‘ಕ್ರೀಡಾ ಇಲಾಖೆಯ ಸುತ್ತೋಲೆ ಪ್ರಕಾರ, ಕ್ರೀಡಾ ವಸತಿ ಶಾಲೆಯಲ್ಲಿ ಇರಬೇಕಾದ ಯಾವುದೇ ರೀತಿಯ ಸೌಲಭ್ಯಗಳು ಇಲ್ಲ. ಕನಿಷ್ಠ ಬೆಡ್, ಕಾಟ್ಗಳು ಇಲ್ಲ. ಡ್ರೈಫ್ರುಟ್ಸ್, ಜ್ಯೂಸ್, ಮಾಂಸ, ಮೊಟ್ಟೆ ನಿಯಮಿತವಾಗಿ ಕೊಡುತ್ತಿಲ್ಲ. ಬಯೊಮೆಟ್ರಿಕ್ ಹಾಜರಾತಿ ಇಲ್ಲ. ಶುದ್ಧ ಕುಡಿಯುವ ನೀರು ಇಲ್ಲ. ದೇವರು ಕೊಟ್ಟರೂ ಪೂಜಾರಿ ಕೊಡಲಿಲ್ಲ’ ಎಂಬಂತಹ ಪರಿಸ್ಥಿತಿ ಇದೆ. ಕೂಡಲೇ ಮಕ್ಕಳಿಗೆ ಅಗತ್ಯ ಸೌಕರ್ಯ ಕಲ್ಪಿಸಕೊಡಲು ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗೌತಮ್ ಅರಳಿ ಅವರಿಗೆ ಸೂಚನೆ ಕೊಟ್ಟಿದ್ದೇನೆ’ ಎಂದು ಶಶಿಧರ ಕೋಸಂಬೆ ‘ಪ್ರಜಾವಾಣಿ’ಗೆ ತಿಳಿಸಿದರು.