<p><strong>ಚಿಟಗುಪ್ಪ: ‘</strong>ಪರಿಸರ ಮಾಲಿನ್ಯ ನಿಯಂತ್ರಿಸಲು ನಾಗರಿಕರು ಶ್ರಮಿಸಬೇಕು. ಸ್ವಯಂ ಜಾಗೃತರಾಗಬೇಕು ಅಂದಾಗಲೇ ಮುಂದಿನ ಪೀಳಿಗೆಗೆ ಶುದ್ಧ ಆರೋಗ್ಯಪೂರ್ಣ ಪರಿಸರ ಕೊಡಲು ಸಾಧ್ಯ’ ಎಂದು ಮೋಟಾರ್ ವಾಹನ ನಿರೀಕ್ಷಕರಾದ ಎಂ.ಡಿ.ಜಾಫರ್ ಸಾದೀಕ್ ಹೇಳಿದರು.</p>.<p>ತಾಲ್ಲೂಕಿನ ನಿರ್ಣಾ ಗ್ರಾಮದಲ್ಲಿ ಭಾಲ್ಕಿ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿ, ಗುರುಬಸವ ಮೋಟಾರ್ಸ್ ಆಶ್ರಯದಲ್ಲಿ ವಾಯು ಮಾಲಿನ್ಯ ಜಾಗೃತಿ ಮಾಸಾಚರಣೆ (ಮಾಲಿನ್ಯ ಅಳಿಸಿ ಜೀವ ಉಳಿಸಿ) ಕಾರ್ಯಕ್ರಮದ ಅಡಿಯಲ್ಲಿ ನಡೆದ ವಾಯುಮಾಲಿನ್ಯ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಮಸೀದಿ, ದೇವಸ್ಥಾನಗಳಿಗೆ ಹೋಗುವಾಗ ವಾಹನಗಳನ್ನು ಬಳಕೆ ಮಾಡುವುದರ ಮೇಲೆ ಕಡಿವಾಣ ಹಾಕುವ ಮೂಲಕ ಪರಿಸರಕ್ಕೆ ಕೊಡುಗೆ ನೀಡಬೇಕು. ವಾಹನಗಳಿಂದ ಹೊರಬರುವ ಮಾಲಿನ್ಯದಿಂದ ಮಕ್ಕಳ ಆರೋಗ್ಯ ಕೆಡುತ್ತಿದೆ. ಈ ಬಗ್ಗೆ ಎಚ್ಚರ ವಹಿಸಬೇಕು’ ಎಂದು ತಿಳಿಸಿದರು.</p>.<p>‘ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೇಟ್ ಬಳಕೆ ಮಾಡಬೇಕು. ಗೃಹ ಪ್ರವೇಶ, ಜನ್ಮದಿನ, ಮದುವೆ ಶುಭ ಸಮಾರಂಭಗಳಲ್ಲಿ ಉಡುಗೊರೆಯಾಗಿ ಸಸಿಗಳನ್ನು ನೀಡುವ ಹವ್ಯಾಸ ಬೆಳೆಸಿಕೊಳ್ಳಬೇಕು’ ಎಂದು ಹೇಳಿದರು.</p>.<p>ಗುರುಬಸವ ಮೋಟಾರ್ಸ್ ಮಾಲೀಕ ಕುಪೇಂದ್ರ ನೀಡಗುಂದೆ ಮಾತನಾಡಿ, ‘ನಾಗರಿಕರು ದ್ವೀಚಕ್ರ ವಾಹಾನದ ಎಂಜಿನ್ ಆಯಿಲ್ 4,000 ಕಿ.ಮೀಗೆ ಒಂದು ಬಾರಿ ಬದಲಾಯಿಸಬೇಕು’ ಎಂದು ಸಲಹೆ ನೀಡಿದರು.</p>.<p>ಶಿವರಾಜ್ ಜಮಾದಾರ್, ಅನೀಲಕುಮಾರ ಬೇಮಳಖೇಡಾ, ವೀರಪ್ಪಾ ಮುದನಾಳ, ಬಸವರಾಜ ತಾಳಮಡಗಿ, ಚನ್ನಪ್ಪ ಸ್ವಾಮಿ, ಅಶೋಕ ಕಾಗೆನೋರ್ ಇತರರು ಇದ್ದರು. ಕಾರ್ಯಕ್ರಮದಲ್ಲಿ ಹಲವು ವಾಹನ ಚಾಲಕರಿಗೆ ಸಸಿಗಳು ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಟಗುಪ್ಪ: ‘</strong>ಪರಿಸರ ಮಾಲಿನ್ಯ ನಿಯಂತ್ರಿಸಲು ನಾಗರಿಕರು ಶ್ರಮಿಸಬೇಕು. ಸ್ವಯಂ ಜಾಗೃತರಾಗಬೇಕು ಅಂದಾಗಲೇ ಮುಂದಿನ ಪೀಳಿಗೆಗೆ ಶುದ್ಧ ಆರೋಗ್ಯಪೂರ್ಣ ಪರಿಸರ ಕೊಡಲು ಸಾಧ್ಯ’ ಎಂದು ಮೋಟಾರ್ ವಾಹನ ನಿರೀಕ್ಷಕರಾದ ಎಂ.ಡಿ.ಜಾಫರ್ ಸಾದೀಕ್ ಹೇಳಿದರು.</p>.<p>ತಾಲ್ಲೂಕಿನ ನಿರ್ಣಾ ಗ್ರಾಮದಲ್ಲಿ ಭಾಲ್ಕಿ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿ, ಗುರುಬಸವ ಮೋಟಾರ್ಸ್ ಆಶ್ರಯದಲ್ಲಿ ವಾಯು ಮಾಲಿನ್ಯ ಜಾಗೃತಿ ಮಾಸಾಚರಣೆ (ಮಾಲಿನ್ಯ ಅಳಿಸಿ ಜೀವ ಉಳಿಸಿ) ಕಾರ್ಯಕ್ರಮದ ಅಡಿಯಲ್ಲಿ ನಡೆದ ವಾಯುಮಾಲಿನ್ಯ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಮಸೀದಿ, ದೇವಸ್ಥಾನಗಳಿಗೆ ಹೋಗುವಾಗ ವಾಹನಗಳನ್ನು ಬಳಕೆ ಮಾಡುವುದರ ಮೇಲೆ ಕಡಿವಾಣ ಹಾಕುವ ಮೂಲಕ ಪರಿಸರಕ್ಕೆ ಕೊಡುಗೆ ನೀಡಬೇಕು. ವಾಹನಗಳಿಂದ ಹೊರಬರುವ ಮಾಲಿನ್ಯದಿಂದ ಮಕ್ಕಳ ಆರೋಗ್ಯ ಕೆಡುತ್ತಿದೆ. ಈ ಬಗ್ಗೆ ಎಚ್ಚರ ವಹಿಸಬೇಕು’ ಎಂದು ತಿಳಿಸಿದರು.</p>.<p>‘ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೇಟ್ ಬಳಕೆ ಮಾಡಬೇಕು. ಗೃಹ ಪ್ರವೇಶ, ಜನ್ಮದಿನ, ಮದುವೆ ಶುಭ ಸಮಾರಂಭಗಳಲ್ಲಿ ಉಡುಗೊರೆಯಾಗಿ ಸಸಿಗಳನ್ನು ನೀಡುವ ಹವ್ಯಾಸ ಬೆಳೆಸಿಕೊಳ್ಳಬೇಕು’ ಎಂದು ಹೇಳಿದರು.</p>.<p>ಗುರುಬಸವ ಮೋಟಾರ್ಸ್ ಮಾಲೀಕ ಕುಪೇಂದ್ರ ನೀಡಗುಂದೆ ಮಾತನಾಡಿ, ‘ನಾಗರಿಕರು ದ್ವೀಚಕ್ರ ವಾಹಾನದ ಎಂಜಿನ್ ಆಯಿಲ್ 4,000 ಕಿ.ಮೀಗೆ ಒಂದು ಬಾರಿ ಬದಲಾಯಿಸಬೇಕು’ ಎಂದು ಸಲಹೆ ನೀಡಿದರು.</p>.<p>ಶಿವರಾಜ್ ಜಮಾದಾರ್, ಅನೀಲಕುಮಾರ ಬೇಮಳಖೇಡಾ, ವೀರಪ್ಪಾ ಮುದನಾಳ, ಬಸವರಾಜ ತಾಳಮಡಗಿ, ಚನ್ನಪ್ಪ ಸ್ವಾಮಿ, ಅಶೋಕ ಕಾಗೆನೋರ್ ಇತರರು ಇದ್ದರು. ಕಾರ್ಯಕ್ರಮದಲ್ಲಿ ಹಲವು ವಾಹನ ಚಾಲಕರಿಗೆ ಸಸಿಗಳು ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>