ಭಾನುವಾರ, 24 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಲಂಗಾಣದಲ್ಲಿ ಅಪಘಾತ: ಬೀದರ್‌ನ ಇಬ್ಬರು ಸಾವು

Published 18 ಆಗಸ್ಟ್ 2023, 16:00 IST
Last Updated 18 ಆಗಸ್ಟ್ 2023, 16:00 IST
ಅಕ್ಷರ ಗಾತ್ರ

ಔರಾದ್/ ಬೀದರ್: ತೆಲಂಗಾಣ ರಾಜ್ಯದ ಜಹಿರಾಬಾದ್ ಬಳಿ ಶುಕ್ರವಾರ ನಡೆದ ರಸ್ತೆ ಅಪಘಾತದಲ್ಲಿ ಬೀದರ್ ಜಿಲ್ಲೆಯ ಇಬ್ಬರು ಯುವಕರು ಮೃತಪಟ್ಟಿದ್ದಾರೆ.

ಔರಾದ್ ತಾಲ್ಲೂಕಿನ ನಾಗಮಾರಪಳ್ಳಿಯ ಅವಿರಾಜ ಚಂದ್ರಕಾಂತ ಘೋಡೆ (26) ಹಾಗೂ ಬೀದರ್‌ನ ಗುಂಪಾ ನಿವಾಸಿ ವೀರೇಶ (32) ಮೃತರು.

ಈ ಇಬ್ಬರು ಗೆಳೆಯರು ಬೆಳಿಗ್ಗೆ ಹೈದರಾಬಾದ್‌ಗೆ ಕಾರಿನಲ್ಲಿ ತೆರಳುತ್ತಿದ್ದಾಗ ಎದುರಿನಿಂದ ಬಂದ ಲಾರಿಗೆ ಕಾರು ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಜಹಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT