ನಂತರ ಶಾಸಕ ರಾಜಶೇಖರ್ ಪಾಟೀಲ ನೂತನ ಅಧ್ಯಕ್ಷೆ ಮಾಲಾಶ್ರೀ ಮತ್ತು ಉಪಾಧ್ಯಕ್ಷೆ ಸೌಭಾಗ್ಯವತಿ ಅವರನ್ನು ಸನ್ಮಾನಿಸಿ ಮಾತನಾಡಿ, ‘ಪಟ್ಟಣದ ಸಮಗ್ರ ಅಭಿಬೃದ್ಧಿಗೆ ಪಕ್ಷ ಭೇದ ಮರೆತು ಒಗ್ಗಟ್ಟಿನಿಂದ ಶ್ರಮಿಸಬೇಕು. ನಾಗರಿಕರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಪಟ್ಟಣದ ಅಗತ್ಯ ಕಾಮಗಾರಿಗಳಿಗೆ ಶಾಸಕರ ನಿಧಿಯಲ್ಲಿ ಹಣಕಾಸಿನ ನೆರವು ನೀಡಲಾಗುವುದು’ ಎಂದು ಭರವಸೆ ನೀಡಿದರು.