ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್ ಜಿಲ್ಲೆಯಲ್ಲಿ ಇಂದು ಕೇಂದ್ರ ಸಚಿವ ಖೂಬಾ ಪ್ರವಾಸ

Last Updated 15 ಅಕ್ಟೋಬರ್ 2022, 14:38 IST
ಅಕ್ಷರ ಗಾತ್ರ

ಬೀದರ್‌: ಕೇಂದ್ರದ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರು ಜಿಲ್ಲೆಯಲ್ಲಿ ಭಾನುವಾರ (ಅ. 16) ಪ್ರವಾಸ ಕೈಗೊಳ್ಳಲಿದ್ದಾರೆ.

ಬೆಳಿಗ್ಗೆ 9.30ಕ್ಕೆ ಕರ್ನಾಟಕ ಕಾಲೇಜಿನಲ್ಲಿ ಯುವ ಉತ್ಸವ ಉದ್ಘಾಟನೆ, ಬೆಳಿಗ್ಗೆ 11ಕ್ಕೆ ಹುಲಸೂರಿನಲ್ಲಿ ಮಹಾರಾಷ್ಟ್ರ ಗಡಿಯಿಂದ ಹುಲಸೂರು ಕ್ರಾಸ್‍ವರೆಗಿನ 5.75 ಕಿ.ಮೀ. ರಾಷ್ಟ್ರೀಯ ಹೆದ್ದಾರಿ- 752ಕೆ ರಸ್ತೆ ಅಗಲೀಕರಣ, 4 ಸೇತುವೆ ಹಾಗೂ 6 ಬಸ್ ಶೆಲ್ಟರ್‍ಗಳ ನಿರ್ಮಾಣ ಕಾಮಗಾರಿಗೆ ಅಡಿಗಲ್ಲು ನೆರವೇರಿಸಲಿದ್ದಾರೆ.

ಮಧ್ಯಾಹ್ನ 2.10ಕ್ಕೆ ಬಸವಕಲ್ಯಾಣ ತಾಲ್ಲೂಕಿನ ಇಸ್ಲಾಂಪುರ ಗ್ರಾಮದ ಸ್ನೇಹಿತರ ಮನೆಗೆ ಭೇಟಿ ನೀಡುವರು. ಸಂಜೆ 4ಕ್ಕೆ ಹುಮನಾಬಾದ್ ಪಟ್ಟಣದಲ್ಲಿ ಮುಖ್ಯಮಂತ್ರಿ ಅವರ ಕಾರ್ಯಕ್ರಮದ ಸಿದ್ಧತೆ ಪರಿಶೀಲಿಸಲಿದ್ದಾರೆ. ಸಂಜೆ 5ಕ್ಕೆ ಹುಮನಾಬಾದ್‍ನಿಂದ ವಯಾ ಭಂಗೂರ ಕ್ರಾಸ್, ಜಹೀರಾಬಾದ್ ಮಾರ್ಗವಾಗಿ ಹೈದರಾಬಾದ್‍ಗೆ ತೆರಳಿ, ಅಲ್ಲಿಂದ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಸಚಿವರ ಕಚೇರಿ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT