<p><strong>ಖಟಕ ಚಿಂಚೋಳಿ: </strong>‘ನೂತನವಾಗಿ ಆರಂಭವಾ ಗಿರುವ ಬೀದರ್ ವಿಶ್ವವಿದ್ಯಾ ಲಯವನ್ನು ಮಾದರಿಯಾಗಿ ರೂಪಿಸಲು ಶೈಕ್ಷಣಿಕ ಕ್ಷೇತ್ರದ ಪ್ರತಿಯೊಬ್ಬರೂ ಸಹಕರಿಸಬೇಕು’ ಎಂದು ಬೀದರ್ ವಿಶ್ವವಿದ್ಯಾಲಯದ ನೂತನ ಕುಲಪತಿ ಪ್ರೊ. ಬಿ.ಎಸ್.ಬಿರಾದಾರ ಅವರು ಹೇಳಿದರು.</p>.<p>ಭಾಲ್ಕಿ ತಾಲ್ಲೂಕಿನ ಹಾಲಹಳ್ಳಿ ಸಮೀಪದ ಬೀದರ್ ವಿಶ್ವವಿದ್ಯಾಲಯದ ಕಚೇರಿಯಲ್ಲಿ ಕರ್ನಾಟಕ ಸರ್ಕಾರಿ ಕಾಲೇಜು ಅಧ್ಯಾಪಕರ ಸಂಘದಿಂದ (ಕೆಜಿಸಿಟಿಎ) ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.</p>.<p>25 ಬಿ.ಇಡಿ ಸೇರಿದಂತೆ ಸುಮಾರು 120 ಕಾಲೇಜುಗಳು ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಡಲಿವೆ. ಆಧುನಿಕ ತಂತ್ರಜ್ಞಾನ ಆಧಾರಿತ ಮತ್ತು ಕೌಶಲ ಪರಿಣಿತ ವಿದ್ಯಾರ್ಥಿಗಳನ್ನು ಹೊರತರುವ ಕಾರ್ಯ ವಿಶ್ವವಿದ್ಯಾಲಯದಿಂದ ಆಗಲಿದೆ ಎಂದು ಅವರು ತಿಳಿಸಿದರು.</p>.<p>ಕೆಜಿಸಿಟಿಎ ಗುಲಬರ್ಗಾ ವಿಶ್ವವಿ ದ್ಯಾಲಯದ ವಲಯ ಕಾರ್ಯದರ್ಶಿ ಡಾ. ವೀರಶೆಟ್ಟಿ ಮೈಲೂರಕರ್ ಅವರು, ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಸಂಘ ಸಂಪೂರ್ಣ ಸಹಕಾರ ನೀಡಲಿದೆ ಎಂದು ಹೇಳಿದರು.</p>.<p>ಚಿಟಗುಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ. ಸುರೇಂದರ್ ಸಿಂಗ್, ಸಹ ಪ್ರಾಧ್ಯಾಪಕರಾದ ದಶರಥ ನಯನೂರ, ಡಾ. ಶಿವಕುಮಾರ ಬಿರಾದಾರ, ರವೀಂದ್ರ ಟಿಳೆಕರ್, ಪ್ರೊ, ಗಬಾಡೆ, ಡಾ. ಶಿವನಂದ ರುಮ್ಮಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಖಟಕ ಚಿಂಚೋಳಿ: </strong>‘ನೂತನವಾಗಿ ಆರಂಭವಾ ಗಿರುವ ಬೀದರ್ ವಿಶ್ವವಿದ್ಯಾ ಲಯವನ್ನು ಮಾದರಿಯಾಗಿ ರೂಪಿಸಲು ಶೈಕ್ಷಣಿಕ ಕ್ಷೇತ್ರದ ಪ್ರತಿಯೊಬ್ಬರೂ ಸಹಕರಿಸಬೇಕು’ ಎಂದು ಬೀದರ್ ವಿಶ್ವವಿದ್ಯಾಲಯದ ನೂತನ ಕುಲಪತಿ ಪ್ರೊ. ಬಿ.ಎಸ್.ಬಿರಾದಾರ ಅವರು ಹೇಳಿದರು.</p>.<p>ಭಾಲ್ಕಿ ತಾಲ್ಲೂಕಿನ ಹಾಲಹಳ್ಳಿ ಸಮೀಪದ ಬೀದರ್ ವಿಶ್ವವಿದ್ಯಾಲಯದ ಕಚೇರಿಯಲ್ಲಿ ಕರ್ನಾಟಕ ಸರ್ಕಾರಿ ಕಾಲೇಜು ಅಧ್ಯಾಪಕರ ಸಂಘದಿಂದ (ಕೆಜಿಸಿಟಿಎ) ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.</p>.<p>25 ಬಿ.ಇಡಿ ಸೇರಿದಂತೆ ಸುಮಾರು 120 ಕಾಲೇಜುಗಳು ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಡಲಿವೆ. ಆಧುನಿಕ ತಂತ್ರಜ್ಞಾನ ಆಧಾರಿತ ಮತ್ತು ಕೌಶಲ ಪರಿಣಿತ ವಿದ್ಯಾರ್ಥಿಗಳನ್ನು ಹೊರತರುವ ಕಾರ್ಯ ವಿಶ್ವವಿದ್ಯಾಲಯದಿಂದ ಆಗಲಿದೆ ಎಂದು ಅವರು ತಿಳಿಸಿದರು.</p>.<p>ಕೆಜಿಸಿಟಿಎ ಗುಲಬರ್ಗಾ ವಿಶ್ವವಿ ದ್ಯಾಲಯದ ವಲಯ ಕಾರ್ಯದರ್ಶಿ ಡಾ. ವೀರಶೆಟ್ಟಿ ಮೈಲೂರಕರ್ ಅವರು, ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಸಂಘ ಸಂಪೂರ್ಣ ಸಹಕಾರ ನೀಡಲಿದೆ ಎಂದು ಹೇಳಿದರು.</p>.<p>ಚಿಟಗುಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ. ಸುರೇಂದರ್ ಸಿಂಗ್, ಸಹ ಪ್ರಾಧ್ಯಾಪಕರಾದ ದಶರಥ ನಯನೂರ, ಡಾ. ಶಿವಕುಮಾರ ಬಿರಾದಾರ, ರವೀಂದ್ರ ಟಿಳೆಕರ್, ಪ್ರೊ, ಗಬಾಡೆ, ಡಾ. ಶಿವನಂದ ರುಮ್ಮಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>