‘ರೈತರಿಗೆ ಹಣ ಪಾವತಿಸದೇ ನಿಯಮ ಉಲ್ಲಂಘನೆ ಮಾಡಲಾಗಿದೆ. ಆದ್ದರಿಂದ ಕಾರಣ ಕೇಳಿ ನೋಟಿಸ್ ನೀಡಲಾಗಿದ್ದು, ನೋಟಿಸ್ ತಲುಪಿದ ಕೂಡಲೇ ರೈತರ ಕಬ್ಬು ಬಿಲ್ಲು ತೀರುವಳಿ ಮಾಡಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ತಪ್ಪಿದಲ್ಲಿ ಕರ್ನಾಟಕ ಭೂಕಂದಾಯ ಕಾಯ್ದೆ 1964ರ ಅವಕಾಶಗಳ ಅನುಸಾರ ಮತ್ತು ಕಬ್ಬು ನಿಯಂತ್ರಣ ಆದೇಶ 1966ರ ಕಲಂ 3(8)ರ ಪ್ರಕಾರ ಬಾಕಿಯನ್ನು ಭೂಕಂದಾಯ ಬಾಕಿ ಎಂದು ಪರಿಗಣಿಸಿ ವಸೂಲಾತಿಗೆ ಕ್ರಮ ವಹಿಸಲಾಗುವುದೆಂದು ನೋಟಿಸ್ನಲ್ಲಿ ಎಚ್ಚರಿಕೆ ನೀಡಲಾಗಿದೆ’ ಎಂದು ಹೇಳಿದ್ದಾರೆ.