ, ರಾಜಕುಮಾರ ರಾಂಪುರೆ, ಆರ್.ವಿ.ಸೂರ್ಯವಂಶಿ, ಅಜಯ ಪಾಂಚಾಳ, ಪರಮೇಶ ಪಟವಾರಿ, ರಾಜಕುಮಾರ ವಡಗಾಂವೆ, ಮಹಾದೇವ ಚಾಂಗುಣೆ, ಸಂಜೀವಕುಮಾರ ಡೊಂಗ್ರೆ, ವಿಶಾಲ ಸೊಲ್ಲಪುರೆ, ಬಂಟಿ ರಾಂಪುರೆ ಇದ್ದರು.</p>.<p>ಚಂದ್ರಕಾಂತ ಗಳಗೆ ನಿರೂಪಿಸಿದರು. ಮೇಘರಾಜ ಪವಾರ ಸ್ವಾಗತಿಸಿದರು.ವಿಜಯಕುಮಾರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಮಲನಗರ</strong> : ಶಿಕ್ಷಕರು ಹಾಗೂ ಪಾಲಕರು ಮಕ್ಕಳ ಮನಸ್ಸಿನ ಮೇಲೆ ಒತ್ತಡ ಹೇರುವ ಬದಲು, ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಉತ್ತಮ ಗೊಳಿಸಲು ಶಿಕ್ಷಕರು ಪ್ರಯತ್ನಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲಾ ಶಿಕ್ಷಣಾಧಿಕಾರಿ ಶಿವಕುಮಾರ ಸ್ವಾಮಿ ಹೇಳಿದರು.</p>.<p>ಪಟ್ಟಣದ ಡಾ.ಚನ್ನಬಸವ ಪಟ್ಟದ್ದೇವರ ಪ್ರೌಢ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗಾಗಿ ಪ್ರೌಢ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಒಂದು ದಿನದ ತರಬೇತಿ ಕಾರ್ಯಾಗಾರ ಹಾಗೂ ನೇರ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಔರಾದ್ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಟಿ.ಮಂಜುನಾಥ ಮಾತನಾಡಿ, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ. ಪರೀಕ್ಷೆಯ ಭಯ ಹೋಗಲಾಡಿಸಿ ಎಂದರು.</p>.<p>ಆಡಳಿತ ಅಧಿಕಾರಿ ಚನ್ನಬಸವ ಘಾಳೆ, ಕಮಲನಗರ ಕ್ಷೇತ್ರ ಶಿಕ್ಷಣಾಧಿಕಾರಿ ಶಿವಕಾಂತ ಹಣಮಶೆಟ್ಟೆ, ಸಂಪನ್ಮೂಲ ವ್ಯಕ್ತಿ ಸೈಯದ್ ಫರ್ಕುನ್ ಪಾಶಾ, ಭೀಮಪ್ಪ, ಶಶಿಕಾಂತ ಜೋಶಿ, ಸಂಪೂರ್ಣಾನಂದ, ಮನೋಹರ ಬಿರಾದಾರ ಮಾತನಾಡಿದರು.</p>.<p>ಶಿವಕುಮಾರ ಧರಣೆ, ರಾಜಕುಮಾರ ರಾಂಪುರೆ, ಆರ್.ವಿ.ಸೂರ್ಯವಂಶಿ, ಅಜಯ ಪಾಂಚಾಳ, ಪರಮೇಶ ಪಟವಾರಿ, ರಾಜಕುಮಾರ ವಡಗಾಂವೆ, ಮಹಾದೇವ ಚಾಂಗುಣೆ, ಸಂಜೀವಕುಮಾರ ಡೊಂಗ್ರೆ, ವಿಶಾಲ ಸೊಲ್ಲಪುರೆ, ಬಂಟಿ ರಾಂಪುರೆ ಇದ್ದರು.</p>.<p>ಚಂದ್ರಕಾಂತ ಗಳಗೆ ನಿರೂಪಿಸಿದರು. ಮೇಘರಾಜ ಪವಾರ ಸ್ವಾಗತಿಸಿದರು.ವಿಜಯಕುಮಾರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>