ನೌಬಾದ್ನ ಬಸವೇಶ್ವರ ವೃತ್ತದಿಂದ ಆರಂಭವಾದ ಓಟ ಪ್ರತಾಪನಗರ, ಶಿವನಗರ, ಅಕ್ಕಮಹಾದೇವಿ ಕಾಲೇಜು, ಕೆಇಬಿ ರಸ್ತೆ, ಏರ್ಫೋರ್ಸ್ ರಸ್ತೆ, ಓಲ್ಡ್ ಆರ್ಟಿಒ ಕಚೇರಿ ಮಾರ್ಗವಾಗಿ ಪ್ರಥಮ ದರ್ಜೆ ಕಾಲೇಜಿನ ಆವರಣಕ್ಕೆ ಬಂದು ಮುಕ್ತಾಯಗೊಂಡಿತು. ಕಲಬುರ್ಗಿ, ಬೀದರ್ ಹಾಗೂ ರಾಯಚೂರು ಜಿಲ್ಲೆಯ ಕ್ರೀಡಾಪಟುಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಲೋಕೋಪಯೋಗಿ ಇಲಾಖೆಯ ಸಹಾಯಕ ಎಂಜಿನಿಯರ್ ಸುನೀಲ್ ಆರ್., ಗುಲಬರ್ಗಾ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ಪ್ರಶಾಂತಕುಮಾರ ಡಿ. ಪಾಲ್ಗೊಂಡಿದ್ದರು. ಪ್ರಾಚಾರ್ಯ ಮನೋಹರ ಭಕ್ಕಾಳೆ ಅಧ್ಯಕ್ಷತೆ ವಹಿಸಿದ್ದರು. ದೇವಿದಾಸ ತುಮಕುಂಟೆ ಸ್ವಾಗತಿಸಿದರು. ಶಿವಕುಮಾರ ಉಪ್ಪೆ ನಿರೂಪಿಸಿದರು. ಶೀಲಾ ಎನ್.ಎಸ್. ವಂದಿಸಿದರು.