ಬೀದರ್ ಜಿಲ್ಲೆಯೂ ಮೂರನೇ ಹಂತದ ನಗರವಾಗಿದೆ. ಜಿಲ್ಲೆಯಲ್ಲಿ ಬೃಹತ್ ಕೈಗಾರಿಕೆಗಳಿಲ್ಲದ ಕಾರಣ ಯುವಕರು ತೆಲಂಗಾಣ ಹಾಗೂ ಮಹಾರಾಷ್ಟ್ರದ ಕಡೆಗೆ ಮುಖ ಮಾಡುತ್ತಿದ್ದಾರೆ. ಕೈಗಾರಿಕೋದ್ಯಮಕ್ಕೆ ಅವಶ್ಯಕವಾಗಿರುವ ರಾಷ್ಟ್ರೀಯ ಹೆದ್ದಾರಿ, ರೈಲ್ವೆ, ವಿಮಾನಯಾನ ಇತ್ಯಾದಿ ಮೂಲ ಸೌಕರ್ಯಗಳನ್ನು ಕೇಂದ್ರದಿಂದ ಅನುದಾನ ತಂದು ಜಿಲ್ಲೆಯಲ್ಲಿ ಮಾಡಿಸಿರುವೆ. ಹಿಂದಿನ ಸರ್ಕಾರದಲ್ಲಿ ಇನ್ವೆಸ್ಟ್ ಕರ್ನಾಟಕ ಬೆಂಗಳೂರು, ಹುಬ್ಬಳ್ಳಿ ಹಾಗೂ ಹೈದರಾಬಾದ್ನಲ್ಲಿ ನಡೆದ ಬಂಡವಾಳ ಹೂಡಿಕೆ ಕಾರ್ಯಕ್ರಮಗಳಲ್ಲಿ ಭಾಗವಹಿಸಿರುವೆ. ಹೂಡಿಕೆಗೆ ಮನವಿ ಮಾಡಿಕೊಂಡಾಗ ಕೆಲವು ಕಂಪನಿಗಳು ಮುಂದೆ ಬಂದಿದ್ದವು. ಒಪ್ಪಂದ ಕೂಡ ಆಗಿತ್ತು. ಕೋವಿಡ್ನಿಂದಾಗಿ ಎಲ್ಲ ಪ್ರಕ್ರಿಯೆಗಳು ನಿಂತು ಹೋಗಿದ್ದವು. ಆ ಕೈಗಾರಿಕೆಗಳ ಸ್ಥಾಪನೆಗೆ ಒತ್ತು ಕೊಡಬೇಕು ಎಂದು ಕೋರಿದರು.