ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಭಗವಂತ ಖೂಬಾ ನೇತೃತ್ವದಲ್ಲಿ ತಿರಂಗ ಯಾತ್ರೆ ಸಂಗಮ, ಬೀದರ್, ಹುಮನಾಬಾದ್ ಮಾರ್ಗವಾಗಿ ಇಲ್ಲಿಗೆ ಬಂದಾಗ ಬಸವೇಶ್ವರ ವೃತ್ತದಲ್ಲಿ ಭಗವಂತ ಖೂಬಾ ಮತ್ತು ಶರಣು ಸಲಗರ ಬೆಂಬಲಿಗರ ನಡುವೆ ತಳ್ಳಾಟ ಆಗಿದೆ.‘ಶರಣು ಸಲಗರ ಅವರನ್ನು ಕಡೆಗಣಿಸಲಾಗುತ್ತಿದೆ’ ಎಂದು ಕೆಲ ಕಾರ್ಯಕರ್ತರು ಖೂಬಾ ಅವರ ವಿರುದ್ಧ ಘೋಷಣೆ ಕೂಗಿದರು. ಅವರ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.